Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇ-ಅಸೆಸ್‌ಮೆಂಟ್‌ಗೆ ಏಳು ವಿನಾಯಿತಿಗಳನ್ನು...

ಇ-ಅಸೆಸ್‌ಮೆಂಟ್‌ಗೆ ಏಳು ವಿನಾಯಿತಿಗಳನ್ನು ಪ್ರಕಟಿಸಿದ ಆದಾಯ ತೆರಿಗೆ ಇಲಾಖೆ

ವಾರ್ತಾಭಾರತಿವಾರ್ತಾಭಾರತಿ25 Aug 2018 9:00 PM IST
share
ಇ-ಅಸೆಸ್‌ಮೆಂಟ್‌ಗೆ ಏಳು ವಿನಾಯಿತಿಗಳನ್ನು ಪ್ರಕಟಿಸಿದ ಆದಾಯ ತೆರಿಗೆ ಇಲಾಖೆ

ಹೊಸದಿಲ್ಲಿ,ಆ.25: ತನ್ನ ಕ್ಷೇತ್ರ ಅಧಿಕಾರಿಗಳಿಗೆ ನೂತನ ಮಾರ್ಗಸೂಚಿಗಳನ್ನು ಹೊರಡಿಸಿರುವ ಆದಾಯ ತೆರಿಗೆ ಇಲಾಖೆಯು ದೇಶಾದ್ಯಂತ ಹೊಸದಾಗಿ ಜಾರಿಗೊಳಿಸಿರುವ 2018-19ನೇ ಸಾಲಿಗಾಗಿ ಇ-ಅಸೆಸ್‌ಮೆಂಟ್ ಏಳು ವಿವಿಧ ಪ್ರಕರಣಗಳಲ್ಲಿ ಕಡ್ಡಾಯವಲ್ಲ ಎಂದು ತಿಳಿಸಿದೆ.

ಆದರೆ ತೆರಿಗೆ ಅಧಿಕಾರಿಗಳು ಈಗಲೂ ಈ ಪ್ರಕರಣಗಳಿಗಾಗಿ ಇಲಾಖೆಯ ವಿದ್ಯುನ್ಮಾನ ವೇದಿಕೆ ಇನ್‌ಕಂ ಟ್ಯಾಕ್ಸ್ ಬಿಸಿನೆಸ್ ಅಪ್ಲಿಕೇಷನ್(ಐಟಿಬಿಎ) ಮೂಲಕವೇ ಎಲ್ಲ ಇಲಾಖಾ ಸಂವಹನಗಳು ಮತ್ತು ನೋಟಿಸ್‌ಗಳನ್ನು ಸೃಷ್ಟಿಸಬೇಕಾಗುತ್ತದೆ ಎಂದು ಸೂಚನೆಗಳಲ್ಲಿ ತಿಳಿಸಲಾಗಿದೆ.

  ಆದಾಯ ತೆರಿಗೆ ಕಾಯ್ದೆಯ ಕಲಂ 153ಎ,153ಸಿ,147 ಮತ್ತು 144ರಡಿ ರೂಪಿಸಲಾದ ತೆರಿಗೆ ನಿರ್ಧಾರಗಳಿಗೆ ಇ-ಅಸೆಸ್‌ಮೆಂಟ್ ಕಡ್ಡಾಯವಾಗಿರುವುದಿಲ್ಲ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿಯು ಆ.20ರ ತನ್ನ ಸುತ್ತೋಲೆಯಲ್ಲಿ ಹೇಳಿದೆ.

ತೆರಿಗೆ ನಿರ್ಧಾರವನ್ನು ಪಕ್ಕಕ್ಕಿರಿಸಿದ ಪ್ರಕರಣಗಳು, ಪಾನ್ ಇಲ್ಲದ ಪ್ರಕರಣಗಳಲ್ಲಿಯ ತೆರಿಗೆ ನಿರ್ಧಾರಗಳು, ಕಾಗದರೂಪದಲ್ಲಿ ಆದಾಯ ತೆರಿಗೆ ರಿಟರ್ನ್‌ಗಳನ್ನು ಸಲ್ಲಿಸಿದ ಪ್ರಕರಣಗಳು,ಸಂಬಂಧಿತ ತೆರಿಗೆದಾರನು ಇ-ಫೈಲಿಂಗ್ ಖಾತೆಯನ್ನು ಹೊಂದಿರದ ಪ್ರಕರಣಗಳಲ್ಲಿಯೂ ಇ-ಅಸೆಸ್‌ಮೆಂಟ್ ಕಡ್ಡಾಯವಾಗಿರುವುದಿಲ್ಲ ಮತ್ತು ಸೀಮಿತ ಬ್ಯಾಂಡ್ ವಿಡ್ತ್ ಸಾಮರ್ಥ್ಯದ ಪ್ರದೇಶಗಳಿಗೂ ಇದು ಅನ್ವಯಿಸುತ್ತದೆ. ಅಲ್ಲದೆ ಫೆಬ್ರುವರಿಯಲ್ಲಿ ಇ-ಅಸೆಸ್‌ಮೆಂಟ್‌ಗಾಗಿ ಮೊದಲ ಸುತ್ತಿನ ಸೂಚನೆಗಳನ್ನು ಹೊರಡಿಸುವುದಕ್ಕೆ ಮುನ್ನ ಸಾಂಪ್ರದಾಯಿಕ ವಿಧಾನದಲ್ಲಿ ಈಗಾಗಲೇ ಸಾಕಷ್ಟು ವಿಚಾರಣೆ ನಡೆದಿರುವ ಪ್ರಕರಣಗಳಿಗೂ ಇ-ಅಸೆಸ್‌ಮೆಂಟ್ ಕಡ್ಡಾಯವಾಗಿರುವುದಿಲ್ಲ ಎಂದು ಇಲಾಖೆಯು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X