Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಮಾಜಿಕ ಪಿಡುಗುಗಳನ್ನು ಎದುರಿಸಲು...

ಸಾಮಾಜಿಕ ಪಿಡುಗುಗಳನ್ನು ಎದುರಿಸಲು ರಾಜಕೀಯ ಇಚ್ಛೆ ಮತ್ತು ಆಡಳಿತ ಕೌಶಲ್ಯ ಅಗತ್ಯ: ನಾಯ್ಡು

ವಾರ್ತಾಭಾರತಿವಾರ್ತಾಭಾರತಿ27 Aug 2018 8:51 PM IST
share
ಸಾಮಾಜಿಕ ಪಿಡುಗುಗಳನ್ನು ಎದುರಿಸಲು ರಾಜಕೀಯ ಇಚ್ಛೆ ಮತ್ತು ಆಡಳಿತ ಕೌಶಲ್ಯ ಅಗತ್ಯ: ನಾಯ್ಡು

ಹೊಸದಿಲ್ಲಿ,ಆ.27: ಸಾಮಾಜಿಕ ಪಿಡುಗುಗಳನ್ನು ತಡೆಯಲು ಹೊಸ ಕಾನೂನಿಗಿಂತ ರಾಜಕೀಯ ಇಚ್ಛಾಶಕ್ತಿ ಮತ್ತು ಆಡಳಿತಾತ್ಮಕ ಕೌಶಲ್ಯಗಳು ಹೆಚ್ಚು ಮುಖ್ಯವಾಗಿವೆ. ಕೇವಲ ಕಾನೂನು ರಚನೆಯಿಂದ ಅಪರಾಧವನ್ನು ನಿಲ್ಲಿಸಲು ಅಥವಾ ವ್ಯವಸ್ಥೆಯನ್ನು ಬದಲಿಸಲು ಸಾಧ್ಯವಿಲ್ಲ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಸೋಮವಾರ ಇಲ್ಲಿ ಹೇಳಿದರು.

ಪೊಲೀಸ್ ಸಂಶೋಧನಾ ಮತ್ತು ಅಭಿವೃದ್ಧಿ ಘಟಕ(ಬಿಪಿಆರ್‌ಡಿ)ದ 48ನೇ ಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣವನ್ನು ಮಾಡಿದ ಅವರು,ಏನೇ ಸಂಭವಿಸಿದರೂ ಹೊಸ ಕಾನೂನು ತರಲು ನಾವು ಆಗ್ರಹಿಸುತ್ತೇವೆ ಮತ್ತು ಅದು ನಮ್ಮ ದೌರ್ಬಲ್ಯವಾಗಿದೆ. ಹೊಸ ಕಾನೂನು ಎಲ್ಲ ಅಪರಾಧಗಳನ್ನೂ ತಡೆಯುತ್ತದೆಯೇ ಎಂದು ಪ್ರಶ್ನಿಸಿದರು.

ಅಪರಾಧಗಳ ತಡೆಗೆ ಮತ್ತು ಭ್ರಷ್ಟಾಚಾರ ನಿಗ್ರಹಕ್ಕೆ ಇತ್ತೀಚಿಗೆ ಕಾನೂನಿನಲ್ಲಿಯ ತಿದ್ದುಪಡಿಗಳು ಮತ್ತು ಹೊಸ ಕಾನೂನುಗಳನ್ನು ಪ್ರಸ್ತಾಪಿಸಿದ ಅವರು,ಹೊಸ ಕಾನೂನೊಂದೇ ಸಾಕಾಗುವುದಿಲ್ಲ ಎಂದು ತಾನು ಹಿಂದೆಯೂ ಹೇಳಿದ್ದೇನೆ. ಅದರೊಂದಿಗೆ ರಾಜಕೀಯ ಇಚ್ಛಾಶಕ್ತಿ ಮತ್ತು ಆಡಳಿತಾತ್ಮಕ ಕೌಶಲ್ಯಗಳು ಹೆಚ್ಚು ಅಗತ್ಯವಾಗಿವೆ. ಎಷ್ಟೇ ಕಾನೂನುಗಳನ್ನು ಮಾಡಿದರೂ ವ್ಯವಸ್ಥೆಯನ್ನು ಬದಲಿಸಲು ಸಾಧ್ಯವಿಲ್ಲ. ಅವು ಬೇಕು,ತಾನದನ್ನು ನಿರಾಕರಿಸುವುದಿಲ್ಲ ಎಂದರು.

ಕೇಂದ್ರದ ನೋಟು ನಿಷೇಧ ಮತ್ತು ಜನಧನ ಖಾತೆಗಳ ಆರಂಭ ಕ್ರಮಗಳನ್ನು ಪ್ರಶಂಸಿಸಿದ ಅವರು,ನೋಟು ನಿಷೇಧದಿಂದಾಗಿ ಎಲ್ಲ ಕಪ್ಪುಹಣವೂ ಬ್ಯಾಂಕುಗಳಲ್ಲಿ ಜಮೆಯಾಗಿವೆ ಮತ್ತು ವ್ಯವಸ್ಥೆಯಲ್ಲಿ ಸೇರಿದೆ. ಯಾವುದು ಕಪ್ಪು ಮತ್ತು ಯಾವುದು ಬಿಳಿ ಎನ್ನುವುದನ್ನು ಪತ್ತೆ ಹಚ್ಚುವುದು ಈಗ ಆರ್‌ಬಿಐ ಮತ್ತು ಆದಾಯ ತೆರಿಗೆ ಇಲಾಖೆಯ ಕೆಲಸವಾಗಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X