Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರೆಸ್ಸೆಸ್ ಎನ್ನುವುದು ಮುಸ್ಲಿಂ ಬ್ರದರ್...

ಆರೆಸ್ಸೆಸ್ ಎನ್ನುವುದು ಮುಸ್ಲಿಂ ಬ್ರದರ್ ಹುಡ್ ಇದ್ದಂತೆ ಎಂದ ರಾಹುಲ್ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ24 Aug 2018 10:19 PM IST
share
ಆರೆಸ್ಸೆಸ್ ಎನ್ನುವುದು ಮುಸ್ಲಿಂ ಬ್ರದರ್ ಹುಡ್ ಇದ್ದಂತೆ ಎಂದ ರಾಹುಲ್ ಗಾಂಧಿ

ಹೊಸದಿಲ್ಲಿ, ಆ.24: ಆರೆಸ್ಸೆಸ್ ಸಂಘಟನೆಯು ಮುಸ್ಲಿಂ ಬ್ರದರ್ ಹುಡ್ ಇದ್ದಂತೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದು, ಇದರಿಂದ ಆಕ್ರೋಶಗೊಂಡಿರುವ ಬಿಜೆಪಿ ರಾಹುಲ್ ಕ್ಷಮೆಯಾಚನೆಗೆ ಒತ್ತಾಯಿಸಿದೆ.

ಲಂಡನ್‍ನ ಇಂಟರ್‍ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ಸ್ಟ್ರಾಟಜಿಕ್ ಸ್ಟಡೀಸ್‍ನಲ್ಲಿ ಮಾತನಾಡಿದ ರಾಹುಲ್‍ಗಾಂಧಿ, "ಆರೆಸ್ಸೆಸ್ ಭಾರತದ ಸ್ವರೂಪವನ್ನೇ ಬದಲಿಸಲು ಪ್ರಯತ್ನ ಮಾಡುತ್ತಿದೆ. ಭಾರತದ ಇತರ ಯಾವ ಸಂಘಟನೆಗಳು ಕೂಡಾ ಭಾರತದ ಸಂಸ್ಥೆಗಳ ಸ್ವಾಧೀನ ಬಯಸಿಲ್ಲ. ಸಂಪೂರ್ಣ ಹೊಸ ಕಲ್ಪನೆಯನ್ನು ನಾವು ನೋಡುತ್ತಿದ್ದೇವೆ. ಇದು ಅರಬ್ ಜಗತ್ತಿನಲ್ಲಿರುವ ಮುಸ್ಲಿಂ ಬ್ರದರ್ ಹುಡ್ ಸಂಘಟನೆಯ ಕಲ್ಪನೆಯನ್ನು ಹೋಲುತ್ತದೆ. ಪ್ರತಿ ಸಂಸ್ಥೆಗಳ ಮೂಲಕವೂ ಒಂದು ಸಿದ್ಧಾಂತ ಹರಡಬೇಕು ಎನ್ನುವುದು ಇದರ ಆಶಯ ಮತ್ತು ಒಂದು ಕಲ್ಪನೆ ಉಳಿದೆಲ್ಲವನ್ನೂ ಹೊಸಕಿ ಹಾಕಬೇಕು ಎನ್ನುವುದು ಈ ಸಿದ್ಧಾಂತ" ಎಂದು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ, "ಮುಸ್ಲಿಂ ಒಡನಾಡಿಗಳ ಸಂಘ ಎಂದರೇನು ಗೊತ್ತೇ?, ಇದು ಹಲವು ದೇಶಗಳಲ್ಲಿ ಘೋಷಿತ ಉಗ್ರ ಸಂಘಟನೆ. ಇದಕ್ಕೆ ನೀವು ಬಿಜೆಪಿ ಹಾಗೂ ಆರೆಸ್ಸೆಸ್ ಸಂಘಟನೆಗಳನ್ನು ಹೋಲಿಸುತ್ತಿದ್ದೀರಿ" ಎಂದು ಹೇಳಿದ್ದಾರೆ.

ಬಿಜೆಪಿ- ಆರೆಸ್ಸೆಸ್ ಮೇಲೆ ವಾಗ್ದಾಳಿ ಮುಂದುವರಿಸಿದ ರಾಹುಲ್, "ಬಿಜೆಪಿ- ಆರೆಸ್ಸೆಸ್ ನಮ್ಮ ಜನರನ್ನೇ ಒಡೆಯುತ್ತಿದೆ. ನಮ್ಮದೇ ದೇಶದಲ್ಲಿ ದ್ವೇಷ ಹರಡುತ್ತಿದೆ. ನಮ್ಮ ಕೆಲಸ ಜನರನ್ನು ಒಗ್ಗೂಡಿಸುವುದು ಹಾಗೂ ದೇಶವನ್ನು ಮುನ್ನಡೆಸುವುದು. ಇದನ್ನು ಹೇಗೆ ಮಾಡಬೇಕು ಎಂದು ನಾವು ತೋರಿಸಿಕೊಟ್ಟಿದ್ದೇವೆ" ಎಂದು ಹೇಳಿದ್ದಾರೆ.

ಇದನ್ನು ಸಂಬಿತ್ ಟೀಕಿಸಿದ್ದು, "ರಾಹುಲ್ ನೀವು ಅಪ್ರಬುದ್ಧರು. ಭಾರತವನ್ನು ಅರ್ಥ ಮಾಡಿಕೊಂಡಿಲ್ಲ. ನಿಮಗೆ ನಾಯಕತ್ವದ ಗುಣವೇ ಇಲ್ಲ. ನಿಮಗೆ ಇರುವುದು ಮೋದಿಯನ್ನು ದ್ವೇಷಿಸುವ ಭಾವನೆ ಮಾತ್ರ. ನೀವು ಮೋದಿ, ಆರೆಸ್ಸೆಸ್ ಮತ್ತು ಬಿಜೆಪಿಯನ್ನು ದ್ವೇಷಿಸುತ್ತಿದ್ದೀರಿ" ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X