Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಸಂಚಾರಿ ಠಾಣೆ ಪೇದೆಯಿಂದ...

ಚಿಕ್ಕಮಗಳೂರು: ಸಂಚಾರಿ ಠಾಣೆ ಪೇದೆಯಿಂದ ವ್ಯಕ್ತಿಗೆ ಹಲ್ಲೆ; ಪೇದೆ ಅಮಾನತು

ವಾರ್ತಾಭಾರತಿವಾರ್ತಾಭಾರತಿ26 Aug 2018 6:42 PM IST
share
ಚಿಕ್ಕಮಗಳೂರು: ಸಂಚಾರಿ ಠಾಣೆ ಪೇದೆಯಿಂದ ವ್ಯಕ್ತಿಗೆ ಹಲ್ಲೆ; ಪೇದೆ ಅಮಾನತು

ಚಿಕ್ಕಮಗಳೂರು, ಆ. 26: ಕ್ಷುಲ್ಲಕ ವಿಷಯಕ್ಕೆ ನಗರದ ಸಂಚಾರಿ ಪೊಲೀಸ್ ಠಾಣೆಯ ಪೇದೆಯೊಬ್ಬರು ವ್ಯಕ್ತಿಯೋರ್ವನಿಗೆ ನಡು ರಸ್ತೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ ಘಟನೆ ರವಿವಾರ ನಡೆದಿದೆ.

ನಗರದ ಸಂಚಾರಿ ಠಾಣೆಯ ಪೇದೆ ಸುಭಾಷ್ ಆಲಮಟ್ಟಿ ಎಂಬವರು ರವಿವಾರ ನಗರದ ಎಂಇಸ್ ಕಾಲೇಜು ವೃತ್ತದಲ್ಲಿ ಕರ್ತವ್ಯದಲ್ಲಿದ್ದ ವೇಳೆ ವಾಹನ ಪಾರ್ಕಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಬೈಕ್ ಸವಾರರೋರ್ವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂದು ತಿಳಿದು ಬಂದಿದೆ. 

ಪೇದೆಯ ಮಾತಿಗೆ ಕೋಪಗೊಂಡ ಬೈಕ್ ಸವಾರ ಗೌರವದಿಂದ ಮಾತನಾಡುವಂತೆ ಹೇಳಿದ್ದಕ್ಕೆ ಕುಪಿತನಾದ ಪೇದೆ, ಎದುರುತ್ತರ ನೀಡುತ್ತೀಯ ಎಂದು ಧಮ್ಕಿ ಹಾಕಿದ್ದಲ್ಲದೇ ಮನಸೋ ಇಚ್ಛೆ ಸಾರ್ವಜನಿಕರ ಎದುರು ನಡುರಸ್ತೆಯಲ್ಲಿಯೇ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದ್ದು, ವೀಡಿಯೊ ವೈರಲ್ ಆಗಿದೆ. ಪೇದೆ ಹಲ್ಲೆ ಮಾಡುತ್ತಿದ್ದ ವೇಳೆ ಮೊಬೈಲ್‍ನಲ್ಲಿ ದೃಶ್ಯ ಸೆರೆ ಹಿಡಿಯುತ್ತಿದ್ದ ವ್ಯಕ್ತಿಯೊಬ್ಬರ ಮೇಲೂ ಎರಗಿದ ಪೇದೆ ಹಲ್ಲೆಗೆ ಮುಂದಾಗಿ ವೀಡಿಯೊ ಡಿಲಿಟ್ ಮಾಡುವಂತೆ ಬೆದರಿಕೆ ಹಾಕಿದ್ದಾರೆಂದು ತಿಳಿದು ಬಂದಿದೆ.

ಪೇದೆ ಬೈಕ್ ಸವಾರನಿಗೆ ಹಲ್ಲೆ ಮಾಡುತ್ತಿರುವ ದೃಶ್ಯದ ವೀಡಿಯೊ ಸದ್ಯ ಸಾಮಾಜಿಕ ಜಾಲತಾಣಗಳ ಮೂಲಕ ವೈರಲ್ ಆಗಿದ್ದು, ವ್ಯಕ್ತಿಗೆ ಥಳಿಸುತ್ತಿರುವ ದೃಶ್ಯ ಕಂಡು ಸಾರ್ವಜನಿಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು, ಪೇದೆ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕ್ರಮ ವಹಿಸಬೇಕೆಂದು ಆಗ್ರಹಿಸಿದ್ದಾರೆ.

ವೀಡಿಯೊ ವೈರಲ್ ಆಗುತ್ತಿದ್ದಂತೆ ನಗರದ ಸಂಚಾರಿ ಠಾಣೆಯ ಪೊಲೀಸ್ ಅಧಿಕಾರಿಗಳು ಘಟನೆ ಸಂಬಂಧ ಸಾರ್ವಜನಿಕರಿಂದ ಮಾಹಿತಿ ಪಡೆದಿದ್ದು, ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೂ ವರದಿ ನೀಡಿದ್ದಾರೆ.

ಪೇದೆ ಅಮಾನತು: ಚಿಕ್ಕಮಗಳೂರು ನಗರದ ಶೃಂಗಾರ್ ಸರ್ಕಲ್ ಹತ್ತಿರ ಓರ್ವ ಸಾರ್ವಜನಿಕನ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿರುವ ಕುರಿತು ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ತಿಳಿದಿದ್ದು, ಪ್ರಾಥಮಿಕ ವಿಚಾರಣೆಯಿಂದ ಹಲ್ಲೆ ಮಾಡಿರುವುದು ನಿಜವೆಂದು ಕಂಡು ಬಂದಿರುವುದರಿಂದ ಸಾರ್ವಜನಿಕನ ಮೇಲೆ ಹಲ್ಲೆ ನಡೆಸಿದ ಚಿಕ್ಕಮಗಳೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಯಾದ ಸುಭಾಷ್ ಆಲಮಟ್ಟಿ ಯನ್ನು ಈ ಕೂಡಲೇ ಕರ್ತವ್ಯದಿಂದ ಅಮಾನತು ಪಡಿಸಲಾಗಿದೆ.

- ಲಕ್ಷ್ಮೀ ಪ್ರಸಾದ್, ಎಸ್ಪಿ, ಚಿಕ್ಕಮಗಳೂರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X