Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಳಸ: ಭೂ ಕುಸಿತಕ್ಕೆ ರೈತ ಕುಟುಂಬಗಳು...

ಕಳಸ: ಭೂ ಕುಸಿತಕ್ಕೆ ರೈತ ಕುಟುಂಬಗಳು ಕಂಗಾಲು

ಧರೆಗುರುಳುತ್ತಿರುವ ಅಡಿಕೆ ಮರಗಳು, ಗುಡ್ಡ ಕುಸಿತದಿಂದ ಮನೆ ತೊರೆದ ಕುಟುಂಬ

ವಾರ್ತಾಭಾರತಿವಾರ್ತಾಭಾರತಿ26 Aug 2018 7:21 PM IST
share
ಕಳಸ: ಭೂ ಕುಸಿತಕ್ಕೆ ರೈತ ಕುಟುಂಬಗಳು ಕಂಗಾಲು

ಚಿಕ್ಕಮಗಳೂರು, ಆ.26: ಕಳೆದೊಂದು ವಾರದಿಂದ ಜಿಲ್ಲೆಯಾದ್ಯಂತ ಮಳೆ ಕ್ಷೀಣಿಸಿದ್ದರೂ ಅತಿವೃಷ್ಟಿಯ ಪರಿಣಾಮ ಎಂಬಂತೆ ಭೂ ಕುಸಿತದಂತಹ ಘಟನೆಗಳಿಂದಾಗಿ ಜಿಲ್ಲೆಯ ಮಲೆನಾಡು ಭಾಗದಲ್ಲಿ ಸಾಕಷ್ಟು ಮನೆ ಹಾಗೂ ಕಾಫಿ, ಅಡಿಕೆ ತೋಟಗಳಿಗೆ ವ್ಯಾಪಕ ಹಾನಿಯಾಗುತ್ತಿದೆ.

ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದ್ದರೂ ರಾತ್ರಿ ಹಾಗೂ ಬೆಳಗಿನ ವೇಳೆ ಸಾಧಾರಣವಾಗಿ ಮಳೆ ಸುರಿಯುತ್ತಲೇ ಇದೆ. ಜಿಲ್ಲೆಯ ಮೂಡಿಗೆರೆ ತಾಲೂಕು ವ್ಯಾಪ್ತಿಯ ಕಳಸ ಸಮೀಪದ ತಲಗೋಡು ಗ್ರಾಮದ ಕೆಲವೆಡೆ ರವಿವಾರ ಬೆಳಗ್ಗೆ ಭೂ ಕುಸಿತ ಉಂಟಾಗಿದ್ದು, ಇದು ಗ್ರಾಮಸ್ಥರನ್ನು ನಿದ್ದೆಗೆಡುವಂತೆ ಮಾಡಿದೆ.

ಮೂಡಿಗೆರೆ ತಾಲೂಕಿನ ತೋಟದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ತಲಗೋಡು ಗ್ರಾಮದ ಕಚ್ಚುಕುಡಿಗೆ ಕೆ.ಕೆ.ಸುಧಾಕರ  ಎಂಬವರಿಗೆ ಸೇರಿದ 3ಎಕರೆ ಜಮೀನಿನಲ್ಲಿ ಅಡಿಕೆ, ಕಾಫಿ ಕೃಷಿ ಮಾಡಿದ್ದಾರೆ. ಮಳೆಗಾಲದ ಆರಂಭದಲ್ಲಿ ಈ ಕೃಷಿ ಭೂಮಿಯಲ್ಲಿ ಅಲ್ಲಲ್ಲಿ ಸಣ್ಣ ಗಾತ್ರದ ಬಿರುಕುಗಳು ಕಾಣಿಸಿಕೊಂಡಿದ್ದವು. ಆದರೆ ಕಳೆದ ಎರಡು ದಿನಗಳಿಂದ ಬೃಹತ್ ಗಾತ್ರದ ಬಿರುಕುಗಳು ಕಾಣಿಸಿಕೊಂಡು ನೀರಿನ ಬುಗ್ಗೆಗಳು ಮೇಲೆ ಬರುತ್ತಿದ್ದು, ನೀರು ಇಡೀ ತೋಟವನ್ನು ಆಕ್ರಮಿಸಿಕೊಂಡಿದೆ. ಅಲ್ಲದೇ ಮೂರು ಎಕರೆ  ಜಮೀನಿನಲ್ಲಿ ಕೆಲವೆಡೆ ಭೂ ಕುಸಿತ ಉಂಟಾಗಿದ್ದು, ಈ ವೇಳೆ ಭೂಮಿಯು ಕಂಪಿಸಿದ ಅನುಭವ ಆಯಿತೆಂದು ಸುಧಾಕರ್ ತಿಳಿಸಿದ್ದಾರೆ.

ಭೂ ಕುಸಿತದಿಂದಾಗಿ ತೋಟದಲ್ಲಿದ್ದ ನೂರಾರು ಅಡಿಕೆ ಮರಗಳು ಧರೆಗುರುಳಿದ್ದು, ಭೂ ಸುಮಾರು ಒಂದೂವರೆ ಸಾವಿರಕ್ಕೂ ಹೆಚ್ಚು ಅಡಿಕೆ ಮರಗಳು ಒಂದರ ಮೇಲೊಂದರಂತೆ ಒರಗಿ ಕುಳಿತಿದ್ದು, ನೆಲಕ್ಕುರುಳುವ ಭೀತಿಯಿಂದ ಸುಧಾಕರ್ ಕಂಗಾಲಾಗಿದ್ದಾರೆ. ತೋಟದ ಭೂಮಿ ದಿನದಿಂದ ದಿನಕ್ಕೆ  ಜಾರಿಕೊಂಡು ಕುಸಿದು  ಹೋಗುತ್ತಿದ್ದು, ಸುಧಾಕರ್ ಅವರ ಮನೆಯ ಸಮೀಪದ ಜಾಗದಲ್ಲೂ ಬಿರುಕುಗಳು ಕಾಣಿಸಿ ಕೊಂಡಿವೆ. ಈ ತೋಟದ ಸಮೀಪದಲ್ಲಿ ಹದಿನೈದು ಪರಿಶಿಷ್ಟರ ಕುಟುಂಬಗಳು ವಾಸವಿದ್ದು, ನಿವಾಸಿಗಳೂ ಭೂ ಕುಸಿತದಿಂದಾಗಿ ಕಂಗಾಲಾಗಿದ್ದಾರೆ.

ತೋಟದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡಿಕೆಹಿತ್ಲು ಎಂಬಲ್ಲಿ ರವಿವಾರ ಬೆಳಗ್ಗೆ ಭಾರಿ ಗಾತ್ರದ ಗುಡ್ಡ ಜರಿದು ಬಿದ್ದಿದೆ. ಈ ಗುಡ್ಡದ ಸಮೀಪವೇ ಹಳ್ಳವೊಂದು ಹರಿಯುತ್ತಿದ್ದು, ಈ ಹಳ್ಳ ಮುಚ್ಚುಗಡೆಯಾಗಿ ಅಡಿಕೆಹಿತ್ಲುವಿನ ಕೃಷ್ಣಮೂರ್ತಿ ಕುಟುಂಬಕ್ಕೆ ಸೇರಿದ ಜಮೀನಿನಲ್ಲಿ ಹಳ್ಳದ ನೀರು ಹರಿದುಹೋಗುತ್ತಿದೆ. ಇದರಿಂದಾಗಿ ನೂರಾರು ಅಡಿಕೆ ಮರಗಳು ಜಲಾವೃತಗೊಂಡಿವೆ. ಗುಡ್ಡ ಕುಸಿಯುತ್ತಿರುವುದರಿಂದ ತಲಗೋಡು ಗ್ರಾಮದ ವಾಡುವಾರೆ ಲೋಕಯ್ಯ ಎಂಬವರ ಜಮೀನಿನಲ್ಲಿದ್ದ ಅಡಿಕೆ ಮರ ಹಾಗೂ ಕಾಫಿ ಗಿಡಗಳು ಮಣ್ಣು ಪಾಲಾಗಿವೆ. ಪಕ್ಕದಲ್ಲಿಯೇ ಇದ್ದ ಇವರ ಮನೆಗೂ ಅಪಾಯವಿದ್ದು, ಸದ್ಯ ಕುಟುಂಬಸ್ಥರು ಮನೆ ತೊರೆದು ಬೇರೆಡೆ ವಾಸವಿದ್ದಾರೆ.

ದಿನದಿಂದ ದಿನಕ್ಕೆ ಭೂಮಿಯಲ್ಲಿ ಬಿರುಕುಗಳು ಹೆಚ್ಚಾಗಿ ಅಡಿಕೆ ಮರಗಳು ಒಂದರಮೇಲೊಂದು ಬೀಳಲಾರಂಬಿಸಿವೆ. ಸುಮಾರು ಮೂರು ಎಕರೆ ಭೂಮಿಯಲ್ಲಿ ಅಲ್ಲಲ್ಲಿ ಬಿರುಕುಗಳು ಕಾಣಿಸಿಕೊಂಡು ಭೂಮಿ ಸಂಪೂರ್ಣ ಜಾರಿಕೊಂಡು ಹೋಗುತ್ತಿದೆ. ಮನೆ ಸಮೀಪವೂ ಬಿರುಕುಗಳು ಕಾಣಿಸಿಕೊಂಡಿವೆ. ತಜ್ಞರ ತಂಡ ಬಂದು ಇದನ್ನು ಪರಿಶೀಲನೆ ಮಾಡಬೇಕಾಗಿದೆ.
-ಕೆ.ಕೆ.ಸುಧಾಕರ, ಜಮೀನು ಮಾಲಕ ಕಚ್ಚುಕುಡಿಗೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X