Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದೇಶದ ಪಾರಂಪರಿಕ ನಂಬಿಕೆ ವೈಜ್ಞಾನಿಕತೆಗೆ...

ದೇಶದ ಪಾರಂಪರಿಕ ನಂಬಿಕೆ ವೈಜ್ಞಾನಿಕತೆಗೆ ಪೂರಕವಾಗಿಲ್ಲ: ಡಾ.ಎಲ್.ಹನುಮಂತಯ್ಯ

ವಾರ್ತಾಭಾರತಿವಾರ್ತಾಭಾರತಿ20 Aug 2018 8:23 PM IST
share
ದೇಶದ ಪಾರಂಪರಿಕ ನಂಬಿಕೆ ವೈಜ್ಞಾನಿಕತೆಗೆ ಪೂರಕವಾಗಿಲ್ಲ: ಡಾ.ಎಲ್.ಹನುಮಂತಯ್ಯ

ಬೆಂಗಳೂರು, ಆ.20: ದೇಶದ ಪಾರಂಪರಿಕ ನಂಬಿಕೆಗಳು ವೈಜ್ಞಾನಿಕತೆಗೆ ಪೂರಕವಾಗಿಲ್ಲ. ಹೀಗಾಗಿ ಜನತೆಯಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದು ಸವಾಲಿನ ಕೆಲಸವೆಂದು ಸಂಸದ ಡಾ.ಎಲ್.ಹನುಮಂತಯ್ಯ ಅಭಿಪ್ರಾಯಿಸಿದರು.

ಸೋಮವಾರ ರಾಜ್ಯ ಸಮನ್ವಯ ಸಮಿತಿ ಹಾಗೂ ನ್ಯಾಷನಲ್ ಕಾಲೇಜು ವತಿಯಿಂದ ನಗರದ ಎನ್.ಎಚ್.ಸಭಾಂಗಣದಲ್ಲಿ ಆಯೋಜಿಸಿದ್ದ ‘ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ವಿಜ್ಞಾನಿಗಳು ವ್ಯೋಮನೌಕೆಯನ್ನು ಆಕಾಶಕ್ಕೆ ಹಾರಿಸುವ ಮುನ್ನ, ಜ್ಯೋತಿಷಿಗಳ ಬಳಿ ಕಾಲವನ್ನು ಕೇಳುವ ಪರಂಪರೆ ಹೊಂದಿದ್ದಾರೆ. ಅಂದರೆ, ನಮ್ಮ ದೇಶದ ಪಾರಂಪರಿಕ ನಂಬಿಕೆಗಳು ವಿಜ್ಞಾನ ಹಾಗೂ ವೈಜ್ಞಾನಿಕತೆಗೆ ಎಷ್ಟು ಸವಾಲಾಗಿದೆ ಎಂಬುದು ಅರ್ಥವಾಗುತ್ತದೆ ಎಂದು ಅವರು ತಿಳಿಸಿದರು.

ದೇಶದ ಪ್ರತಿಯೊಬ್ಬ ಪ್ರಜೆಯು ವೈಜ್ಞಾನಿಕ ಮನಸ್ಥಿತಿ, ಮಾನವೀಯತೆ ಬೆಳೆಸಿಕೊಳ್ಳಬೇಕೆಂಬುದೆ ನಮ್ಮ ಸಂವಿಧಾನದ ಆಶಯವಾಗಿದೆ. ಆದರೆ, ಮೂಲಭೂತ ವಾದಿ ಸಂಘಟನೆಗಳು ಇಂತಹ ಆಶಯಗಳಿಗೆ ವಿರುದ್ಧವಾಗಿ ದೇಶದಲ್ಲಿ ಶ್ರೇಣೀಕರಣ ವ್ಯವಸ್ಥೆಗೆ ಪೂರಕವಾದ, ಜಾತೀಯತೆಯನ್ನು ಪೋಷಿಸುವಂತಹ ಮನುಸ್ಮತಿ ಜಾರಿಯಾಗಬೇಕೆಂದು ಬಯಸುತ್ತಿದ್ದಾರೆ ಎಂದು ಅವರು ವಿಷಾದಿಸಿದರು.

ದೇಶದಲ್ಲಿ ಮೂಲಭೂತವಾದಿ ಗುಣಗಳನ್ನು ಟೀಕಿಸುವ, ವಿಶ್ಲೇಷಿಸುವ ಪರಂಪರೆ ಚಾರ್ವಾಕರ ಕಾಲದಿಂದಲೂ ನಿರಂತರವಾಗಿ ಸಾಗಿ ಬಂದಿದೆ. ಆ ಕಾರಣಕ್ಕಾಗಿ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಭದ್ರವಾಗಿ ಉಳಿದಿದೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಟೀಕಿಸುವವರನ್ನು, ವಿಮರ್ಶಿಸುವವರನ್ನು ಹಲ್ಲೆ ಹಾಗೂ ಕೊಲ್ಲುವಂತಹ ಮನಸ್ಥಿತಿ ರೂಪಗೊಳ್ಳುತ್ತಿರುವುದು ಅಪಾಯಕಾರಿಯಾದದ್ದೆಂದು ಅವರು ಕಳವಳ ವ್ಯಕ್ತಪಡಿಸಿದರು.

ಅಖಿಲ ಭಾರತ ಜನ ವಿಜ್ಞಾನ ಸಂಘಟನೆಗಳ ಜಾಲದ ಅಧ್ಯಕ್ಷ ಡಾ.ಎಸ್.ಚಟರ್ಜಿ ಮಾತನಾಡಿ, ಇಂದು ದೇಶದಲ್ಲಿ ಪ್ರಶ್ನೆ ಮಾಡುವವರ ಮೇಲೆ, ವೈಜ್ಞಾನಿಕ ಚಿಂತನೆಯಡಿ ಕಾರ್ಯನಿರ್ವಹಿಸುವವರ ಮೇಲೆ ಹಲ್ಲೆ, ಕೊಲೆ ಮಾಡುವಂತಹ ಗುಂಪುಗಳು ಪ್ರಬಲವಾಗುತ್ತಿವೆ. ಇಂತಹ ಸಂದರ್ಭದಲ್ಲಿ ವೈಜ್ಞಾನಿಕ ಮನೋಭಾವ ಚಿಂತನೆ, ವ್ಯಕ್ತಿಗೆ, ಹಳ್ಳಿಗೆ, ನಗರಕ್ಕೆ ರಾಜ್ಯ ಹಾಗೂ ದೇಶಕ್ಕೆ ಯಾಕೆ ಅಗತ್ಯವಾಗಿದೆ ಎಂಬುದನ್ನು ತಿಳಿಸುವ ಅಗತ್ಯವಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ವಿವಿ ಭೌತಶಾಸ್ತ್ರ ಪ್ರಾಧ್ಯಾಪಕ ಪ್ರೊ.ಶರ್ಬರಿ ಭಟ್ಟಾಚಾರ್ಯ, ಗಾಂಧಿ ಸೆಂಟರ್ ಆಫ್ ಸೈನ್ಸ್ ಅಂಡ್ ಹ್ಯೂಮನ್ ವ್ಯಾಲ್ಯುಸ್‌ನ ನಿರ್ದೇಶಕ ಪ್ರೊ.ಎಸ್.ಬಾಲಚಂದ್ರರಾವ್, ಅಖಿಲ ಕರ್ನಾಟಕ ವಿಚಾರವಾದಿ ಸಂಘದ ಅಧ್ಯಕ್ಷ ಎ.ಎಸ್.ನಟರಾಜ್, ಮಾನವ ಬಂಧುತ್ವ ವೇದಿಕೆಯ ಸಂಚಾಲಕ ಎನ್.ಅನಂತನಾಯಕ್, ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನದ ಸಂಚಾಲಕ ಈ.ಬಸವರಾಜು ಮತ್ತಿತರರಿದ್ದರು.

ದೇಶದಲ್ಲಿ ಮಹಾಭಾರತ, ರಾಮಾಯಣ ಗ್ರಂಥವನ್ನು ಡಾ.ಬಿ.ಆರ್.ಅಂಬೇಡ್ಕರ್ ವಿಮರ್ಶೆ ಮಾಡಿದಷ್ಟು ಮತ್ಯಾರು ಮಾಡಿಲ್ಲ. ಒಂದು ವೇಳೆ ಧಾರ್ಮಿಕ ಗ್ರಂಥಗಳನ್ನು ವಿಮರ್ಶೆ ಮಾಡುವವರನ್ನು ಕೊಲ್ಲುವುದೆ ಪರಿಹಾರವಾಗಿದ್ದರೆ, ಡಾ.ಬಿ.ಆರ್.ಅಂಬೇಡ್ಕರ್‌ರವರೆ ಮೊದಲು ಕೊಲೆಯಾಗಬೇಕಿತ್ತು. ಆದರೆ, ಭಾರತೀಯ ಸಮಾಜದಲ್ಲಿ ವಿಮರ್ಶೆಗೆ ಮುಕ್ತ ಅವಕಾಶವಿದೆ. ಇತ್ತೀಚಿನ ಕೆಲವು ಮೂಲಭೂತವಾದಿ ಗುಂಪುಗಳು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗಿ ಬೆಳೆಯುತ್ತಿವೆ. ಇವುಗಳಿಗೆ ಕಡಿವಾಣ ಹಾಕಬೇಕಿದೆ.

-ಡಾ.ಎಲ್.ಹನುಮಂತಯ್ಯ ಸಂಸದ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X