Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಾರಿಖ್ ಕಾಸಿಮಿ ಪ್ರಕರಣ: ಎರಡು ನಿಮಿಷಗಳ...

ತಾರಿಖ್ ಕಾಸಿಮಿ ಪ್ರಕರಣ: ಎರಡು ನಿಮಿಷಗಳ ತೀರ್ಪು ನ್ಯಾಯದ ಕೊಲೆ: ಆರೋಪಿ ಪರ ವಕೀಲ

ವಾರ್ತಾಭಾರತಿವಾರ್ತಾಭಾರತಿ26 Aug 2018 11:02 PM IST
share
ತಾರಿಖ್ ಕಾಸಿಮಿ ಪ್ರಕರಣ: ಎರಡು ನಿಮಿಷಗಳ ತೀರ್ಪು ನ್ಯಾಯದ ಕೊಲೆ: ಆರೋಪಿ ಪರ ವಕೀಲ

ಲಖ್ನೋ,ಆ.26: 2007ರ ಬಾಂಬ್ ಸ್ಫೋಟದ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ನೀಡಿರುವ ಎರಡು ನಿಮಿಷಗಳ ತೀರ್ಪು ನ್ಯಾಯದ ಕೊಲೆಯಾಗಿದೆ ಎಂದು ಆರೋಪಿಗಳ ಪರ ವಕೀಲರು ಆರೋಪಿಸಿದ್ದಾರೆ. ಈ ಕುರಿತು ಶನಿವಾರ ಸುದ್ದಿಗೋಷ್ಠಿ ನಡೆಸಿದ ನ್ಯಾಯವಾದಿ ಮುಹಮ್ಮದ್ ಶುಐಬ್, ಹನ್ನೊಂದು ವರ್ಷಗಳ ಸುದೀರ್ಘ ವಿಚಾರಣೆಯ ನಂತರ ಪ್ರಕರಣದ ತೀರ್ಪನ್ನು ಕೇವಲ ಎರಡು ನಿಮಿಷಗಳಲ್ಲಿ ನೀಡಿರುವುದು ನ್ಯಾಯದ ಕೊಲೆ ಎಂದು ವ್ಯಾಖ್ಯಾನಿಸಿದ್ದಾರೆ.

ತಾರಿಖ್ ಕಾಸಿಮಿ ಮತ್ತು ಮುಹಮ್ಮದ್ ಅಖ್ತರ್ ಪ್ರಕರಣವು ಆಗಸ್ಟ್ 16ರಂದು ಜೈಲ್ ನ್ಯಾಯಾಲಯದಲ್ಲಿ ವಿಚಾರಣೆಗೆ ಬಂತು. ತನ್ನ ವಾದವನ್ನು ಮುಂದುವರಿಸಿದ ಪ್ರಾಸಿಕ್ಯೂಶನ್ ಲಿಖಿತ ವಾದ ಮತ್ತು ದಾಖಲೆಗಳನ್ನು ಒಪ್ಪಿಸಲು ಸಮಯಾವಕಾಶವನ್ನು ಕೋರಿತು. ಅವರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಆಗಸ್ಟ್ 23ಕ್ಕೆ ನಿಗದಿಪಡಿಸಿತು.

“ಪ್ರತಿ ಬಾರಿ ವಿಚಾರಣೆಯಂದು ನ್ಯಾಯಾಧೀಶೆ ಬೆಳಿಗ್ಗೆ 11-11.30ರ ಒಳಗೆ ನ್ಯಾಯಾಲಯಕ್ಕೆ ಆಗಮಿಸುತ್ತಿದ್ದರು. ಆದರೆ ಆಗಸ್ಟ್ 23ರಂದು ಆಕೆ ತನ್ನ ಜೈಲ್ ನ್ಯಾಯಾಲಯದಲ್ಲಿರುವ ಕೋಣೆಗೆ ಮಧ್ಯಾಹ್ನ 3.35ಕ್ಕೆ ತಲುಪಿದರು. ನಾನು ಮತ್ತು ಇಬ್ಬರು ಆರೋಪಿಗಳು ಆಕೆಗಾಗಿ ನ್ಯಾಯಾಲಯದಲ್ಲಿ ದಿನವಿಡೀ ಕಾದುಕುಳಿತಿದ್ದೆವು. ಸಂಜೆ ನಾಲ್ಕು ಗಂಟೆಯ ಹೊತ್ತಿಗೆ ತನ್ನ ವಿಶ್ರಾಂತಿ ಕೊಠಡಿಯಿಂದ ಹೊರಬಂದ ನ್ಯಾಯಾಧೀಶೆ ಎರಡು ನಿಮಿಷಗಳಲ್ಲಿ ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿ, ಶಿಕ್ಷೆಯ ಪ್ರಮಾಣವನ್ನು ಆಗಸ್ಟ್ 27ರಂದು ಪ್ರಕಟಿಸುವುದಾಗಿ ತಿಳಿಸಿ ಮರಳಿ ತಮ್ಮ ವಿಶ್ರಾಂತಿ ಕೋಣೆಗೆ ತೆರಳಿದರು” ಎಂದು ಮುಹಮ್ಮದ್ ಶೊಐಬ್ ತಿಳಿಸಿದ್ದಾರೆ.

2007ರ ನವೆಂಬರ್ 23ರಂದು ಲಖ್ನೋ ನ್ಯಾಯಾಲಯದಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ತಾರಿಖ್ ಕಾಸಿಮಿ, ಖಾಲಿದ್ ಮುಜಾಹಿದ್, ಸಜ್ಜಾದುರ್ರಹ್ಮಾನ್, ಅಖ್ತರ್ ವಾನಿ, ಅಫ್ತಾಬ್ ಆಲಂ ಅನ್ಸಾರಿಯನ್ನು ಪೊಲೀಸರು ಬಂಧಿಸಿದ್ದರು. ಸಾಕ್ಷಿ ಕೊರತೆಯ ಕಾರಣ ಬಂಧನದ 22 ದಿನಗಳ ನಂತರ ಅನ್ಸಾರಿಯನ್ನು ಬಿಡುಗಡೆಗೊಳಿಸಲಾಗಿತ್ತು. ಸಜ್ಜಾದುರ್ರಹ್ಮಾನ್‌ನನ್ನು 2011ರಲ್ಲಿ ನ್ಯಾಯಾಲಯ ನಿರ್ದೋಷಿಯೆಂದು ಬಿಡುಗಡೆಗೊಳಿಸಿತ್ತು. ತಾರಿಖ್ ಕಾಸಿಮಿ ಮತ್ತು ಖಾಲಿದ್ ಮುಜಾಹಿದ್ ಬಂಧನದ ಬಗ್ಗೆ ಸಂಶಯ ವ್ಯಕ್ತಪಡಿಸಿದ ಆರ್.ಡಿ ನಿಮೇಶ್ ಆಯೋಗ ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲು ಸಲಹೆ ನೀಡಿತ್ತು.

ಖಾಲಿದ್ ವಿಚಾರಣೆಯ ನಂತರ ಫೈಝಾಬಾದ್ ನ್ಯಾಯಾಲಯದಿಂದ ಲಖ್ನೋ ಜೈಲಿಗೆ ಸಾಗುವ ಮಧ್ಯೆ ನಿಗೂಡ ರೀತಿಯಲ್ಲಿ ಸಾವನ್ನಪ್ಪಿದ್ದರು. ಈ ಸಾವಿನ ಬಗ್ಗೆ ರಾಜ್ಯ ಸರಕಾರ ಸಿಬಿಐ ತನಿಖೆಗೆ ಆದೇಶ ನೀಡಿತ್ತು. ಆದರೆ ತಾಂತ್ರಿಕ ನೆಲೆಯಲ್ಲಿ ಸಿಬಿಐ ಈ ಪ್ರಕರಣದ ತನಿಖೆ ನಡೆಸಲು ನಿರಾಕರಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X