Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಕಲಿ ಎಟಿಎಂ ಕಾರ್ಡ್ ಬಳಸಿ 78 ಕೋ.ರೂ....

ನಕಲಿ ಎಟಿಎಂ ಕಾರ್ಡ್ ಬಳಸಿ 78 ಕೋ.ರೂ. ಎಗರಿಸಿದ ಹ್ಯಾಕರ್ ‌ಗಳು

ವಾರ್ತಾಭಾರತಿವಾರ್ತಾಭಾರತಿ25 Aug 2018 8:52 PM IST
share
ನಕಲಿ ಎಟಿಎಂ ಕಾರ್ಡ್ ಬಳಸಿ 78 ಕೋ.ರೂ. ಎಗರಿಸಿದ ಹ್ಯಾಕರ್ ‌ಗಳು

ಪುಣೆ, ಆ.25: ಎಟಿಎಂ ಕಾರ್ಡ್‌ಗಳ ಪಾಸ್‌ವರ್ಡ್ ಪಡೆದು ಹಣ ಲಪಟಾಯಿಸುವ ವಂಚಕರ ಬಗ್ಗೆ ತಿಳಿದಿದೆ. ಆದರೆ ಈಗ ಎಟಿಎಂ ಕಾರ್ಡ್‌ಗಳನ್ನೇ ನಕಲಿ ಮಾಡಿ ಮರುಸೃಷ್ಟಿಸಿ ಬ್ಯಾಂಕ್‌ಗಳಿಂದ ಹಣ ಲಪಟಾಯಿಸುವ ಕರಾಮತ್ತು ತೋರಿದ್ದಾರೆ ಹ್ಯಾಕರ್‌ಗಳು.

ಪುಣೆಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಕಾಸ್ಮೋಸ್ ಬ್ಯಾಂಕ್‌ನ ಸರ್ವರ್‌ಗಳನ್ನು ಹ್ಯಾಕ್ ಮಾಡಿ ತದ್ರೂಪದ ಎಟಿಎಂ ಕಾರ್ಡ್ ತಯಾರಿಸಿ, ಆ ಕಾರ್ಡ್ ಮೂಲಕ 28 ದೇಶಗಳಲ್ಲಿ 78 ಕೋಟಿ ರೂ.ಗಳನ್ನು ಎಗರಿಸಲಾಗಿದೆ. ಆಗಸ್ಟ್ 11 ಮತ್ತು 13ರಂದು ಕಾಸ್ಮೋಸ್ ಬ್ಯಾಂಕ್‌ನ ಎಟಿಎಂ ಸ್ವಿಚ್ ಸರ್ವರ್ ಹ್ಯಾಕ್ ಮಾಡಿದ ಅಪರಿಚಿತ ವ್ಯಕ್ತಿಗಳು ‘ವೀಸಾ’ ಹಾಗೂ ‘ರುಪೇ’ ಎಟಿಎಂ ಕಾರ್ಡ್‌ಗಳ ಮಾಹಿತಿಯನ್ನು ಕದ್ದಿದ್ದಾರೆ. ಅಲ್ಲದೆ ಅಂತರ್‌ಬ್ಯಾಂಕ್ ವ್ಯವಹಾರಕ್ಕೆ ಬಳಸುವ ‘ಸ್ವಿಫ್ಟ್’ ವ್ಯವಸ್ಥೆಯ ಮೇಲೂ ದಾಳಿ ನಡೆಸಿದ್ದು ಒಟ್ಟು 94 ಕೋಟಿ ರೂ. ಲಪಟಾಯಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬ್ರಿಟನ್, ಅಮೆರಿಕ, ರಶ್ಯ, ಯುಎಇ, ಕೆನಡಾ ಸೇರಿದಂತೆ 28 ರಾಷ್ಟ್ರಗಳಲ್ಲಿ ನಕಲಿ ಎಟಿಎಂ ಕಾರ್ಡ್ ಬಳಸಿ ಹಣ ಎಗರಿಸಲಾಗಿದೆ . ವಂಚಕರನ್ನು ಪತ್ತೆಹಚ್ಚುವ ಕಾರ್ಯದಲ್ಲಿ ಈ ದೇಶಗಳ ಕಾನೂನು ಅನುಷ್ಠಾನ ಏಜೆನ್ಸಿಗಳ ಜೊತೆ ಸಂಪರ್ಕದಲ್ಲಿದ್ದೇವೆ ಎಂದು ಡಿಸಿಪಿ(ಸೈಬರ್ ಮತ್ತು ಆರ್ಥಿಕ ಅಪರಾಧಗಳ ವಿಭಾಗ) ಜ್ಯೋತಿಪ್ರಿಯಾ ಸಿಂಗ್ ತಿಳಿಸಿದ್ದಾರೆ. ಬ್ಯಾಂಕ್‌ನ ಕಂಪ್ಯೂಟರ್ ವ್ಯವಸ್ಥೆಯ ‘ಅಧ್ಯಯನ’ ನಡೆಸಿ ಹ್ಯಾಕರ್‌ಗಳು ಈ ಕೃತ್ಯ ಎಸಗಿರುವ ಸಾಧ್ಯತೆಯಿದೆ.

ಹ್ಯಾಕರ್‌ಗಳ ದಾಳಿಗೂ ಮುನ್ನ ಬ್ಯಾಂಕ್‌ಗೆ ಯಾವುದಾದರೊಂದು ಎಚ್ಚರಿಕೆಯ ಸಂದೇಶ ಬಂದಿರಬಹುದು. ಬ್ಯಾಂಕ್‌ಗಳ ಭದ್ರತಾ ವ್ಯವಸ್ಥೆಯ ವರದಿಗಾಗಿ ಕಾಯುತ್ತಿದ್ದೇವೆ. ವಿದೇಶದಲ್ಲಿ ಎಟಿಎಂ ಕಾರ್ಡ್ ಬಳಸಿ ಹಣ ಪಡೆದವರನ್ನು ಕಂಡು ಹಿಡಿಯಬೇಕಿದೆ ಎಂದು ಅವರು ತಿಳಿಸಿದ್ದಾರೆ.

ಈ ಮಧ್ಯೆ, ಕಾಸ್ಮೋಸ್ ಬ್ಯಾಂಕ್‌ನ ನೈಜ ಎಟಿಎಂ ಕಾರ್ಡ್ ಬಳಸಿ ಹಣ ಪಡೆದ ಗ್ರಾಹಕರಿಗೆ ಹೆಚ್ಚುವರಿ ಹಣ ದೊರಕಿದ್ದು, ಇಂತಹ ಗ್ರಾಹಕರಿಂದ ಸುಮಾರು 4 ಲಕ್ಷ ರೂ. ಹಣ ಮರಳಿ ಪಡೆಯಲಾಗಿದೆ. ಬ್ಯಾಂಕ್‌ನ ಕಂಪ್ಯೂಟರ್‌ನಲ್ಲಿ ಹ್ಯಾಕರ್‌ಗಳು ಅಳವಡಿಸಿದ್ದ ಅಕ್ರಮ ಸಾಫ್ಟ್‌ವೇರ್ ಸಕ್ರಿಯವಾಗಿದ್ದ ಸಂದರ್ಭದಲ್ಲಿ ಬ್ಯಾಂಕಿನ ಎಟಿಎಂನಿಂದ ಹಣ ಹಿಂಪಡೆದ ಗ್ರಾಹಕರಿಗೆ ಅವರು ಬಯಸಿದ್ದಕ್ಕಿಂತ ಹೆಚ್ಚುವರಿ ಹಣ ದೊರೆತಿದೆ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X