Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರಕಾರಿ ಯೋಜನೆಗಳು ಅರ್ಹರಿಗೆ ತಲುಪುವಲ್ಲಿ...

ಸರಕಾರಿ ಯೋಜನೆಗಳು ಅರ್ಹರಿಗೆ ತಲುಪುವಲ್ಲಿ ವಿಫಲ: ಐವನ್ ಡಿಸೋಜ

ವಾರ್ತಾಭಾರತಿವಾರ್ತಾಭಾರತಿ23 Aug 2018 10:36 PM IST
share
ಸರಕಾರಿ ಯೋಜನೆಗಳು ಅರ್ಹರಿಗೆ ತಲುಪುವಲ್ಲಿ ವಿಫಲ: ಐವನ್ ಡಿಸೋಜ

ಬೆಂಗಳೂರು, ಆ.23: ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಸರಕಾರದಿಂದ ಜಾರಿ ಮಾಡಿರುವ ಯೋಜನೆಗಳು ಸರಿಯಾದ ಮಾಹಿತಿ ಕೊರತೆಯಿಂದಾಗಿ ಅರ್ಹರಿಗೆ ತಲುಪುವಲ್ಲಿ ವಿಫಲವಾಗುತ್ತಿವೆ ಎಂದು ವಿಧಾನಪರಿಷತ್ ಸದಸ್ಯ ಡಾ.ಐವನ್ ಡಿಸೋಜ ಹೇಳಿದ್ದಾರೆ.

ಅನನ್ಯ ಶೈಕ್ಷಣಿಕ ಮತ್ತು ಸಬಲೀಕರಣ ಸಂಸ್ಥೆ ವತಿಯಿಂದ ನಗರದ ಐಎಸ್‌ಐನಲ್ಲಿ ಆಯೋಜಿಸಿದ್ದ ‘ಕ್ರೈಸ್ತ ಧಾರ್ಮಿಕ ಅಲ್ಪಸಂಖ್ಯಾತರಿಗಿರುವ ಸಾಂವಿಧಾನಿಕ ಹಕ್ಕುಗಳು ಮತ್ತು ಸರಕಾರ ಅಭಿವೃದ್ಧಿ ಯೋಜನೆಗಳು’ ವಿಷಯ ಕುರಿತ ಒಂದು ದಿನದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸರಕಾರದ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವುದು ಅಧಿಕಾರಗಳ ಕರ್ತವ್ಯ. ಆದರೆ, ಅವರ ನಿರ್ಲಕ್ಷದಿಂದಾಗಿ ನೈಜ ಫಲಾನುಭವಿಗಳಿಗೆ ಮಾಹಿತಿಯೇ ಸಿಗುತ್ತಿಲ್ಲ ಎಂದರು.

ಅಧಿಕಾರಿಗಳು ತಮ್ಮ ಅಮೂಲ್ಯವಾದ ಸೇವೆಯನ್ನು ಸಾರ್ವಜನಿಕರಿಗಾಗಿ ಮೀಸಲಿಡಬೇಕು. ಕಟ್ಟಕಡೆಯ ವ್ಯಕ್ತಿಗೂ ಸರಕಾರದ ಸೌಲಭ್ಯ ಸಿಗುವಂತೆ ಮಾಡಬೇಕು. ಇದಕ್ಕೆ ಜನರ ಸಹಾಯವೂ ಅಗತ್ಯವಿದೆ ಎಂದ ಅವರು, ಇಂದಿಗೂ ಕ್ರೈಸ್ತ ಸಮುದಾಯದವರಿಗೆ ಸಿಗಬೇಕಾದ ಅನೇಕ ಸೌಲಭ್ಯಗಳು ಕಟ್ಟಕಡೆಯ ವ್ಯಕ್ತಿಯವರೆಗೂ ತಲುಪಿಲ್ಲ ಎಂದರು.

ರಾಜ್ಯ ಸರಕಾರದಿಂದ ಅಲ್ಪಸಂಖ್ಯಾತ ಮಕ್ಕಳಿಗಾಗಿ ವೃತ್ತಿ ತರಬೇತಿ ಯೋಜನೆ, ನರ್ಸಿಂಗ್ ತರಬೇತಿ, ಕಾನೂನು ಪದವೀದರರಿಗೆ ತರಬೇತಿ ಸೇರಿದಂತೆ ಹಲವು ಶೈಕ್ಷಣಿಕ ತರಬೇತಿಗಳು, ಅನಾಥಾಲಯಗಳಿಗೆ ಅನುದಾನ, ವಿಚ್ಛೇದಿತ ಮಹಿಳೆಯರಿಗಾಗಿ ಬಿದಾಯಿ ಯೋಜನೆ, ಕೌಶಲ್ಯ ಅಭಿವೃದ್ಧಿ ಯೋಜನೆ ಸೇರಿದಂತೆ ಅನೇಕ ಯೋಜನೆಗಳಿದ್ದರೂ ಅದನ್ನು ಎಲ್ಲರಿಗೂ ಸಮರ್ಪಕವಾಗಿ ತಲುಪಿಸಲು ಸಾಧ್ಯವಾಗಿಲ್ಲ ಎಂದು ಹೇಳಿದರು.

ರಾಜ್ಯಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ವೈ.ಮರಿಸ್ವಾಮಿ ಮಾತನಾಡಿ, ಕ್ರೈಸ್ತ ಸಮುದಾಯದ ಜನರು ಇಂದಿಗೂ ಅತ್ಯಂತ ಹೀನಾಯವಾದ ಸ್ಥಿತಿಯಲ್ಲಿ ಜೀವನ ನಡೆಸುವಂತಾಗಿದೆ. ಸರಕಾರಗಳಿಂದ ಹಣಕಾಸಿನ ನೆರವು ಸಿಕ್ಕರೂ, ಅದು ತಲುಪಬೇಕಾದವರಿಗೆ ತಲುಪದೇ ಇರುವುದರಿಂದ ಇಂದಿಗೂ ಅವರ ಬದುಕು ಉತ್ತಮವಾಗಿಲ್ಲ ಎಂದು ತಿಳಿಸಿದರು.

ಅಲ್ಪಸಂಖ್ಯಾತರಲ್ಲಿ ಬರುವ ಕ್ರೈಸ್ತ ಸಮುದಾಯದ ಜನರು ಇಂದಿಗೂ ಗುಡಿಸಲುಗಳಲ್ಲಿ ಅತ್ಯಂತ ಕೆಳ ಹಂತದಲ್ಲಿ ಜೀವಿಸುತ್ತಿದ್ದು, ಸಂವಿಧಾನಾತ್ಮಕವಾಗಿ ಸಿಗಬೇಕಾದ ಹಕ್ಕುಗಳು ಸಿಗುತ್ತಿಲ್ಲ. ಹೀಗಾಗಿ, ಸಮಾಜದ ಕಟ್ಟಕಡೆಯಲ್ಲಿರುವ ವ್ಯಕ್ತಿಗೂ ಸಮಾನವಾದ ಅವಕಾಶಗಳು, ಹಕ್ಕುಗಳು ಸಿಕ್ಕಿದಾಗ ಮಾತ್ರ ನಿಜವಾದ ಪ್ರಜಾಪ್ರಭುತ್ವ ಎನಿಸಿಕೊಳ್ಳುತ್ತದೆ. ಅದಕ್ಕಾಗಿ ಪ್ರಬಲವಾದ ಹೋರಾಟ ರೂಪಿಸಬೇಕಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಭಾರತೀಯ ಸಾಮಾಜಿಕ ಸಂಸ್ಥೆಯ ಮಾನವ ಹಕ್ಕುಗಳ ಮತ್ತು ತರಬೇತಿ ವಿಭಾಗದ ಮುಖ್ಯಸ್ಥ ಡಾ.ಆಲ್ಪಿನ್, ರಾಷ್ಟ್ರೀಯ ಕಾನೂನು ಶಾಲೆಯ ಪ್ರೊ.ಬಾಬು ಮ್ಯಾಥ್ಯೂ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X