Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪರಿಸರ ಸೂಕ್ಷ್ಮಪಶ್ಚಿಮ ಘಟ್ಟಗಳ ರಕ್ಷಣೆಗೆ...

ಪರಿಸರ ಸೂಕ್ಷ್ಮಪಶ್ಚಿಮ ಘಟ್ಟಗಳ ರಕ್ಷಣೆಗೆ ಕ್ರಮ ಕೈಗೊಳ್ಳಲು ಹವಾಮಾನ ತಜ್ಞರ ಕರೆ

ವಾರ್ತಾಭಾರತಿವಾರ್ತಾಭಾರತಿ26 Aug 2018 10:03 PM IST
share
ಪರಿಸರ ಸೂಕ್ಷ್ಮಪಶ್ಚಿಮ ಘಟ್ಟಗಳ ರಕ್ಷಣೆಗೆ ಕ್ರಮ ಕೈಗೊಳ್ಳಲು ಹವಾಮಾನ ತಜ್ಞರ ಕರೆ

 ಕೊಚ್ಚಿ,ಆ.26: ಕೇರಳದಲ್ಲಿ ನೂರಾರು ಜನರನ್ನು ಬಲಿ ತೆಗೆದುಕೊಂಡು ಸಾವಿರಾರು ಜನರನ್ನು ನಿರ್ವಸಿತರನ್ನಾಗಿಸಿರುವ ಇತ್ತೀಚಿನ ಭಾರೀ ಮಳೆ ಮತ್ತು ನೆರೆಗೆ ಹವಾಮಾನ ಬದಲಾವಣೆ ಕಾರಣವಾಗಿತ್ತು ಎಂದು ದಿಲ್ಲಿಯ ವಿಜ್ಞಾನ ಮತ್ತು ವಾತಾವರಣ ಕೇಂದ್ರ(ಸಿಎಸ್‌ಇ)ದ ಉಪ ಮಹಾ ನಿರ್ದೇಶಕ ಚಂದ್ರ ಭೂಷಣ್ ಅವರು ರವಿವಾರ ಹೇಳಿದರು.

 ಪದೇಪದೇ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವುದು ಮತ್ತು ಅದರಿಂದಾಗಿ ದಿಢೀರ್ ಪ್ರವಾಹಗಳು ಉಂಟಾಗುತ್ತಿರುವುದನ್ನ್ನು ಗಣನೆಗೆ ತೆಗೆದುಕೊಂಡು ದೇಶದಲ್ಲಿಯ ಜಲಾಶಯ ನಿರ್ವಹಣೆ ವ್ಯವಸ್ಥೆಯ ಮರು ಮೌಲ್ಯಮಾಪನವನ್ನು ನಡೆಸಬೇಕಾಗಿದೆ ಎಂದು ಸುದ್ದಿಸಂಸ್ಥೆಗೆ ತಿಳಿಸಿದ ಅವರು,ಕೇರಳದಲ್ಲಿ ನೆರೆ ಪ್ರಕೋಪಕ್ಕೆ ಹವಾಮಾನ ಬದಲಾವಣೆ ಕಾರಣವಾಗಿತ್ತು ಮತ್ತು ನಿರ್ದಿಷ್ಟವಾಗಿ ಕೇರಳದಲ್ಲಿಯ ಪಶ್ಚಿಮ ಘಟ್ಟಗಳು ಮತ್ತು ಇತರ ಪರಿಸರ ಸೂಕ್ಷ್ಮ ಪ್ರದೇಶಗಳ ಕುರಿತು ಕೆಟ್ಟ ಅಭಿವೃದ್ಧಿ ಪದ್ಧತಿಗಳಿಂದಾಗಿ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿತ್ತು ಎಂದರು.

ಉತ್ತರಾಖಂಡ,ಜಮ್ಮು-ಕಾಶ್ಮೀರ ಮತ್ತು ಚೆನ್ನೈ ಸೇರಿದಂತೆ ಈ ಶತಮಾನದಲ್ಲಿ ದೇಶದ ವಿವಿಧ ಭಾಗಗಳಲ್ಲಿ ಅತಿಯಾದ ಮಳೆ ಸುರಿದ ಘಟನೆಗಳು ಮತ್ತು ತತ್ಸಂಬಂಧಿ ದಿಢೀರ್ ನೆರೆಗಳಿಗೆ ಹವಾಮಾನ ಬದಲಾವಣೆ ಕಾರಣವಾಗಿತ್ತು ಎಂದ ಅವರು,ತಾಪಮಾನ ಹೆಚ್ಚುತ್ತಿರುವುದನ್ನು ಮತ್ತು ಅತಿಯಾದ ಮಳೆ ಸುರಿಯುವ ಘಟನೆಗಳು ಪುನರಾವರ್ತನೆಯಾಗುವ ಸ್ಪಷ್ಟ ಸಂಕೇತವನ್ನು ಗಣನೆಗೆ ತೆಗೆದುಕೊಂಡು ನಮ್ಮ ಜಲಾಶಯ ನಿರ್ವಹಣೆ ಪದ್ಧತಿಗಳನ್ನು ಮರು ಮೌಲ್ಯಮಾಪನಗೊಳಿಸಬೇಕಿದೆ ಎಂದರು.

ವಿಪರೀತ ಹವಾಮಾನ ಬದಲಾವಣೆ ಸಂಬಂಧಿತ ಘಟನೆಗಳಿಂದ ಜನರ ಜೀವಗಳನ್ನು ರಕ್ಷಿಸಲು ಉತ್ತಮ ಮುನ್ಸೂಚನೆ ವ್ಯವಸ್ಥೆ ಮತ್ತು ಉತ್ತಮ ಎಚ್ಚರಿಕೆ ವ್ಯವಸ್ಥೆಗಳನ್ನು ರೂಪಿಸಬೇಕು ಎಂದು ಪ್ರತಿಪಾದಿಸಿದ ಅವರು,ಪಶ್ಚಿಮ ಘಟ್ಟಗಳ ವಿನಾಶವು ಕೇರಳದಲ್ಲಿ ವ್ಯಾಪಕ ಪರಿಣಾಮಗಳನ್ನು ಬೀರಿದೆ ಎಂದರು.

ಪಶ್ಚಿಮ ಘಟ್ಟಗಳ ಕುರಿತ ಮಾಧವ ಗಾಡ್ಗೀಳ್ ಅಥವಾ ಕಸ್ತೂರಿರಂಗನ್ ಸಮಿತಿಗಳ ವರದಿಗಳ ಅನುಷ್ಠಾನಕ್ಕೆ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಕೇಂದ್ರ ಮತ್ತು ರಾಜ್ಯ ಸರಕಾರಗಳನ್ನು ಆಗ್ರಹಿಸಿದರು.

ಭಾರೀಪ್ರಮಾಣದ ಅರಣ್ಯನಾಶ,ಗಣಿಗಾರಿಕೆ ಮತ್ತು ನಿರ್ಮಣ ಚಟುವಟಿಕೆಗಳು ಕೇರಳದ ಪರಿಸರಕ್ಕೆ ಹಾನಿಯನ್ನುಂಟು ಮಾಡುತ್ತಿವೆ. ಇಂತಹ ಹಾನಿಕಾರಕ ಚಟುವಟಿಕೆಗಳು ಕೇರಳದಲ್ಲಿ ವಿಪತ್ತು ಹಾನಿಯ ತೀವ್ರತೆಯನ್ನು ಹೆಚ್ಚಿಸುತ್ತವೆ ಎಂದ ಅವರು,ನೆರೆ ಹೇಗಿದ್ದರೂ ಬರುತ್ತಿತ್ತು. ಆದರೆ ಕೇರಳದಲ್ಲಿ ಪಶ್ಚಿಮ ಘಟ್ಟಗಳ ಮತ್ತು ಇತರ ಪರಿಸರ ಸೂಕ್ಷ್ಮ ಪ್ರದೇಶಗಳ ನಾಶವು ನೆರೆಯ ಪರಿಣಾಮವನ್ನು ತೀವ್ರಗೊಳಿಸಿತ್ತು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X