Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗು: ಮಳೆ ನಿಂತರೂ ನಿಲ್ಲದ ಆತಂಕ; ಹಾನಿ...

ಕೊಡಗು: ಮಳೆ ನಿಂತರೂ ನಿಲ್ಲದ ಆತಂಕ; ಹಾನಿ ಪ್ರದೇಶಗಳಿಗೆ ಜನಪ್ರತಿನಿಧಿಗಳ ಭೇಟಿ

ಕಳ್ಳತನ ತಡೆಯಲು ಪೊಲೀಸ್ ಮುಂಜಾಗೃತೆ

ವಾರ್ತಾಭಾರತಿವಾರ್ತಾಭಾರತಿ26 Aug 2018 7:44 PM IST
share
ಕೊಡಗು: ಮಳೆ ನಿಂತರೂ ನಿಲ್ಲದ ಆತಂಕ; ಹಾನಿ ಪ್ರದೇಶಗಳಿಗೆ ಜನಪ್ರತಿನಿಧಿಗಳ ಭೇಟಿ

ಮಡಿಕೇರಿ,ಆ.26 : ಕೊಡಗು ಜಿಲ್ಲೆಯನ್ನು ತಲ್ಲಣಗೊಳಿಸಿದ ಮಹಾಮಳೆ ಕಳೆದ ನಾಲ್ಕು ದಿನಗಳಿಂದ ಸುಮ್ಮನಾಗಿದ್ದರೂ ನೆಲೆ ಕಳೆದುಕೊಂಡವರ ಮನದ ಆತಂಕ ಕಡಿಮೆಯಾಗಿಲ್ಲ. ಗುರಿ ಕಾಣದ ಬದುಕು ಮುಂದೆ ಹೇಗೆ ಎನ್ನುವ ನಿರಾಶೆಯ ಆಲೋಚನೆಗಳು ನಿರಾಶ್ರಿತರನ್ನು ಕಾಡುತ್ತಲೇ ಇದೆ. 

ಈ ನಡುವೆ ವಿವಿಧ ಸಂಘ, ಸಂಸ್ಥೆಗಳು, ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ನೊಂದವರಿಗೆ ಅಭಯ ನೀಡುತ್ತಲೇ ಬರುತ್ತಿದ್ದು, ರಾಜಕಾರಣಿಗಳ ಭೇಟಿ ಕಾರ್ಯಕ್ರಮ ಹೆಚ್ಚಾಗುತ್ತಲೇ ಇದೆ. ಸಂಸದ ಪ್ರತಾಪ್ ಸಿಂಹ ಹೆಚ್ಚು ಹಾನಿಗೊಳಗಾಗಿರುವ ಮಂಗಳೂರು ರಸ್ತೆಯ ತಾಳತ್ತಮನೆ, ಕಾಟಕೇರಿ, ಮದೆನಾಡು ಹಾಗೂ ಜೋಡುಪಾಲ ಭಾಗಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಈ ಪ್ರದೇಶದಲ್ಲಿ ಒಂದು ಜೀಪ್, ಪಿಕ್‍ಅಪ್ ಜೀಪ್ ಹಾಗೂ ಕಾರೊಂದು ಕೆಸರಿನಲ್ಲಿ ಹುದುಗಿ ಹೋಗಿರುವ ದೃಶ್ಯ ಕಂಡು ಬಂದಿದೆ. ಅನೇಕ ಮನೆಗಳು ಕುಸಿದ ಗುಡ್ಡಗಳ ಮಣ್ಣಿನಡಿ ಸಿಲುಕಿಕೊಂಡಿವೆ. ಬೃಹತ್ ಮರಗಳು ಎತ್ತರದ ಪ್ರದೇಶದಿಂದ ಉರುಳಿ ಬಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದಿದ್ದು, ಇದು ಮಹಾಮಳೆಯ ದಾಳಿಯ ಭೀಕರತೆಗೆ ಸಾಕ್ಷಿಯಾಗಿದೆ. 

ಹಾನಿಗೊಳಗಾಗದ ಮಕ್ಕಂದೂರು ಹಾಗೂ ಹೆಮ್ಮೆತಾಳು ಗ್ರಾಮಕ್ಕೆ ರಾಜ್ಯಸಭೆಯ ಮಾಜಿ ಸದಸ್ಯೆ ಪ್ರೇಮಕಾರ್ಯಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಕೆ.ಎ.ಯಾಕುಬ್ ಮತ್ತಿತರರು ಭೇಟಿ ನೀಡಿ ಪರಿಶೀಲಿಸಿದರು.

ಕಳ್ಳತನದ ಬಗ್ಗೆ ಮುಂಜಾಗೃತೆ
ಮಳೆಹಾನಿಯಿಂದ ಅಪಾಯದಂಚಿನ ಮನೆಗಳನ್ನು ಅನೇಕರು ತೊರೆದಿದ್ದು, ಈ ರೀತಿಯ ನಿರ್ಜನ ಪ್ರದೇಶಗಳಿಗೆ ಚೋರರು ಲಗ್ಗೆ ಇಟ್ಟು ಕಳ್ಳತನದಲ್ಲಿ ತೊಡಗಿರುವ ಬಗ್ಗೆ ದೂರುಗಳು ವ್ಯಾಪಕವಾಗಿ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಇಂದು ಡಿಸಿಐಬಿ ತಂಡ ಹೆಬ್ಬೆಟ್ಟಗೇರಿ, ದೇವಸ್ತೂರು, ಕಾಲೂರು ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿತ್ತು. 

ಉಳಿದಂತೆ ಪರಿಹಾರ ಕೇಂದ್ರಗಳಲ್ಲಿ ಸಂತ್ರಸ್ಥರಿಗೆ ಯಾವುದೇ ಕೊರತೆಗಳು ಉಂಟಾಗದಂತೆ ಅಧಿಕಾರಿಗಳು ಹಾಗೂ ಸ್ವಯಂ ಸೇವಕರು ಕ್ರಮ ಕೈಗೊಂಡಿದ್ದಾರೆ. ಶನಿವಾರ ಮಣ್ಣಿನಡಿ ಸಿಲುಕಿದ್ದ ಮೂರು ಮೃತ ದೇಹಗಳನ್ನು ಹೊರ ತೆಗೆಯಲಾಗಿತ್ತು. ಆದರೆ ಇಂದು ಯಾವುದೇ ಶವಗಳು ದೊರೆತ್ತಿಲ್ಲವೆಂದು ಜಿಲ್ಲಾಡಳಿತ ತಿಳಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X