Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಯೋವೃದ್ಧೆ ಕೊಲೆ ಪ್ರಕರಣ: ಆರೋಪಿ ಖುಲಾಸೆ

ವಯೋವೃದ್ಧೆ ಕೊಲೆ ಪ್ರಕರಣ: ಆರೋಪಿ ಖುಲಾಸೆ

ವಾರ್ತಾಭಾರತಿವಾರ್ತಾಭಾರತಿ23 Aug 2018 8:04 PM IST
share

ಮಂಗಳೂರು, ಆ. 23: ನಗರದ ಕುದ್ರೋಳಿ ಅಳಕೆಯ ಭೋಜರಾವ್ ಲೇನ್‌ನ ಗುಜರಾತಿ ಶಾಲೆಯ ಸಮೀಪ ಪ್ರಗತಿ ಸರ್ವೀಸ್ ಸ್ಟೇಷನ್ ಎದುರಿನ ಮನೆಯಲ್ಲಿ 2014ರಲ್ಲಿ ನಡೆದ ವಯೋವೃದ್ಧೆ ಸುಶೀಲ ಬೆನ್ (72) ಕೊಲೆ ಪ್ರಕರಣದ ಆರೋಪಿ ಬೆಳಗಾವಿಯ ಸಿದ್ದಪ್ಪ (32) ನನ್ನು ಮಂಗಳೂರಿನ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಖುಲಾಸೆಗೊಳಿಸಿದೆ.

2014 ಜು.31ರಂದು ರಾತ್ರಿ ಆರೋಪಿಯು ಮನೆಯ ಹಿಂಬಾಗಿಲು ಮುರಿದು ಒಳ ನುಗ್ಗಿ ಈ ವೃದ್ಧ ಮಹಿಳೆಯನ್ನು ಮಲಗಿದಲ್ಲಿಯೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದನು ಹಾಗೂ ಬಳಿಕ ಆಕೆಯ ಚಿನ್ನಾಭರಣಗಳನ್ನು ದರೋಡೆ ಮಾಡಿದ್ದಲ್ಲದೆ, ಮನೆ ಆವರಣದಲ್ಲಿ ನಿಲ್ಲಿಸಿದ್ದ ಕಾರನ್ನು ಕೂಡ ಕದ್ದೊಯ್ದಿದ್ದನು ಎಂದು ಆರೋಪಿಸಲಾಗಿತ್ತು.

ಘಟನೆಯ ವಿವರ:

ಸುಶೀಲ ಬೆನ್ ಅವರು ನೆಲ ಅಂತಸ್ತಿನಲ್ಲಿ ಹಾಗೂ ಅವರ ಪುತ್ರ ಸಂದೀಪ್ ಮತ್ತು ಸೊಸೆ ಹಾಗೂ ಮೊಮ್ಮಗ ಮಹಡಿಯಲ್ಲಿ ಮಲಗಿದ್ದು, ಕೆಳಗಿನ ಮನೆಯಲ್ಲಿ ಒಬ್ಬಂಟಿಯಾಗಿ ಮಲಗಿದ್ದ ಸುಶೀಲ ಬೆನ್ ಕೊಲೆಯಾಗಿರುವ ಸಂಗತಿ ಮರುದಿನ (ಆ.1) ಬೆಳಗ್ಗೆ ಬೆಳಕಿಗೆ ಬಂದಿತ್ತು. ಸಂದೀಪ್ ಅವರು ಬೆಳಗ್ಗೆ 6 ಗಂಟೆಗೆ ಎದ್ದು ಜಿಮ್‌ಗೆ ಹೋಗಲೆಂದು ಮಹಡಿಯಿಂದ ಇಳಿದು ಕೆಳಗಡೆ ಬಂದು ಕಾರಿನ ಕೀ ಹುಡುಕಿದಾಗ ಅದು ಹಿಂದಿನ ರಾತ್ರಿ ಇರಿಸಿದ್ದ ಜಾಗದಲ್ಲಿ ಇರಲಿಲ್ಲ. ಸಂಶಯದಿಂದ ತಾಯಿ ಸುಶೀಲ ಬೆನ್ ಮಲಗಿದಲ್ಲಿಗೆ ಹೋದಾಗ ಆಕೆ ರಕ್ತದ ಮಡುವಿನಲ್ಲಿ ಬಿದ್ದಿರುವುದು ಹಾಗೂ ಅವರ ಚಿನ್ನಾಭರಣಗಳನ್ನು ದರೋಡೆ ಮಾಡಿರುವುದು ಕಂಡು ಬಂದಿತ್ತು. ಬಳಿಕ ಹೊರಗೆ ಹೋಗಿ ನೋಡಿದಾಗ ಕಾರು ಕೂಡಾ ಕಳವಾಗಿರುವುದು ಗೊತ್ತಾಗಿತ್ತು. ಬಳಿಕ ಕಾರು ಅದೇ ದಿನ ಬೆಳಗ್ಗೆ ಬಿಜೈ ಕೆಎಸ್ಸಾರ್ಟಿಸಿ ಬಳಿ ಪತ್ತೆಯಾಗಿತ್ತು.

ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು. ಈ ಮಧ್ಯೆ ಉರ್ವ ಠಾಣೆಯ ಪೊಲೀಸರು ಪ್ರಕರಣವೊಂದಕ್ಕೆ ಸಂಬಂಧಿಸಿ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಇಬ್ಬರನ್ನು ಬಂಧಿಸಿ ತನಿಖೆಗೆ ಒಳ ಪಡಿಸಿದಾಗ ಅವರಲ್ಲಿ ಒಬ್ಬನಾದ ಕೆಎಸ್ಸಾರ್ಟಿಸಿಯಲ್ಲಿ ವಾಚ್‌ಮೆನ್ ಆಗಿದ್ದ ಸಿದ್ದಪ್ಪ ನೀಡಿದ ತಪೊಪ್ಪಿಗೆ ಹೇಳಿಕೆಯಲ್ಲಿ ತಾನು ಅಳಕೆಯ ವೃದ್ಧೆ ಸುಶೀಲ ಬೆನ್ ಅವರನ್ನು ಕೊಲೆಗೈದು ಚಿನ್ನಾಭರಣಗಳನ್ನು ದರೋಡೆ ಮಾಡಿರುವುದಾಗಿ ತಿಳಿಸಿದ್ದನು.

ಈ ಹಿನ್ನೆಲೆಯಲ್ಲಿ ಆತನನ್ನು ಕದ್ರಿ ಪೊಲೀಸರ ವಶಕ್ಕೆ ಒಪ್ಪಿಸಲಾಗಿತ್ತು. ಕದ್ರಿ ಪೊಲೀಸರು ತನಿಖೆಯನ್ನು ನಡೆಸಿದಾಗ ಸುಶೀಲ ಬೆನ್ ಕೊಲೆಗೈದ ಬಳಿಕ ದರೋಡೆ ಮಾಡಿದ್ದ ಚಿನ್ನಾಭರಣಗಳನ್ನು ಬೆಳಗಾವಿ ಜಿಲ್ಲೆ ಸವದತ್ತಿಯ ಕರ್ನಾಟಕ ಗ್ರಾಮೀಣ ವಿಕಾಸ ಬ್ಯಾಂಕ್‌ನಲ್ಲಿ ಅಡವಿಟ್ಟಿರುವುದಾಗಿ ತಿಳಿಸಿದ್ದನು. ಅದರಂತೆ ಪೊಲೀಸರು ಸವದತ್ತಿಗೆ ತೆರಳಿ ಚಿನ್ನವನ್ನು ವಶಕ್ಕೆ ಪಡೆದು ಬಳಿಕ ಸಿದ್ದಪ್ಪನ ವಿರುದ್ಧ ಆರೋಪ ಪಟ್ಟಿಯನ್ನು ತಯಾರಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲದ ನ್ಯಾಯಾಧೀಶ ಮುರಳೀಧರ ಪೈ 18 ಸಾಕ್ಷಿಗಳ ವಿಚಾರಣೆ ನಡೆಸಿದ್ದರು. ಆದರೆ ಆರೋಪಿ ಸಿದ್ದಪ್ಪನ ಮೇಲಣ ಆರೋಪವನ್ನು ಸಾಬೀತು ಪಡಿಸುವಲ್ಲಿ ಪ್ರಾಸಿಕ್ಯೂಶನ್ ವಿಲವಾಗಿದೆ ಎಂಬ ತೀರ್ಮಾನಕ್ಕೆ ಬಂದು ಆತನನ್ನು ಖುಲಾಸೆಗೊಳಿಸಿ ಆ.21ರಂದು ತೀರ್ಪು ನೀಡಿದರು.

ಆರೋಪಿ ಸಿದದ್ದಪ್ಪನ ಪರವಾಗಿ ವಕೀಲರಾದ ವೇಣುಕುಮಾರ್ ಮತ್ತು ಯುವರಾಜ್ ಕೆ. ಅಮೀನ್ ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X