Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅನಧಿಕೃತ ಪಾರ್ಕಿಂಗ್‌ಗೆ ಅವಕಾಶ ನೀಡಿದರೆ...

ಅನಧಿಕೃತ ಪಾರ್ಕಿಂಗ್‌ಗೆ ಅವಕಾಶ ನೀಡಿದರೆ ಹೊಟೇಲ್, ಅಂಗಡಿ ಮಾಲಕರ ವಿರುದ್ಧವೂ ಕ್ರಮ

ಫೋನ್ ಇನ್ ಕಾರ್ಯಕ್ರಮದಲ್ಲಿ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ24 Aug 2018 11:18 PM IST
share
ಅನಧಿಕೃತ ಪಾರ್ಕಿಂಗ್‌ಗೆ ಅವಕಾಶ ನೀಡಿದರೆ ಹೊಟೇಲ್, ಅಂಗಡಿ ಮಾಲಕರ ವಿರುದ್ಧವೂ ಕ್ರಮ

ಮಂಗಳೂರು, ಆ.24: ನಗರದಲ್ಲಿ ಹೊಟೇಲ್, ಅಂಗಡಿ ಮುಂಗಟ್ಟುಗಳ ಎದುರು ಪಾರ್ಕಿಂಗ್ ಮಾಡುವ ವಾಹನ ಮಾಲಕರಿಗೆ ಮಾತ್ರವಲ್ಲದೆ ಹೊಟೇಲ್, ಅಂಗಡಿ ಮಾಲಕರ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ತಿಳಿಸಿದ್ದಾರೆ.

ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಶುಕ್ರವಾರ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಿ ಅವರು ಮಾತನಾಡಿದರು.

ಫಳ್ನೀರ್‌ನಲ್ಲಿ ಹೊಟೇಲೊಂದರ ಬಳಿ ರಸ್ತೆಯಲ್ಲೇ ವಾಹನ ಪಾರ್ಕಿಂಗ್ ಮಾಡುವುದರಿಂದ ಅಲ್ಲಿನ ಆಸ್ಪತ್ರೆಗೆ ತೆರಳುವ ಆಂಬ್ಯುಲೆನ್ಸ್‌ಗಳಿಗೆ ಸಂಚರಿಸಲು ಸಾಧ್ಯವಾಗುತ್ತಿಲ್ಲ. ಸುರತ್ಕಲ್ ಹಾಗೂ ಉರ್ವ ಮಾರುಕಟ್ಟೆ ಬಳಿಯಲ್ಲೂ ಇಂತಹ ಸಮಸ್ಯೆ ಇದೆ ಎಂದು ಸಾರ್ವಜನಿಕರೊಬ್ಬರು ದೂರಿದರು.

ಪಡೀಲ್ ಜಂಕ್ಷನ್‌ನಲ್ಲಿ ಕಾರ್ಯಾಚರಿಸುತ್ತಿರುವ ಕೆಲವು ಆಟೋ ಚಾಲಕರು ನಿಗದಿತ ದರಕ್ಕಿಂತ ಅಧಿಕ ದರ ವಸೂಲಿ ಮಾಡುತ್ತಿದ್ದಾರೆ. ಪ್ರಶ್ನಿಸಿದರೆ ಉದ್ಧ್ದಟತನದಿಂದ ವರ್ತಿಸುತ್ತಿದ್ದಾರೆ ಎಂದು ಮಹಿಳೆಯೊಬ್ಬರು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಆಯುಕ್ತರು ಅಂತಹ ಆಟೋ ರಿಕ್ಷಾಗಳ ನೋಂದಣಿ ಸಂಖ್ಯೆಯನ್ನು ದಾಖಲಿಸಿ ತಕ್ಷಣ ಕಂಟ್ರೋಲ್ ರೂಂಗೆ ಮಾಹಿತಿ ನೀಡುವಂತೆ ಸೂಚಿಸಿದರು.

ಪಿವಿಎಸ್, ಲಾಲ್‌ಭಾಗ್ ಮೊದಲಾದ ಕಡೆ ಸಿಗ್ನಲ್‌ಗಳ ಬಳಿ ಪೆನ್ನು, ಮೊಬೈಲ್ ಸ್ಟಾಂಡ್ ಮಾರಾಟ ಮಾಡುವವರ ಹಾವಳಿ ಹೆಚ್ಚಾಗಿದೆ. ಇದರಿಂದ ಸುಗಮ ಸಂಚಾರಕ್ಕೆ ತೊಡಕಾಗುತ್ತಿದೆ ಎಂದು ಸಾರ್ವಜನಿಕರೊಬ್ಬರು ದೂರಿದರು. ಮಾರಾಟಗಾರರ ವಿರುದ್ಧ ಪ್ರಕರಣ ದಾಖಲಿಸಲು ಅವಕಾಶವಿದೆ. ಕ್ರಮ ಕೈಗೊಳ್ಳುವುದಾಗಿ ಆಯುಕ್ತರು ಭರವಸೆ ನೀಡಿದರು.

ಸ್ಟೇಟ್‌ಬ್ಯಾಂಕ್‌ನಿಂದ ಮರವೂರು ಮೂಲಕ ಸಾಗುವ ಕೆಲವು ಬಸ್ಸಿನವರು 9 ರೂ. ಹಾಗೂ ಇನ್ನು ಕೆಲವರು 10 ರೂ. ದರ ಪಡೆಯುತ್ತಿದ್ದಾರೆ. ಈ ತಾರತಮ್ಯ ಯಾಕೆ? ಎಂದು ಪ್ರಶ್ನಿಸಿದ ಮಹಿಳೆಯೊಬ್ಬರು, ಬಸ್‌ಗಳಲ್ಲಿ ಎದುರು ಭಾಗದಲ್ಲಿ ಗಂಡಸರು ನಿಂತುಕೊಳ್ಳುವುದರಿಂದ ಮಹಿಳೆಯರಿಗೆ ತೊಂದರೆಯಾಗುತ್ತದೆ ಎಂದು ದೂರಿದರು.

ನಗರದ ಜ್ಯೋತಿ ಸಮೀಪದ ಅಂಬೇಡ್ಕರ್ ವೃತ್ತ, ಪುರಭವನದ ಎದುರು ಸೆಂಟ್ರಲ್ ರೈಲ್ವೆ ನಿಲ್ದಾಣ ರಸ್ತೆ ಸೇರುವಲ್ಲಿ, ವಿವಿ ಕಾಲೇಜು ಎದುರು ಮೊದಲಾದ ಕಡೆ ಪಾದಚಾರಿಗಳಿಗೆ ರಸ್ತೆ ದಾಟಲು ತೀವ್ರ ತೊಂದರೆಯಾಗುತ್ತಿದೆ. ಅಲ್ಲಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸಾರ್ವಜನಿಕರೊಬ್ಬರು ಒತ್ತಾಯಿಸಿದರು. ಈ ಬಗ್ಗೆ ಪಾಲಿಕೆಯ ಗಮನಕ್ಕೆ ತರುವುದಾಗಿ ಆಯುಕ್ತರು ಉತ್ತರಿಸಿದರು.

ಹಿರಿಯ ನಾಗರಿಕರಿಗೆ, ಅಂಗವಿಕಲರಿಗೆ ಮೀಸಲಿಟ್ಟ ಸೀಟುಗಳನ್ನು ಬಿಟ್ಟು ಕೊಡಬೇಕು. ಈ ಬಗ್ಗೆ ಬಸ್ ನಿರ್ವಾಹಕರು ಗಮನ ವಹಿಸಲು ತಿಳಿಸುವಂತೆ ಬಸ್ ಮಾಲಕರ ಸಂಘದ ಅಧ್ಯಕ್ಷರಿಗೆ ಆಯುಕ್ತರು ಸೂಚಿಸಿದರು.

 ಡಿಸಿಪಿಗಳಾದ ಹನುಮಂತರಾಯ ಹಾಗೂ ಉಮಾ ಪ್ರಶಾಂತ್, ಎಸಿಪಿ ಮಂಜುನಾಥ ಶೆಟ್ಟಿ, ಇನ್‌ಸ್ಪೆಕ್ಟರ್‌ಗಳಾದ ಮಂಜುನಾಥ್, ಅಮಾನುಲ್ಲಾ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X