Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 50 ಸಾವಿರ ಸಂತ್ರಸ್ತ ಕುಟುಂಬಗಳಿಗೆ ವಿಶೇಷ...

50 ಸಾವಿರ ಸಂತ್ರಸ್ತ ಕುಟುಂಬಗಳಿಗೆ ವಿಶೇಷ ಅನ್ನಭಾಗ್ಯ ‘ಆಹಾರ ಕಿಟ್’ ವಿತರಣೆಗೆ ಸಚಿವ ಝಮೀರ್ ಚಾಲನೆ

ಕೊಡಗು ಪ್ರವಾಹ

ವಾರ್ತಾಭಾರತಿವಾರ್ತಾಭಾರತಿ25 Aug 2018 8:21 PM IST
share
50 ಸಾವಿರ ಸಂತ್ರಸ್ತ ಕುಟುಂಬಗಳಿಗೆ ವಿಶೇಷ ಅನ್ನಭಾಗ್ಯ ‘ಆಹಾರ ಕಿಟ್’ ವಿತರಣೆಗೆ ಸಚಿವ ಝಮೀರ್ ಚಾಲನೆ

ಮಡಿಕೇರಿ, ಆ.25: ಪ್ರಕೃತಿ ವಿಕೋಪಕ್ಕೆ ತುತ್ತಾಗಿ ಸಂತ್ರಸ್ತರಾಗಿರುವ 50 ಸಾವಿರ ಕುಟುಂಬಗಳಿಗೆ ‘ವಿಶೇಷ ಅನ್ನಭಾಗ್ಯ ಯೋಜನೆಯಡಿ ಆಹಾರ ಕಿಟ್’ಗಳನ್ನು ಆಹಾರ ಸಚಿವ ಝಮೀರ್ ಅಹ್ಮದ್ ಖಾನ್ ಅವರು ವಿತರಣೆ ಮಾಡಿದರು.

ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮಿನಲ್ಲಿ ಸಾಂಕೇತಿಕವಾಗಿ ‘ಆಹಾರ ಕಿಟ್’ ವಿತರಿಸಿ ಮಾತನಾಡಿದ ಸಚಿವರು ನೆರೆಗೆ ಸಿಲುಕಿ ಸಂತ್ರಸ್ತರಾಗಿರುವ ಕುಟುಂಬಗಳಿಗೆ 15 ದಿನದಲ್ಲಿ ತಾತ್ಕಾಲಿಕ ಪಡಿತರ ಚೀಟಿ ವಿತರಿಸಲಾಗುವುದು ಎಂದ ಅವರು, ಮುಖ್ಯಮಂತ್ರಿ ಅವರು ಪ್ರಕಟಿಸಿರುವಂತೆ ವಿಪತ್ತು ಪೀಡಿತ ಫಲಾನುಭವಿಗಳಿಗೆ 50 ಸಾವಿರ ವಿಶೇಷ ಆಹಾರ ಕಿಟ್‍ಗಳನ್ನು ಉಚಿತವಾಗಿ ವಿತರಿಸಲು ಆಯೋಜಿಸಲಾಗಿದೆ ಎಂದರು.

ಆಹಾರ ಕಿಟ್‍ನಲ್ಲಿ 10 ಕೆ.ಜಿ ಅಕ್ಕಿ, ತಲಾ 1 ಕೆ.ಜಿ ತೊಗರಿ ಬೇಳೆ, ಉಪ್ಪು, ಸಕ್ಕರೆ, 1 ಲೀ. ಅಡುಗೆ ಎಣ್ಣೆ, 5 ಲೀ. ಸೀಮೆಎಣ್ಣೆ ಒಳಗೊಂಡಿದ್ದು, ನ್ಯಾಯಬೆಲೆ ಅಂಗಡಿ ಮೂಲಕ ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಸಾಧ್ಯವಾದರೆ 50 ಸಾವಿರ ಆಹಾರ ಕಿಟ್ ಅನ್ನು ಇನ್ನಷ್ಟು ಹೆಚ್ಚಿಸಲಾಗುವುದು ಎಂದು ಇದೇ ಸಂದರ್ಭ ಹೇಳಿದರು. 

ಜಿಲ್ಲೆಯಲ್ಲಿ ಸುಮಾರು 50 ಕ್ಕಿಂತ ಹೆಚ್ಚಿನ ಪರಿಹಾರ ಕೇಂದ್ರ ತೆರೆಯಲಾಗಿದ್ದು, ಈ ಕೇಂದ್ರಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಅಕ್ಕಿ ಮತ್ತು ತೊಗರಿ ಬೇಳೆಯನ್ನು ವಿತರಿಸಲಾಗುತ್ತಿದೆ. ಆಗಸ್ಟ್ 24ರವರೆಗೆ 486 ಕ್ವಿಂಟಾಲ್ ಅಕ್ಕಿ ಮತ್ತು 18.71 ಕ್ವಿಂಟಾಲ್ ತೊಗರಿಬೇಳೆ ವಿತರಿಸಲಾಗಿದೆ ಎಂದು ಸಚಿವರು ಹೇಳಿದರು.

ಪರಿಹಾರ ಕೇಂದ್ರಗಳಿಗೆ ಇಂಧನವಾಗಿ ಅಡುಗೆ ಅನಿಲವನ್ನು ಪೂರೈಕೆ ಮಾಡಲಾಗುತ್ತಿದ್ದು, ಈವರೆಗೆ 153 ಸಿಲಿಂಡರ್ ಗಳನ್ನು ಪೂರೈಕೆ ಮಾಡಲಾಗಿದೆ. ಇದರೊಂದಿಗೆ ಕೇಂದ್ರಗಳಲ್ಲಿನ ಚಿಕ್ಕ ಮಕ್ಕಳ ಸ್ನಾನಕ್ಕೆ ಬಿಸಿ ನೀರಿನ ವ್ಯವಸ್ಥೆ ಮಾಡಲು ಪ್ರತಿ ದಿನ ಪ್ರತಿ ಕೇಂದ್ರಕ್ಕೆ ತಲಾ 2 ಸಿಲಿಂಡರ್ ನಂತೆ ಪೂರೈಕೆ ಮಾಡಲಾಗುತ್ತಿದೆ. ಜಿಲ್ಲೆಯ ಪ್ರಕೃತಿ ವಿಕೋಪಕ್ಕೊಳಗಾದವರಿಗಾಗಿ ಸ್ಥಾಪಿಸಿದ ಆಶ್ರಯ ಕೇಂದ್ರಗಳಿಗೆ ಸರಬರಾಜು ಮಾಡಲು 200 ಕ್ವಿಂಟಾಲ್ ಸಕ್ಕರೆಯನ್ನು ಸ್ವೀಕರಿಸಲಾಗಿದೆ. ಪ್ರತೀ ಆಶ್ರಯ ಕೇಂದ್ರಕ್ಕೆ 50 ಕೆ.ಜಿಯಂತೆ ಸಕ್ಕರೆಯನ್ನು ವಿತರಿಸಲಾಗುತ್ತಿದೆ. ಬಾಕಿ ಉಳಿದ ಸಕ್ಕರೆಯನ್ನು ತುರ್ತು ಪರಿಸ್ಥಿತಿಯಲ್ಲಿ ಉಪಯೋಗಿಸಲು ಬಳಸಿಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು. ಆಹಾರ ಕಿಟ್ ಜೊತೆಗೆ ಎರಡೂವರೆ ಸಾವಿರ ಬಕೆಟ್ ಮತ್ತು ಮಗ್‍ನ್ನು ನೀಡಲಾಗುತ್ತದೆ. ಹಾಗೆಯೇ ವೈಯಕ್ತಿಕವಾಗಿ 5 ಸಾವಿರ ಬೆಡ್‍ಶೀಟ್ ಮತ್ತು 3 ಸಾವಿರ ಉಡುಪನ್ನು ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.   

ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ಪಿ.ಐ ಶ್ರೀವಿದ್ಯಾ, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಸದಸ್ಯೆ ಜುಲೇಕಾಬಿ, ಮನ್ಸೂರ್, ಮೊಹಿಸಿನ್, ಆಹಾರ ಇಲಾಖೆಯ ಆಯುಕ್ತೆ ಟಿ.ಎಚ್.ಎಮ್ ಕುಮಾರ್, ಜಂಟಿ ನಿರ್ದೇಶಕರಾದ ಸದಾಶಿವ, ವಿಜಯಕುಮಾರ್ ಉಪ ನಿರ್ದೇಶಕ ಪುಟ್ಟಸ್ವಾಮಿ ಇತರರು ಹಾಜರಿದ್ದರು.

ಇನ್ನಷ್ಟು ಮಾಹಿತಿ: ಪ್ರಕೃತಿ ವಿಕೋಪದಿಂದ ತೀವ್ರವಾಗಿ ಭಾದಿತವಾದ 34 ಗ್ರಾ.ಪಂ.ಗಳಿಂದ ಕುಟುಂಬಗಳಿಗೆ ಪ್ರತಿ ಕುಟುಂಬಕ್ಕೆ 35 ಕೆ.ಜಿ ಅಕ್ಕಿ ಹಾಗೂ 1 ಕೆ.ಜಿ ತೊಗರಿ ಬೇಳೆಯನ್ನು ವಿಶೇಷ ಆಹಾರ ಪ್ಯಾಕೇಜ್‍ನಡಿ ಉಚಿತವಾಗಿ ವಿತರಿಸಲಾಗುತ್ತಿದೆ. ಇಲಾಖೆಯು ಪರ್ಯಾಯವಾಗಿ ಪ್ರತಿ ಕುಟುಂಬಕ್ಕೆ 35 ಕೆ.ಜಿ ಅಕ್ಕಿ ಮತ್ತು 1 ಕೆ.ಜಿ ತೊಗರಿ ಬೇಳೆಯನ್ನು ನ್ಯಾಯಬೆಲೆ ಅಂಗಡಿಗಳನ್ನು ಹೊರತುಪಡಿಸಿ ಗ್ರಾಮ ಪಂಚಾಯತ್‍ಗಳ ಮೂಲಕವೇ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಇದು ಸಾರ್ವಜನಿಕ ವಿತರಣೆಯಡಿ ವಿತರಿಸುವ ಆಹಾರಧಾನ್ಯಕ್ಕೆ ಹೆಚ್ಚುವರಿಯಾಗಿ ನೀಡಿದ ಹಂಚಿಕೆಯಾಗಿರುತ್ತದೆ.   

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದ ವಿದ್ಯುತ್ ಪೂರೈಕೆಯಲ್ಲಿ ತೀವ್ರ ಅಡಚಣೆಯಾಗಿದ್ದು, ವಿಶೇಷವಾಗಿ ಸೀಮೆಎಣ್ಣೆ ಅವಶ್ಯಕತೆ ಇದೆ. ಪ್ರತಿ ಪಂಚಾಯತ್ ಗೆ 1 ಬ್ಯಾರಲ್‍ನಂತೆ (220 ಲೀ) ಸೀಮೆಎಣ್ಣೆಯನ್ನು ಪೂರೈಕೆ ಮಾಡಲಾಗುತ್ತಿದೆ. ಇಲ್ಲಿಯವರೆಗೆ 89 ಗ್ರಾಮ ಪಂಚಾಯತ್ ಗಳಿಗೆ 19,580 ಲೀಟರ್ ಸೀಮೆಎಣ್ಣೆ ವಿತರಿಸಲಾಗಿದೆ. ಜಿಲ್ಲೆಯಲ್ಲಿ ಅಡಿಗೆ ಅನಿಲ, ಪೆಟ್ರೋಲ್, ಡೀಸೆಲ್ ಅಗತ್ಯ ವಸ್ತುಗಳು ಕೊರತೆಯಾಗದಂತೆ ಸಂಬಂಧಪಟ್ಟ ತೈಲ ಕಂಪನಿಗಳೊಂದಿಗೆ ಸಂಪರ್ಕದಲ್ಲಿದ್ದು, ದಾಸ್ತಾನಿನಲ್ಲಿ ಕೊರತೆಯಾಗದಂತೆ ನಿಗಾವಹಿಸಲಾಗಿದೆ. ಪ್ರಕೃತಿ ವಿಕೋಪದಿಂದ ಮನೆಗಳನ್ನು ಕಳೆದುಕೊಂಡು ಪಡಿತರ ಚೀಟಿಗಳನ್ನು ಕಳೆದುಕೊಂಡವರಿಗೆ ಉಚಿತವಾಗಿ ಎಲ್ಲಾ ತಾಲೂಕು ಕಚೇರಿಗಳಲ್ಲಿ ಡುಪ್ಲಿಕೇಟ್ ಪಡಿತರ ಚೀಟಿಗಳನ್ನು ಮುದ್ರಿಸಿ ನೀಡಲು ಕ್ರಮವಹಿಸಲಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X