Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜನ ಲಕ್ಷ್ಮೀ ಹಿಂದೆ ಓಡುತ್ತಿರುವುದರಿಂದ...

ಜನ ಲಕ್ಷ್ಮೀ ಹಿಂದೆ ಓಡುತ್ತಿರುವುದರಿಂದ ಸರಸ್ವತಿಯನ್ನು ಕೇಳುವವರಿಲ್ಲ: ಡಾ.ಸಿದ್ದಲಿಂಗಯ್ಯ

ವಾರ್ತಾಭಾರತಿವಾರ್ತಾಭಾರತಿ25 Aug 2018 9:38 PM IST
share
ಜನ ಲಕ್ಷ್ಮೀ ಹಿಂದೆ ಓಡುತ್ತಿರುವುದರಿಂದ ಸರಸ್ವತಿಯನ್ನು ಕೇಳುವವರಿಲ್ಲ: ಡಾ.ಸಿದ್ದಲಿಂಗಯ್ಯ

ಬೆಂಗಳೂರು, ಆ. 25: ಜನತೆ ‘ಲಕ್ಷ್ಮೀ’(ಹಣ)ಯ ಹಿಂದೆ ನಾಗಾಲೋಟದಿಂದ ಓಡುತ್ತಿರುವುದರಿಂದ ‘ಸರಸ್ವತಿ’(ವಿದ್ಯೆ)ಯನ್ನು ಕೇಳುವರೆ ಇಲ್ಲದ ದುಸ್ಥಿತಿ ಎದುರಾಗಿದೆ ಎಂದು ದಲಿತ ಕವಿ ಡಾ.ಸಿದ್ದಲಿಂಗಯ್ಯ ಇಂದಿಲ್ಲಿ ಅತೀವ ಬೇಸರ ವ್ಯಕ್ತಪಡಿಸಿದ್ದಾರೆ.

ಶನಿವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಕರ್ನಾಟಕ ಸರಕಾರ ಸಚಿವಾಲಯ ಸಹಕಾರ ಸಂಘ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಲಕ್ಷ್ಮೀಯು ಬೇಕು. ಆದರೆ, ಸರಸ್ವತಿಯನ್ನು ಸಮಾಜ ಕಡೆಗಣಿಸುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

ಲಕ್ಷ್ಮೀಯ ಬಗ್ಗೆ ನನಗೆ ಭಕ್ತಿ ಇದೆ. ಆದರೆ, ಆಕೆಯ ಕೃಪಾಕಟಾಕ್ಷಕ್ಕೆ ನಾನು ಒಳಗಾಗಿಲ್ಲ. ಬದಲಿಗೆ ನಾನು ಸರಸ್ವತಿಯ ಕೃಪಾಕಟಾಕ್ಷಕ್ಕೆ ಒಳಗಾಗಿದ್ದು, ಒಂದು ರೀತಿಯಲ್ಲಿ ಸರಸ್ವತಿಯ ಪುತ್ರನೆಂದು ಹೇಳಬಹುದು. ಲಕ್ಷ್ಮೀಯನ್ನು ಪೂಜಿಸಬೇಕು, ಸರಸ್ವತಿಯನ್ನು ಆರಾಧಿಸಬೇಕು ಎಂದು ಅವರು ಸಲಹೆ ನೀಡಿದರು.

ಸಂಪತ್ತು ಕ್ಷಣಿಕ: ಕೇರಳ ಮತ್ತು ಕೊಡಗು ಜಿಲ್ಲೆಯಲ್ಲಿನ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯನ್ನು ನೋಡಿದರೆ ಇಂದು ಕೋಟ್ಯಾಧೀಶನಾಗಿದ್ದ ವ್ಯಕ್ತಿ ಕ್ಷಣಾರ್ಧದಲ್ಲೆ ಭಿಕ್ಷುಕನಾಗುತ್ತಾನೆಂಬುದನ್ನು ನೋಡುತ್ತಿದ್ದೇವೆ. ಸಂಪತ್ತು, ಭವ್ಯ ಬಂಗಲೆ, ಆಸ್ತಿ-ಅಂತಸ್ತು ಎಲ್ಲವೂ ಕ್ಷಣಿಕ ಎಂದು ವಿಶ್ಲೇಷಿಸಿದರು. ಕೊಡಗು ಇಂದು ಬೇಡುವ ಸ್ಥಿತಿಗೆ ಬಂದಿದೆ. ಜಾತಿ-ಮತ, ಆಸ್ತಿ-ಅಂತಸ್ತು ಬದಿಗಿಟ್ಟು ಜೀವ ಉಳಿದರೆ ಸಾಕೆಂಬ ಸ್ಥಿತಿಯಲ್ಲಿದ್ದಾರೆ. ಮಾನವೀಯತೆಯ ದರ್ಶನ ಆಗುತ್ತಿದೆ. ಎಲ್ಲವನ್ನು ಮರೆತು ಸಹೋದರರಂತೆ ಸಹಾಯಕ್ಕೆ ನಿಂತಿದ್ದಾರೆ ಎಂದು ಸಿದ್ಧಲಿಂಗಯ್ಯ ಹೇಳಿದರು.

ಇತ್ತೀಚಿನ ದಿನಗಳಲ್ಲಿ ಕಂಪ್ಯೂಟರ್, ಮೊಬೈಲ್‌ಗಳಿಂದ ನಮ್ಮ ಮಕ್ಕಳು ಪೋಷಕರ ಸುಖದಿಂದ ವಂಚನೆಗೆ ಒಳಗಾಗುತ್ತಿದ್ದು, ಪೋಷಕರು ಮಕ್ಕಳೊಂದಿಗೆ ಹೆಚ್ಚೆಚ್ಚು ಬೆರೆಯಬೇಕು ಎಂದು ಸಲಹೆ ಮಾಡಿದ ಅವರು, ಮಕ್ಕಳೊಂದಿಗೆ ಬೆರೆಯುವುದು ಮನುಷ್ಯನ ಬದುಕಿನ ಅತ್ಯಂತ ಸಾರ್ಥಕ ಕ್ಷಣ ಎಂದರು.

ಕನ್ನಡ ಸಂಸ್ಕೃತಿ ಪಸರಿಸಿ: ಮಕ್ಕಳು ಆಂಗ್ಲ ಮಾಧ್ಯಮದಲ್ಲಿ ಕಲಿತರು ಮನೆಯಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಇರಲಿ ಎಂದ ಅವರು, ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಕಡ್ಡಾಯವಾಗಿ ಇಂಗ್ಲಿಷ್ ಮಾತನಾಡಬೇಕು, ಮನೆಯಲ್ಲೂ ಇಂಗ್ಲಿಷ್ ಮಾತನಾಡಿ ಎಂದು ತಾಕೀತು ಮಾಡುವುದು ಸಲ್ಲ. ಇಂತಹ ಶಾಲೆಗಳ ವಿರುದ್ಧ ಸರಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಕಾರ್ಯಕ್ರಮದಲ್ಲಿ ಎಸೆಸೆಲ್ಸಿ, ಪಿಯುಸಿಯಲ್ಲಿ ಹೆಚ್ಚಿನ ಅಂಕಗಳಿಸಿದ ಸಚಿವಾಲಯ ಸಹಕಾರ ಸಂಘದ ಸದಸ್ಯರ ಮಕ್ಕಳಿಗೆ ಪುತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ ವೇಳೆ ಸಂಘದ ಅಧ್ಯಕ್ಷ ಎನ್.ಆರ್.ಪ್ರಭು, ಉಪಾಧ್ಯಕ್ಷ ರಾಜ್‌ಕುಮಾರ್, ನಿರ್ದೇಶಕರಾದ ಅನ್ನಪೂರ್ಣ, ಗುರುಸ್ವಾಮಿ, ನಾಗವೇಣಿ, ಲತಾ, ಜಯಲಕ್ಷ್ಮಿ, ಕೃಷ್ಣಮೂರ್ತಿ, ರಮೇಶ್, ಅಭಿಜಿತ್, ವೆಂಕಟರಸಪ್ಪ ಹಾಜರಿದ್ದರು.

‘ಮಕ್ಕಳು ಹುಟ್ಟುತ್ತ ವಿಶ್ವಮಾನವರು. ಆದರೆ, ಅವರನ್ನು ನಾವಿಂದು ಜಾತಿ, ಧರ್ಮದ ಹೆಸರಿನಲ್ಲಿ ಅಲ್ಪ ಮಾನವರನ್ನಾಗಿ ಮಾಡುತ್ತಿರುವುದು ಅತ್ಯಂತ ಅಪಾಯಕಾರಿ. ಮಕ್ಕಳು ಅರಳುವ ಹೂವಿನಂತಹ ಪ್ರತಿಭೆಗಳನ್ನು ಹೊಂದಿದ್ದಾರೆ. ಹೀಗಾಗಿ ಜಾತಿ, ಧರ್ಮ, ಮೌಢ್ಯಗಳಿಂದ ದೂರವಿಟ್ಟು ವಿಶ್ವಮಾನವರನ್ನಾಗಿ ಮಾಡೋಣ’

-ಡಾ.ಸಿದ್ಧಲಿಂಗಯ್ಯ ಖ್ಯಾತ ಕವಿಗಳು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X