Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕವಿತೆಗೆ ಜೀವಂತ ಸ್ಪರ್ಶ ನೀಡಿದ ನಾಡಿಗ್:...

ಕವಿತೆಗೆ ಜೀವಂತ ಸ್ಪರ್ಶ ನೀಡಿದ ನಾಡಿಗ್: ಪ್ರೊ.ಚಂಪಾ

ವಾರ್ತಾಭಾರತಿವಾರ್ತಾಭಾರತಿ20 Aug 2018 10:05 PM IST
share
ಕವಿತೆಗೆ ಜೀವಂತ ಸ್ಪರ್ಶ ನೀಡಿದ ನಾಡಿಗ್: ಪ್ರೊ.ಚಂಪಾ

ಬೆಂಗಳೂರು, ಆ.20: ಕವಿ ಡಾ.ಸುಮತೀಂದ್ರ ನಾಡಿಗ್ ಮೊದಲ ಬಾರಿಗೆ ಕವಿತೆಗೆ ಜೀವಂತ ಸ್ಪರ್ಶ ನೀಡುವ ಮೂಲಕ ಅಕ್ಷರಗಳ ಮೇಲೆ ವ್ಯಾಮೋಹ ಮೂಡಿಸಿದ್ದವರು ಎಂದು ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ನೆನಪಿಸಿಕೊಂಡರು.

ಸೋಮವಾರ ನಗರದ ಸುರಾನಾ ಕಾಲೇಜಿನಲ್ಲಿ ಡಾ.ಸುಮತೀಂದ್ರ ನಾಡಿಗ್ ಸ್ನೇಹ ಬಳಗ ವತಿಯಿಂದ ಏರ್ಪಡಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಒಂದು ಪದಪುಂಜದಲ್ಲಿ, ಚೌಕಟ್ಟಿನಲ್ಲಿ ನಾಡಿಗ್ ಅವರನ್ನು ನೋಡಲು ಸಾಧ್ಯವಿಲ್ಲ. ಅವರ, ಸ್ನೇಹದಲ್ಲಿ ನಗೆ, ತುಂಟತನ, ಪ್ರೀತಿ, ವಾತ್ಸಲ್ಯ, ಕಾಳಜಿ ಇತ್ತು. ಅವರ ಪದ್ಯ ಓದುವಂತಿರಲಿಲ್ಲ, ಕುಣಿಸುವಂತಿತ್ತು ಎಂದು ಸ್ಮರಿಸಿದರು.

ಬೇಂದ್ರೆಯವರ ಪದ್ಯವನ್ನು ತಮ್ಮೊಳಗೆ ಅನುಕರಣೆ ಮಾಡುತ್ತಿದ್ದರು. ಕಾವ್ಯದ ಬಗ್ಗೆ ಉಮೇದು ಹೊಂದಿದ್ದರು. ಶಬ್ದದ ಬೀಜವನ್ನು ಹುಡುಕಿ ತೆಗೆಯುತ್ತಿದ್ದ ನಾಡಿಗ್, ಸ್ನೇಹಿತರೆಲ್ಲರಿಗೂ ಒಂದೊಂದು ಕವನವನ್ನು ಕೊಟ್ಟು ಅದರ ಬಗ್ಗೆ ಮಾತನಾಡಬೇಕೆಂದು ಹೇಳುತ್ತಿದ್ದರು ಎಂದು ಚಂಪಾ ಅವರೊಂದಿಗಿನ ಸ್ನೇಹವನ್ನು ಮೆಲುಕು ಹಾಕಿದರು.

ಸಂಗೀತ, ಸಾಹಿತ್ಯದಲ್ಲಿ ಸಂವೇದನಾಶೀಲರಾಗಿದ್ದ ನಾಡಿಗ್, ಇತ್ತೀಚಿಗೆ ಕನ್ನಡದ ಯುವಕರಲ್ಲಿ ಭಿನ್ನವಾದ ಕವಿತ್ವದ ಗುಣಗಳು ಕಾಣುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸುತ್ತಿದ್ದರು. ಕೊನೆಯ ದಿನಗಳಲ್ಲಿ ಅವರ ರಾಜಕೀಯ ನಿಲುವುಗಳಲ್ಲಿ ಹಲವು ಭಿನ್ನಾಭಿಪ್ರಾಯಗಳಿದ್ದವು. ನಮ್ಮಿಬ್ಬರಲ್ಲಿನ ಚಿಂತನೆಗಳು, ಭಿನ್ನವಾಗಿರಬಹುದು. ಆದರೆ, ನಮ್ಮ ನಡುವೆಯಿದ್ದ ಮನುಷ್ಯ ಸಂಬಂಧ ಹಾಳಾಗಲು ಬಿಟ್ಟಿರಲಿಲ್ಲ ಎಂದು ಚಂಪಾ ಹೇಳಿದರು.

ಮಾಜಿ ವಿಧಾನ ಪರಿಷತ್ತು ಸದಸ್ಯ ಡಿ.ಎಸ್.ವೀರಯ್ಯ ಮಾತನಾಡಿ, ಹಿರಿಯ ಸಾಹಿತಿ ದಲಿತ ಕವಿ ಸಿದ್ದಲಿಂಗಯ್ಯ ವಿಧಾನಪರಿಷತ್ತು ಸದಸ್ಯರಾಗಲು ನಾಡಿಗ್ ಪ್ರಮುಖ ಕಾರಣಕರ್ತರಾಗಿದ್ದರು. ದಲಿತರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು. ನಾಡಿನ ಶಕ್ತಿಯಾಗಿದ್ದ ನಾಡಿಗ್, ಮಕ್ಕಳ ಜತೆ ಮಗುವಾಗಿ, ಹಿರಿಯರ ಜತೆ ಕಿರಿಯರಾಗಿ, ಎಲ್ಲರನ್ನೂ ನಗಿಸುತ್ತ, ತಾವು ನಗುತ್ತ, ಜನಮುಖಿ ಜೀವನ ನಡೆಸಿದರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಾಹಿತಿ ನಾಡೋಜ ಹಂ.ಪ.ನಾಗರಾಜಯ್ಯ, ಪ್ರೊ.ಕೆ.ಇ. ರಾಧಾಕೃಷ್ಣ, ಕತೆಗಾರ ದಿವಾಕರ್ ಸೇರಿದಂತೆ ನಾಡಿಗ್ ಕುಟುಂಬದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X