Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುದುರೆಮುಖ: ಹೆದ್ದಾರಿ ಮಧ್ಯೆ ಅಡ್ಡಲಾಗಿ...

ಕುದುರೆಮುಖ: ಹೆದ್ದಾರಿ ಮಧ್ಯೆ ಅಡ್ಡಲಾಗಿ ನಿಂತ ಲಾರಿ; ರಸ್ತೆಯಲ್ಲಿ ಸಿಲುಕಿದ ನೂರಾರು ವಾಹನಗಳು

ವಾರ್ತಾಭಾರತಿವಾರ್ತಾಭಾರತಿ24 Aug 2018 11:20 PM IST
share
ಕುದುರೆಮುಖ: ಹೆದ್ದಾರಿ ಮಧ್ಯೆ ಅಡ್ಡಲಾಗಿ ನಿಂತ ಲಾರಿ; ರಸ್ತೆಯಲ್ಲಿ ಸಿಲುಕಿದ ನೂರಾರು ವಾಹನಗಳು

ಚಿಕ್ಕಮಗಳೂರ, ಆ.24: ಘನ ಲಾರಿಯೊಂದು ಕುದುರೆಮುಖ ಸಮೀಪದ ಘಾಟಿಯ ತಿರುವಿನಲ್ಲಿ ಸಿಲುಕಿಕೊಂಡ ಪರಿಣಾಮ ಕುದುರೆಮುಖ ಮಾರ್ಗವಾಗಿ ಮಂಗಳೂರು ಚಿಕ್ಕಮಗಳೂರು ಸಂಪರ್ಕದ ಹೆದ್ದಾರಿಯಲ್ಲಿ ಗಂಟೆಗಟ್ಟಲೆ ಸಂಚಾರ ಬಂದ್ ಆಗಿ ನೂರಾರು ವಾಹನಗಳು ಟ್ರಾಫಿಕ್ ಜಾಮ್‍ಗೆ ಸಿಲುಕಿದ ಘಟನೆ ಶುಕ್ರವಾರ ವರದಿಯಾಗಿದೆ.

ಜಿಲ್ಲೆಯ ಮೂಡಿಗೆರೆ ತಾಲೂಕು ವ್ಯಾಪ್ತಿಯ ಕಳಸ ಸಮೀಪದಲ್ಲಿರುವ ಕುದುರೆಮುಖದ ಬಳಿಯ ತಿರುವಿಂನಲ್ಲಿ ಭಾರೀ ಲಾರಿಯೊಂದು ಮುಂದಕ್ಕೆ ಸಂಚರಿಸಲಾಗದೇ ರಸ್ತೆಗೆ ಅಡ್ಡಲಾಗಿ ನಿಂತಿತ್ತು. ಲಾರಿ ಮುಂದಕ್ಕೂ ಹೋಗದೇ, ಹಿಂದಕ್ಕೂ ಬಾರದಂತಹ ಸ್ಥಿತಿಗೆ ಸಿಲುಕಿದ್ದರಿಂದ ಎರಡೂ ಬದಿಯಲ್ಲಿ ನೂರಾರು ವಾಹನಗಳ ಧಟ್ಟಣೆಯಿಂದಾಗಿ ಗಂಟೆಗಟ್ಟಲೆ ವಾಹನಗಳು ಸಿಂತಲ್ಲೇ ನಿಲ್ಲಬೇಕಾದ ಪರಿಸ್ಥಿತಿ ಬಂದೊದಗಿತ್ತು. ಇದರಿಂದಾಗಿ ಚಿಕ್ಕಮಗಳೂರು- ಮಂಗಳೂರು ಸಂಪರ್ಕದ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಆಗಿತ್ತು.

ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರ ಬಂದ್ ಆಗಿರುವ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಹಾಸನ, ಬೆಂಗಳೂರಿಗೆ ಹೋಗುವ, ಬರುವ ವಾಹನಗಳು ಚಾರ್ಮಾಡಿ ಘಾಟ್ ಮೂಲಕ ಸಾಗಲು ಅನುವು ಮಾಡಿಕೊಡಲಾಗಿದೆ. ಆದರೆ ಚಾರ್ಮಾಡಿ ಘಾಟ್‍ನಲ್ಲಿ ಭಾರೀ ವಾಹನಗಳ ಸಂಚಾರದಿಂದ ಟ್ರಾಫಿಕ್ ಜಾಮ್, ಅಪಘಾತದಂತಹ ಘಟನೆಗಳು ಹೆಚ್ಚಾದ ಪರಿಣಾಮ ಚಿಕ್ಕಮಗಳೂರು ಜಿಲ್ಲಾಡಳಿತ ಇತ್ತೀಚಿಗೆ ಚಾರ್ಮಾಡಿ ಘಾಟ್‍ನಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇದ ಹೇರಿ, ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಟ್ಟಿದ್ದರು. ಜಿಲ್ಲೆಯಿಂದ ಮಂಗಳೂರಿಗೆ ಸಂಚರಿಸುವ ಭಾರೀ ವಾಹನಗಳಿಗೆ ಕಳಸ, ಕುದುರೆಮುಖ ಮಾರ್ಗವಾಗಿ ಸಂಚರಿಸಲು ಅನುವು ಮಾಡಿಕೊಡಲಾಗಿದ್ದು, ಇದರಿಂದಾಗಿ ಕುದುರೆಮುಖ ಹೆದ್ದಾರಿ ಮೂಲಕ ಮಂಗಳೂರಿಗೆ ಪ್ರತಿನಿತ್ಯ ನೂರಾರ ಭಾರೀ ವಾಹನಗಳು ಸಂಚರಿಸುತ್ತಿವೆ. 

ಕುದುರೆಮುಖ ಸಮೀಪದಲ್ಲಿ ಹಾಗೂ ಎಸ್.ಕೆ.ಬಾರ್ಡರ್‍ನಲ್ಲಿ ಕಡಿದಾದ ಘಾಟಿಗಳಿರುವುದರಿಂದ ಈ ರಸ್ತೆಯಲ್ಲಿ ಭಾರೀ ವಾನಹಗಳ ಸಂಚಾರ ಅಪಾಯಕ್ಕೆ ಎಡೆ ಮಾಡಿಕೊಟ್ಟಂತಾಗಿದ್ದು, ಶುಕ್ರವಾರ ಮಂಗಳೂರಿಗೆ ಸರಕು ಹೊತ್ತು ಸಾಗುತ್ತಿದ್ದ ಭಾರೀ ಲಾರಿಯೊಂದ ಕಡಿದಾದ ತಿರುವಿನಲ್ಲಿ ಮುಂದೆ ಸಾಗಲಾಗದೇ ಚಾಲಕನ ನಿಯಂತ್ರ ತಪ್ಪಿದ ಲಾರಿ ರಸ್ತೆಗೆ ಅಡ್ಡಲಾಗಿ ನಿಂತಿದೆ. ಇದರಿಂದಾಗಿ ಎರಡೂ ಬದಿಗಳಲ್ಲಿ ನೂರಾರು ವಾಹನಗಳು ಸರತಿ ಸಾಲಿನಲ್ಲಿ ಸಿಲುಕಿಕೊಳ್ಳುವಂತಾಯಿತೆಂದು ತಿಳಿದು ಬಂದಿದೆ. ಸಂಜೆ ವೇಳೆಗೆ ಲಾರಿಯನ್ನು ಹರಸಾಹಸಪಟ್ಟು ರಸ್ತೆ ಬದಿಗೆ ಸರಿಸಲಾಗಿದ್ದು, ಸದ್ಯ ಹೆದ್ದಾರಿಯಲ್ಲಿ ವಾಹಗನಗಳ ಸಂಚಾರಕ್ಕೆ ಮುಕ್ತವಾಗಿದೆ ಎಂದು ತಿಳಿದು ಬಂದಿದೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X