Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಫೇಲ್ ಒಪ್ಪಂದ: ಚಿದಂಬರಂರಿಂದ ಬಿಜೆಪಿಗೆ...

ರಫೇಲ್ ಒಪ್ಪಂದ: ಚಿದಂಬರಂರಿಂದ ಬಿಜೆಪಿಗೆ 4 ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ25 Aug 2018 11:01 PM IST
share
ರಫೇಲ್ ಒಪ್ಪಂದ: ಚಿದಂಬರಂರಿಂದ ಬಿಜೆಪಿಗೆ 4 ಪ್ರಶ್ನೆ

ಕೋಲ್ಕತ್ತಾ, ಆ. 25: ವಿವಾದಾತ್ಮಕ ರಫೇಲ್ ಒಪ್ಪಂದಕ್ಕೆ ಸಂಬಂಧಿಸಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಮುಂದೆ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಶನಿವಾರ ನಾಲ್ಕು ಪ್ರಶೆಗಳನ್ನು ಇರಿಸಿದ್ದಾರೆ.

ರಫೇಲ್ ಒಪ್ಪಂದ ಕುರಿತು ಕೇಂದ್ರದಿಂದ ಉತ್ತರ ಕೋರಿ ದೇಶಾದ್ಯಂತ 100 ಪತ್ರಿಕಾಗೋಷ್ಠಿ ನಡೆಸುವ ಒಂದು ಭಾಗವಾಗಿ ರಾಷ್ಟ್ರ ವ್ಯಾಪಿ ಅಭಿಯಾನವನ್ನು ಕಾಂಗ್ರೆಸ್ ಪಕ್ಷ ರವಿವಾರ ಆರಂಭಿಸಿದೆ. ಇಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿದ ಚಿದಂಬರಂ ಕೇಂದ್ರ ಸರಕಾರದ ಮುಂದೆ ನಾಲ್ಕು ಪ್ರಶ್ನೆಗಳನ್ನು ಇರಿಸಿದ್ದಾರೆ.

ಪ್ರಶ್ನೆ 1: ಯುಪಿಎ ಸರಕಾರದ ಅವಧಿಯಲ್ಲಿ ವಿಮಾನದ ಬೆಲೆ 526 ಕೋ. ರೂ. ಹಾಗೂ ಎನ್‌ಡಿಎ ಅಧಿಕಾರದ ಅವಧಿಯಲ್ಲಿ ವಿಮಾನದ ಬೆಲೆ 1,670 ಕೋ. ರೂ. ಇದು ಸರಿಯೇ ?, ಇದು ಸರಿಯಾಗಿದ್ದರೆ, ಈಗ ವಿಮಾನದ ಬೆಲೆ ಮೂರು ಪಟ್ಟು ಹೆಚ್ಚಾಗಿರುವುದು ಯಾಕೆ ಎಂಬುದನ್ನು ದಯವಿಟ್ಟು ಯಾರಾದರೂ ವಿವರಿಸುವಿರಾ ?,

ಪ್ರಶ್ನೆ 2: ರಕ್ಷಣಾ ಸಾಮಗ್ರಿ ಹೊಂದುವ ಪ್ರಕ್ರಿಯೆಯನ್ನು ಯಾಕೆ ನಿರ್ಲಕ್ಷಿಸಲಾಯಿತು ?, ಗುತ್ತಿಗೆ ಅನುಸಂಧಾನ ಸಮಿತಿಯನ್ನು ಕತ್ತಲೆಯಲ್ಲಿ ಇರಿಸಲು ಕಾರಣವೇನು ? ಸಂಪುಟ ಸಮಿತಿ ಹಾಗೂ ಭದ್ರತೆಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಇರಲು ಕಾರಣವೇನು ?,

ಪ್ರಶ್ನೆ 3: ಎಚ್‌ಎಎಲ್ ಹಾಗೂ ಡಸ್ಸಾಲ್ಟ್ ನಡುವೆ ಕಾರ್ಯ ಹಂಚಿಕೆ ಒಪ್ಪಂದ ಇದ್ದರೆ ತೊಂದರೆ ಇಲ್ಲ. ಆದರೆ, ಆಮದು ಹಾಗೂ ರಫ್ತು ಅನ್ನು ಎಚ್‌ಎಎಲ್‌ಗೆ ನೀಡಬೇಕು ಅಥವಾ ಎಚ್‌ಎಎಲ್ ಅನ್ನು ಪರಿಗಣಿಸಬೇಕು ಎಂದು ಡಸ್ಸಾಲ್ಟ್‌ಗೆ ಯಾಕೆ ತಿಳಿಸಿಲ್ಲ. ತನ್ನ ಆಮದು-ರಫ್ತು ಭಾಗೀದಾರರನ್ನು ಆಯ್ಕೆ ಮಾಡಿಕೊಳ್ಳಲು ಡಸ್ಸಾಲ್ಟ್‌ಗೆ ಸ್ವಾತಂತ್ರ ನೀಡಿರುವುದು ಯಾಕೆ ?, ಎಚ್‌ಎಎಲ್ ಅನ್ನು ಪೂರ್ಣ ಒಪ್ಪಂದದಿಂದ ಹೊರಗಿಡಲಾಗಿದೆ. ಎಚ್‌ಎಎಲ್ ಏನು ತಪ್ಪು ಮಾಡಿದೆ ?,

ಪ್ರಶ್ನೆ 4: ತಂತ್ರಜ್ಞಾನ ವರ್ಗಾವಣೆ ಏನಾಯ್ತು ?, ಭಾರತ ಏನಾದರೂ ಪಡೆದುಕೊಂಡಿತೆ ?, ಎಚ್‌ಎಎಲ್ ಏನಾದರೂ ಪಡೆದುಕೊಂಡಿದೆ?. ಡಸ್ಸಾಲ್ಟ್ ತಂತ್ರಜ್ಞಾನವನ್ನು ಭಾರತಕ್ಕೆ ಆಮದು ಮಾಡುವ ಮೂಲಕ ನಮ್ಮ ವೈಮಾನಿಕ ಕೈಗಾರಿಕೆ ಏನಾದರೂ ಪಡೆದುಕೊಂಡಿತೇ ?, ನೀವು 36 ವಿಮಾನಗಳನ್ನು ಆಮದು ಮಾಡಿಕೊಂಡಿರಿ. ಭಾರತದ ಭವಿಷ್ಯದ ವಿಮಾನಕ್ಕಾಗಿ ತಂತ್ರಜ್ಞಾನವನ್ನು ವರ್ಗಾಯಿಸಬೇಕು ಎಂದು ಡಸ್ಸಾಲ್ಟ್‌ಗೆ ನೀವು ಸೂಚಿಸಿಲ್ಲ ಯಾಕೆ ?

share
ವಾರ್ತಾಭಾರತಿ
ವಾರ್ತಾಭಾರತಿ
Next Story
X