Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿಪಾಲದಲ್ಲಿ ಅಂ.ರಾ. ಆಂಗ್ಲ ಭಾಷೆಯ...

ಮಣಿಪಾಲದಲ್ಲಿ ಅಂ.ರಾ. ಆಂಗ್ಲ ಭಾಷೆಯ ಪರೀಕ್ಷಾ ವ್ಯವಸ್ಥೆ

ಮಾಹೆ- ಬ್ರಿಟಿಷ್ ಕೌನ್ಸಿಲ್ ನಡುವೆ ಒಪ್ಪಂದಕ್ಕೆ ಸಹಿ

ವಾರ್ತಾಭಾರತಿವಾರ್ತಾಭಾರತಿ27 Aug 2018 9:30 PM IST
share
ಮಣಿಪಾಲದಲ್ಲಿ ಅಂ.ರಾ. ಆಂಗ್ಲ ಭಾಷೆಯ ಪರೀಕ್ಷಾ ವ್ಯವಸ್ಥೆ

ಮಣಿಪಾಲ, ಆ.27: ಮಣಿಪಾಲ ಕ್ಯಾಂಪಸ್‌ನ ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಇಂಗ್ಲಿಷ್ ಭಾಷಾ ಪರೀಕ್ಷಾ ವ್ಯವಸ್ಥೆ (ಐಇಎಲ್‌ಟಿಎಸ್) ಲಭ್ಯವಿರುವ ಒಪ್ಪಂದವೊಂದಕ್ಕೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ಹಾಗೂ ಬ್ರಿಟಿಷ್ ಕೌನ್ಸಿಲ್ ನಡುವೆ ಇಂದು ಸಹಿ ಹಾಕಲಾಯಿತು.

ಸೋಮವಾರ ಈ ಕುರಿತಂತೆ ಮಾಹೆಯ ಕುಲಪತಿ ಡಾ.ಎಚ್.ವಿನೋದ್ ಭಟ್ ಹಾಗೂ ಬ್ರಿಟಿಷ್ ಕೌನ್ಸಿಲ್ ಎಕ್ಸಾಮಿನೇಷನ್ ಎಂಡ್ ಇಂಗ್ಲೀಷ್ ಸರ್ವಿಸಸ್ ಇಂಡಿಯಾ ಲಿ.ನ ಆಡಳಿತ ನಿರ್ದೇಶಕ ಮೈಕೆಲ್ ಕಿಂಗ್ ಅವರು ಮಣಿಪಾಲ ವಿವಿ ಬಿಲ್ಡಿಂಗ್‌ನಲ್ಲಿ ಒಪ್ಪಂದಕ್ಕೆ ಸಹಿ ಹಾಕಿದರು.

ಮಾಹೆಯ ಪ್ರೊ. ವೈಸ್ ಚಾನ್ಸಲರ್ ಡಾ.ಪೂರ್ಣಿಮಾ ಬಾಳಿಗಾ, ಗುಣಮಟ್ಟ ಅಧಿಕಾರಿ ಡಾ.ಪಿಎಲ್‌ಎನ್‌ಜಿ ರಾವ್, ರಿಜಿಸ್ಟ್ರಾರ್ ಡಾ.ನಾರಾಯಣ ಸಭಾಹಿತ್, ಅಂತಾರಾಷ್ಟ್ರೀಯ ರಿಲೇಷನ್ಸ್ ನಿರ್ದೇಶಕ ಡಾ.ರಘು ರಾಧಾಕೃಷ್ಣನ್, ಕೆಎಂಸಿಯ ಡೀನ್ ಡಾ.ಪ್ರಗ್ನಾ ರಾವ್ ಹಾಗೂ ಡಾ.ಅಪರ್ಣ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಒಪ್ಪಂದಕ್ಕೆ ಸಹಿ ಹಾಕುವ ಮುನ್ನ ಮೈಕೆಲ್ ಕಿಂಗ್ ಅವರು, ಮಾಹೆಯ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಅವರಿಗೆ ಐಇಎಲ್‌ಟಿಎಸ್‌ನ ಕುರಿತಂತೆ ಮಾಹಿತಿಗಳನ್ನು ನೀಡಿದರು. ಇದು ವಿದೇಶಗಳಿಗೆ ವಲಸೆ ಬರುವವರಿಗೆ ಹಾಗೂ ಸ್ನಾತಕೋತ್ತರ ಶಿಕ್ಷಣದಲ್ಲಿ ವಿಶ್ವದ ಅತ್ಯಂತ ಜನಪ್ರಿಯ ಆಂಗ್ಲ ಭಾಷಾ ಕುಶಲತೆ ಪರೀಕ್ಷೆಯಾಗಿದ್ದು, ಕಳೆದ ವರ್ಷ ವಿಶ್ವದ ಮೂರು ಮಿಲಿಯ ಅಭ್ಯರ್ಥಿಗಳು ಈ ಪರೀಕ್ಷೆಯನ್ನು ಬರೆದಿದ್ದರು ಎಂದರು.

ವಿಶ್ವದಾದ್ಯಂತದ ಸುಮಾರು 10,000ಕ್ಕೂ ಅಧಿಕ ಶಾಲೆ, ವಿವಿಗಳು, ಉದ್ಯೋಗದಾತ ಸಂಸ್ಥೆಗಳು, ವಲಸೆ ಅಧಿಕಾರಿಗಳು ಹಾಗೂ ವೃತ್ತಿಪರ ಮಂಡಳಿಗಳು ಇದನ್ನು ಒಪ್ಪಿಕೊಂಡಿವೆ ಎಂದರು. ವಲಸೆ ಪ್ರಕ್ರಿಯೆ ಹಾಗೂ ವೀಸಾ ಅರ್ಜಿಗಳಿಗೆ ಆಸ್ಟ್ರೇಲಿಯ, ಕೆನಡಾ, ನ್ಯೂಜಿಲಂಡ್ ಹಾಗೂ ಬ್ರಿಟನ್‌ಗಳ ವಲಸೆ ಅಧಿಕಾರಿಗಳು ಐಇಎಲ್‌ಟಿಎಸ್‌ನ ಇಂಗ್ಲೀಷ್ ಭಾಷಾ ಪರೀಕ್ಷೆಗೆ ಮಾತ್ರ ಮಾನ್ಯತೆ ನೀಡುತ್ತಿದ್ದಾರೆ ಎಂದು ಕಿಂಗ್ ವಿವರಿಸಿದರು.

ಕರ್ನಾಟಕದಲ್ಲಿ ಕೇವಲ ಬೆಂಗಳೂರು ಮತ್ತು ಮಂಗಳೂರುಗಳಲ್ಲಿ ಮಾತ್ರ ಐಇಎಲ್‌ಟಿಎಸ್ ಪರೀಕ್ಷೆ ಲಭ್ಯವಿದೆ. ಇದೀಗ ಮಣಿಪಾಲದಲ್ಲೂ ಮಾಹೆಯ ವಿದ್ಯಾರ್ಥಿಗಳಿಗೆ ಈ ಪರೀಕ್ಷೆಯನ್ನು ಬರೆಯಲು ಅವಕಾಶ ಸಿಗಲಿದೆ ಎಂದರು. ಇದರೊಂದಿಗೆ ಬ್ರಿಟಿಷ್ ಕೌನ್ಸಿಲ್ ಮೂರು ದಿನಗಳ ತರಬೇತಿದಾರರಿಗೆ ತರಬೇತಿ (ಟಿಟಿಟಿ) ಕಾರ್ಯಕ್ರಮವನ್ನು ಕಾಲೇಜುಗಳ ತರಬೇತುದಾರರಿಗೆ ಆಯೋಜಿಸಲಿದೆ ಎಂದು ಕಿಂಗ್ ನುಡಿದರು.

ಇಂದಿನ ಒಪ್ಪಂದದಿಂದ ಮಣಿಪಾಲದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿದೇಶಗಳಲ್ಲಿ ಉನ್ನತ ಶಿಕ್ಷಣ ಪಡೆಯಲು ಹೆಚ್ಚಿನ ಅವಕಾಶಗಳನ್ನು ನಾವು ಕಲ್ಪಿಸಲಿದ್ದೇವೆ. ಆಸಕ್ತರು ಸುಲಭವಾಗಿ ಐಇಎಲ್‌ಟಿಎಸ್ ಪರೀಕ್ಷೆಯನ್ನು ಬರೆದು ವಿದೇಶಗಳಲ್ಲಿ ಉದ್ಯೋಗ ಮಾಡುವ ಅಥವಾ ಹೆಚ್ಚಿನ ಶಿಕ್ಷಣವನ್ನು ಪಡೆಯುವ ತಮ್ಮ ಕನಸನ್ನು ನನಸು ಮಾಡಿಕೊಳ್ಳಬಹುದಾಗಿದೆ. ಅಲ್ಲದೇ ಅಂತಾರಾಷ್ಟ್ರೀಯ ಮಟ್ಟದ ಅವಕಾಶಕ್ಕಾಗಿ ವಿದೇಶಗಳಿಗೆ ವಲಸೆ ಹೋಗುವ ಆಕಾಂಕ್ಷಿಗಳಿಗೂ ಇದೊಂದು ಸುವರ್ಣ ಅವಕಾಶ ಎಂದೂ ಕಿಂಗ್ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X