Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹತ್ಯೆ ಸಂಸ್ಕೃತಿ ಇಂದಿಗೂ ಮುಂದುವರಿದಿದೆ:...

ಹತ್ಯೆ ಸಂಸ್ಕೃತಿ ಇಂದಿಗೂ ಮುಂದುವರಿದಿದೆ: ಡಾ.ಎಚ್.ಎಸ್.ಅನುಪಮಾ

ವಾರ್ತಾಭಾರತಿವಾರ್ತಾಭಾರತಿ26 Aug 2018 10:27 PM IST
share

ಬೆಂಗಳೂರು, ಆ.26: ವ್ಯವಸ್ಥೆಯಲ್ಲಿರುವ ಅನಾಚಾರಗಳನ್ನು ಪ್ರಶ್ನಿಸುವವರನ್ನು ಪಟ್ಟಭದ್ರ ಹಿತಾಸಕ್ತಿಗಳು ಹತ್ಯೆ ಮಾಡುವ ಪರಿಪಾಠ ಇಂದಿಗೂ ಮುಂದುವರಿಯುತ್ತಿರುವುದು ವಿಪರ್ಯಾಸ ಎಂದು ಲೇಖಕಿ ಡಾ.ಎಚ್.ಎಸ್.ಅನುಪಮಾ ವಿಷಾಧ ವ್ಯಕ್ತಪಡಿಸಿದ್ದಾರೆ.

ರವಿವಾರ ನಗರದ ಕಪ್ಪಣ್ಣ ಅಂಗಳದಲ್ಲಿ ದೇಸಿ ಪುಸ್ತಕ ಪ್ರಕಾಶನದಿಂದ ಆಯೋಜಿಸಿದ್ದ ಮಮತ ಜಿ.ಸಾಗರ ಅವರ ಅನುವಾದಿತ ಕೃತಿ ‘ಪ್ರೀತಿಯ ನಲವತ್ತು ನಿಯಮಗಳು’ ಕೃತಿ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಆಳುವ ವರ್ಗವನ್ನು ಹಾಗೂ ಸಮಾಜದಲ್ಲಿ ಅನಾಚಾರವನ್ನು ಪ್ರಶ್ನಿಸಿದರು ಎಂಬ ಕಾರಣಕ್ಕಾಗಿ 13ನೇ ಶತಮಾನದಲ್ಲಿ ಸಮಾಜಸುಧಾರಕ ಬಸವಣ್ಣರನ್ನು ಹತ್ಯೆ ಮಾಡಲಾಯಿತು. ಅಲ್ಲಿಂದ ಆರಂಭಗೊಂಡಿರುವ ಈ ಸಂಸ್ಕೃತಿ ಇಂದು ಸತ್ಯವನ್ನು ಬಯಲು ಮಾಡಿದರು ಎಂದು ನಾಡಿನ ಹಿರಿಯ ಸಂಶೋಧಕ ಎಂ.ಎಂ.ಕಲಬುರ್ಗಿ, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್, ಧಾಬೋಲ್ಕರ್, ಪನ್ಸಾರೆ ಸೇರಿದಂತೆ ಅನೇಕರನ್ನು ಕೊಲೆ ಮಾಡಲಾಗಿದೆ ಎಂದು ಹೇಳಿದರು.

ನಾಡಿನಲ್ಲಿ ಸಾಮಾಜಿಕ ನ್ಯಾಯ ಪ್ರತಿಪಾದನೆ ಮಾಡುವ ಪ್ರಗತಿಪರ ಚಿಂತಕರ ಮೇಲೆ ದಬ್ಬಾಳಿಕೆಗಳು ನಡೆಯುತ್ತಿವೆ ಎಂದ ಅವರು, ಅಧಿಕಾರ ಹಿಂಸಾತ್ಮಕ ಹಾಗೂ ಅನೈತಿಕವಾಗದಿರಲು ಆಧ್ಯಾತ್ಮಿಕ ಬೆಳಕು ಬೇಕಿದೆ. ಪ್ರಗತಿಪರ ಮಠಾಧೀಶರಾದ ನಿಡುಮಾಮಿಡಿ ಮಠದ ವೀರಭದ್ರಚನ್ನಮಲ್ಲ ಸ್ವಾಮೀಜಿ, ತೋಂಟದಾಚಾರ್ಯ ಸ್ವಾಮೀಜಿ, ಸಾಮಾಜಿಕ ಚಿಂತಕ ಸ್ವಾಮಿ ಅಗ್ನಿವೇಶ್ ಸೇರಿದಂತೆ ಅನೇಕರು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

‘ಪ್ರೀತಿಯ ನಲವತ್ತು ನಿಯಮಗಳು’ ಕೃತಿಯು 13ನೆ ಶತಮಾನದಲ್ಲಿನ ರಾಜಕೀಯ ಮತ್ತು ಧಾರ್ಮಿಕ ಸಂಘರ್ಷವನ್ನು ತೋರಿಸುಕೊಡುತ್ತಿದೆ. ಅಲ್ಲದೆ, ಕೃತಿಯು ಎಲ್ಲವನ್ನೂ ಅವಸರವಾಗಿ ಮುಗಿಸಿಬಿಡಬೇಕು ಎಂಬ ಆತಂಕವಿಲ್ಲದೆ, ಎಲ್ಲವನ್ನು ವಿವರವಾಗಿ ಹೆಣೆದಿದ್ದಾರೆ. 13ನೆ ಶತಮಾನದಲ್ಲಿ ಮುಸ್ಲಿಮ್ ಮತ್ತು ಕ್ರೈಸ್ತರ ನಡುವಿನ ಸಂಘರ್ಷದ ಸಮಯದಲ್ಲಿಯೂ ರೂಮಿಯೊ ಅಂತರ್ ಧರ್ಮೀಯ ವಿವಾಹ ಆಗುವ ಮೂಲಕ ಸೌಹಾರ್ದತೆಯನ್ನು ಮೆರೆದಿದ್ದಾರೆ. ಅದನ್ನು ಕೃತಿ ವಿವರಿಸಿದೆ ಎಂದು ಶ್ಲಾಘಿಸಿದರು.

ಅನುವಾದಕಿ ಮಮತಾ ಜಿ.ಸಾಗರ ಮಾತನಾಡಿ, ಧಾರ್ಮಿಕ ಮೂಲಭೂತವಾದ ಇಂದು ಜಗತ್ತನ್ನು ಆವರಿಸಿಕೊಳ್ಳುತ್ತಿದೆ. ಈ ವೇಳೆ ಪ್ರೀತಿಯ ಮಾತನಾಡುವುದು ಅತ್ಯವಶ್ಯಕ ಅನ್ನಿಸಿದ್ದರಿಂದ ಈ ಕೃತಿ ಅನುವಾದ ಮಾಡಲಾಗಿದೆ. ದೇಶದಲ್ಲಿ ಎಲ್ಲ ಧರ್ಮಗಳ ಎಲ್ಲ ಗಡಿಗಳನ್ನು ಮೀರಿ ಚಲಾವಣೆಯಲ್ಲಿ ಕಂಡು ಬರುತ್ತಿದೆ. ಅದರಲ್ಲಿಯೂ ವಿಶೇಷವಾಗಿ ಭಾರತದಲ್ಲಿ ಸಾಂಕ್ರಾಮಿಕ ರೋಗದ ರೀತಿಯಲ್ಲಿ ಹಬ್ಬುತ್ತಿದೆ ಎಂದು ಹೇಳಿದರು.

ದೇಶದಲ್ಲಿ ಕೆಲವರು ಬಹುತೇಕರನ್ನು ಏನನ್ನು ತಿನ್ನಬೇಕು, ಯಾವ ರೀತಿಯಲ್ಲಿ ಬಟ್ಟೆ ತೊಡಬೇಕು. ಯಾರನ್ನು ಪ್ರೀತಿಸಬೇಕು, ಯಾರನ್ನು ಮದುವೆಯಾಗಬೇಕು, ನಮ್ಮವರು ಯಾರು ಎಂಬುದನ್ನು ತೀರ್ಮಾನ ಮಾಡುತ್ತಿದ್ದಾರೆ. ಯಾವ ಭಾಷಾ ಸಾಹಿತ್ಯ ಯಾವ ಧರ್ಮದ ಜೊತೆಗೆ ಸಮೀಕರಣಗೊಳ್ಳಬೇಕು ಎಂಬ ಪೂರ್ವಾಗ್ರಹ ಪೀಡಿತರಾಗಿ ವಾದ ಮಾಡಲಾಗುತ್ತಿದೆ. ಮೂಲಭೂತ ಹಕ್ಕುಗಳನ್ನು ಹತ್ತಿಕ್ಕುವ ಸಾಹಸಗಳು ಪ್ರಜಾಸತ್ತಾತ್ಮಕ ನಾಡಿನಲ್ಲಿ ಸಾಮಾನ್ಯವಾಗಿಬಿಟ್ಟಿದೆ ಎಂದು ತಿಳಿಸಿದರು.

ಈ ಕಾದಂಬರಿಯಲ್ಲಿ ಅಸಾಧಾರಣ ಘಟನೆಗಳು, ಪಾತ್ರಗಳು, ಸಂಬಂಧಗಳು, ಧಾರ್ಮಿಕ ಮೂಲಭೂತವಾದದ ಕುಮ್ಮಕ್ಕಿಗೊಳಗಾಗುವ ದ್ವೇಷಗಳು, ಈ ಎಲ್ಲ ಅಡೆತಡೆಗಳನ್ನೂ ಮೀರಿ ಗೋಚರಿಸುವ ಪ್ರೀತಿಯ ಹಾತೊರಿಕೆ, ಅಮಿತ ಪ್ರೇಮದ ಸಾಕ್ಷಾತ್ಕಾರ ಎಲ್ಲರಿಗೂ ತಕ್ಕಬೇಕೆಂಬ ನಿಟ್ಟಿನಲ್ಲಿ ಈ ಕೃತಿ ಅನುವಾದ ಮಾಡಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಕಥೆಗಾರ ವಿವೇಶ ಶಾನುಬೋಗ ಉಪಸ್ಥಿತರಿದ್ದರು.

‘ಜಗತ್ತಿನಲ್ಲಿ ಅನ್ನಕ್ಕಾಗಿ, ನೀರಿಗಾಗಿ, ವಾಸಿಸುವ ಸ್ಥಳಕ್ಕಾಗಿ ಬರಗಾಲವಿಲ್ಲ. ಆದರೆ, ವ್ಯಕ್ತಿಗಳ ನಡುವಿನ ಪ್ರೀತಿಗೆ ಹೆಚ್ಚು ಬರಗಾಲವಿದೆ. ಪ್ರೇಮಕ್ಕಿರುವ ಶಕ್ತಿ ಅಪಾರವಾದುದು. ಅದನ್ನು ಮೀರಿದ್ದು, ಬೇರೊಂದಿಲ್ಲ’
-ಡಾ.ಎಚ್.ಎಸ್.ಅನುಪಮಾ ಲೇಖಕಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X