Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದ್ಯಾರ್ಥಿಗಳು, ಹೆತ್ತವರಲ್ಲಿ ಜಾಗೃತಿ...

ವಿದ್ಯಾರ್ಥಿಗಳು, ಹೆತ್ತವರಲ್ಲಿ ಜಾಗೃತಿ ಮೂಡಿಸಿ: ನ್ಯಾ.ವೆಂಕಟೇಶ್ ನಾಯ್ಕಾ

ಮಾದಕ ವ್ಯಸನ ವಿರೋಧಿ ಅಭಿಯಾನ; ಸೆಲ್ಫಿ ವಿದ್ ಸಹಿ ಸಂಗ್ರಹ

ವಾರ್ತಾಭಾರತಿವಾರ್ತಾಭಾರತಿ22 Aug 2018 8:22 PM IST
share
ವಿದ್ಯಾರ್ಥಿಗಳು, ಹೆತ್ತವರಲ್ಲಿ ಜಾಗೃತಿ ಮೂಡಿಸಿ: ನ್ಯಾ.ವೆಂಕಟೇಶ್ ನಾಯ್ಕಾ

ಉಡುಪಿ, ಆ.21: ಯುವಜನತೆ ಹಾಗೂ ವಿದ್ಯಾರ್ಥಿಗಳು ಇಂದು ಮಾದಕ ವಸ್ತುಗಳಿಗೆ ಹೆಚ್ಚೆಚ್ಚು ದಾಸರಾಗುತಿದ್ದಾರೆ. ಈ ಪಿಡುಗನ್ನು ತಡೆಗಟ್ಟಲು ಇವುಗಳ ಕುರಿತು ವಿದ್ಯಾರ್ಥಿಗಳು ಹಾಗೂ ಹೆತ್ತವರಲ್ಲಿ ಅರಿವು ಮತ್ತು ಜಾಗೃತಿಯನ್ನು ಮೂಡಿಸಬೇಕಾಗಿದೆ ಎಂದು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ. ವೆಂಕಟೇಶ್ ನಾಯ್ಕಾ ಹೇಳಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಉಡುಪಿ ಪ್ರೆಸ್‌ಕ್ಲಬ್‌ಗಳ ಸಹಯೋಗದೊಂದಿಗೆ ಮಾದಕ ವ್ಯಸನ ವಿರೋಧಿ ಮಾಸಾಚಾರಣೆಯ ಅಂಗವಾಗಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಗರದ ಬಿಗ್‌ಬಜಾರ್‌ನಲ್ಲಿ ಆಯೋಜಿಸಿದ್ದ ‘ಸೆಲ್ಫಿ ವಿದ್ ಸಹಿ ಸಂಗ್ರಹ ಜಾಗೃತಿ ಅಭಿಯಾನ’ವನ್ನು ಮಾದಕ ವ್ಯಸನದ ವಿರುದ್ಧ ಸಂದೇಶ ಬರೆದು ಸಹಿ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡುತಿದ್ದರು.

ಮಾದಕ ವಸ್ತುಗಳ ವ್ಯಸನ ಇಂದು ದೇಶದ ಬಹುದೊಡ್ಡ ಪಿಡುಗು. ಇದನ್ನು ಪರಿಣಾಮಕಾರಿಯಾಗಿ ತಡೆಗಟ್ಟದಿದ್ದರೆ ದೇಶದ ಆರ್ಥಿಕತೆ ಹಾಗೂ ಸಮಾಜಕ್ಕೆ ಬಹುದೊಡ್ಡ ನಷ್ಟವಾಗಲಿದೆ. ಮಾದಕ ವ್ಯಸನದ ವಿರುದ್ಧ 1940ರಲ್ಲಿ ಜಾರಿಯಾದ ಡ್ರಗ್ಸ್ ಮತ್ತು ಕಾಸ್ಮಟಿಕ್ ಆ್ಯಕ್ಟ್ ಹಾಗೂ 1988ರ ಎನ್‌ಡಿಪಿಎಸ್ ಆ್ಯಕ್ಟ್‌ನ ಉಪಬಂದಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಅಭಿಪ್ರಾಯಪಟ್ಟರು.

ಮಾದಕ ವ್ಯಸನಿಗಳ ಸಂಖ್ಯೆ ಇಂದು ಹೆಚ್ಚಾಗುತ್ತಿದೆ. ಇಂಥವರ ವಿರುದ್ಧ ಪ್ರಕರಣ ದಾಖಲಿಸಬೇಕಾಗಿದೆ. ಈ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಪೊಲೀಸರು ಸ್ತುತ್ಯಾರ್ಹ ಕಾರ್ಯ ಮಾಡುತಿದ್ದಾರೆ. ಮಾದಕ ವ್ಯಸನಕ್ಕೆ ತುತ್ತಾಗುವ ಯುವಕರು, ಅನಾಥರು, ನಿರ್ಲಕ್ಷಕ್ಕೊಳಗಾದ ಮಕ್ಕಳಿಗೆ ಪುನರ್ವಸತಿ ಕಲ್ಪಿಸಬೇಕಾಗಿದೆ ಎಂದರು.

ಶಾಲಾ-ಕಾಲೇಜುಗಳಲ್ಲಿ ಇಂಥ ಕಾರ್ಯಕ್ರಮಗಳನ್ನು ಹೆಚ್ಚೆಚ್ಚು ಸಂಘಟಿಸಿ ಅರಿವು ಮೂಡಿಸಬೇಕು. ಅದೇ ರೀತಿ ಹೆತ್ತವರನ್ನೂ ಪಿಡುಗಿನ ವಿರುದ್ಧ ಜಾಗೃತ ಗೊಳಿಸಬೇಕು ಎಂದು ವೆಂಕಟೇಶ್ ನಾಯ್ಕೆ ನುಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮಾತನಾಡಿ, ಇಂಥ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನು ಒಳಗೊಳ್ಳುವ ಅಭಿಯಾನಗಳ ಮೂಲಕ ನಿರ್ದಿಷ್ಟ ಸಂದೇಶಗಳು ಬೇಗನೇ ಜನರನ್ನು ತಲುಪಲು ಸಾಧ್ಯವಿದೆ. ಸಮಸ್ಯೆಯ ತೀವ್ರತೆ ಕೂಡಲೇ ಜನರಿಗೆ ಮನದಟ್ಟಾಗುತ್ತದೆ ಎಂದರು.

ಮತ್ತೊಬ್ಬ ಮುಖ್ಯ ಅತಿಥಿ ತುಳು ರಂಗಭೂಮಿ ನಟ ಹಾಗೂ ನಿರ್ದೇಶಕ ಸುಂದರ ರೈ ಮಂದಾರ ಅವರು ಹಸ್ತದ ಬಣ್ಣ ಹಚ್ಚುವ ಮೂಲಕ ಸೆಲ್ಫಿ ವಿದ್ ಸಹಿ ಸಂಗ್ರಹವನ್ನು ಉದ್ಘಾಟಿಸಿ ಮಾತನಾಡಿ, ಹದಿಹರೆಯದಲ್ಲಿ ಯುವಜನತೆ ದಾರಿ ತಪ್ಪಿ ದುಷ್ಟ ಹಾದಿಯತ್ತ ಆಕರ್ಷಿತರಾಗುವ ಮೂಲಕ ಬದುಕನ್ನು ಹಾಳು ಮಾಡಿಕೊಳ್ಳುತಿದ್ದು, ಇದನ್ನು ತಡೆಯಲು ಇಂಥ ಅಭಿಯಾನಗಳು ಉಪಯುಕ್ತ ಎಂದರು.

ಕಾರ್ಯಕ್ರಮದಲ್ಲಿ ಎಎಸ್ಪಿ ಕುಮಾರಚಂದ್ರ, ಮಂಗಳೂರಿನ ಉದ್ಯಮಿ ಜೊಯೆಲ್ ಸೋನ್ಸ್, ಬಿಗ್ ಬಜಾರ್‌ನ ಮ್ಯಾನೇಜರ್ ರಾಘವೇಂದ್ರ ಕೆ. ಉಪಸ್ಥಿತರಿದ್ದರು. ಪತ್ರಕರ್ತೆ ಪಲ್ಲವಿ ಸಂತೋಷ್ ಅತಿಥಿಗಳನ್ನು ಸ್ವಾಗತಿಸಿದರೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ಬಿ.ನಿಂಬರಗಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ನಾಗರಾಜ್ ರಾವ್ ಕಾರ್ಯಕ್ರಮವನ್ನು ನಿರೂಪಿಸಿದರೆ, ಅಶೋಕ್ ಪೂಜಾರಿ ವಂದಿಸಿದರು.

ಮಾದಕ ವ್ಯಸನ ವಿರೋಧಿ ಸಹಿ ಸಂಗ್ರಹ ಅಭಿಯಾನದಲ್ಲಿ ನೂರಾರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತಮ್ಮ ಸಹಿ ಹಾಕಿದ್ದಲ್ಲದೇ, ಹಸ್ತದ ಬಣ್ಣವನ್ನು ಹಚ್ಚಿ ಬೆಂಬಲ ಘೋಷಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X