Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 500 ರೈತ ಕುಟುಂಬಗಳು ತಯಾರಿಸಿದ...

500 ರೈತ ಕುಟುಂಬಗಳು ತಯಾರಿಸಿದ ಇಂಧನದಲ್ಲಿ ಹಾರಿದ ವಿಮಾನ

ಭಾರತದ ಪ್ರಥಮ ಜೈವಿಕ ಇಂಧನ ವಿಮಾನವಿದು

ವಾರ್ತಾಭಾರತಿವಾರ್ತಾಭಾರತಿ27 Aug 2018 9:55 PM IST
share
500 ರೈತ ಕುಟುಂಬಗಳು ತಯಾರಿಸಿದ ಇಂಧನದಲ್ಲಿ ಹಾರಿದ ವಿಮಾನ

ಹೊಸದಿಲ್ಲಿ, ಆ.27: ಕ್ರಾಂತಿಕಾರಿ ಬೆಳವಣಿಗೆಯೊಂದರಲ್ಲಿ ಸ್ಪೈಸ್‌ಜೆಟ್ ವೈಮಾನಿಕ ಸಂಸ್ಥೆಯು ಸೋಮವಾರ ಭಾರತದ ಪ್ರಥಮ ಜೈವಿಕ ಇಂಧನ ಆಧಾರಿತ ವಿಮಾನದ ಹಾರಾಟ ನಡೆಸಿತು. ಮೂಲಗಳ ಪ್ರಕಾರ, ಸ್ಪೈಸ್‌ಜೆಟ್‌ನ 78 ಆಸನಗಳುಳ್ಳ ವಿಮಾನದಲ್ಲಿ ಶೇ. 75 ಜೈವಿಕ ಇಂಧನ ಮತ್ತು ಶೇ.25 ಮಾಮೂಲಿ ಇಂಧನ ಬಳಸಲಾಗಿತ್ತು. ಈ ವಿಮಾನವು ಸೋಮವಾರ ಮುಂಜಾನೆ ಉತ್ತರಾಖಂಡ ರಾಜ್ಯದ ದೆಹರಾದೂನ್‌ನಿಂದ ದಿಲ್ಲಿಗೆ ಪ್ರಯಾಣ ಬೆಳೆಸಿತು.

ಜತ್ರೋಪಾ ಮರದಿಂದ ತಯಾರಿಸಲಾಗಿರುವ ಜೈವಿಕ ಇಂಧನವನ್ನು ದೆಹ್ರಾಡೂನ್‌ನಲ್ಲಿರುವ ಭಾರತೀಯ ಪೆಟ್ರೋಲಿಯಂ ಸಂಸ್ಥೆ ಅಭಿವೃದ್ಧಿಪಡಿಸಿದೆ. ಜೈವಿಕ ಇಂಧನವು ವಿಮಾನ ಪ್ರಯಾಣವನ್ನು ಪರಿಸರಸ್ನೇಹಿಯನ್ನಾಗಿಸುತ್ತದೆ ಮತ್ತು ಇಂಗಾಲ ಉಗುಳುವಿಕೆ ಕಡಿಮೆ ಮಾಡುವುದರಿಂದ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.

ಇದರಿಂದ ವೈಮಾನಿಕ ಸೇವೆಯ ವೆಚ್ಚದಲ್ಲಿ ಗಣನೀಯ ಇಳಿಕೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ 20 ಜನರನ್ನು ಹೊತ್ತು ಸಾಗಿದ ವಿಮಾನಕ್ಕೆ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ದೆಹರಾದೂನ್‌ನ ಜೋಲಿ ಗ್ರಾಂಟ್ ವಿಮಾನ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿದರು. ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಸುರೇಶ್ ಪ್ರಭು, ಧರ್ಮೇಂದ್ರ ಪ್ರಧಾನ್, ಡಾ. ಹರ್ಷವರ್ಧನ್ ಮತ್ತು ಜಯಂತ್ ಸಿನ್ಹಾ ದಿಲ್ಲಿ ವಿಮಾನ ನಿಲ್ದಾಣದಲ್ಲಿ ಉಪಸ್ಥಿತರಿದ್ದು ವಿಮಾನದ ಹಾರಾಟವನ್ನು ವೀಕ್ಷಿಸಿದರು. ಜೈವಿಕ ಇಂಧನವು ಅಮೆರಿಕನ್ ಸ್ಟಾಂಡರ್ಡ್ ಪರೀಕ್ಷಾ ವಿಧಾನ (ಎಎಸ್‌ಟಿಎಂ) ದಿಂದ ಪರಿಗಣಿಸಲ್ಪಟ್ಟಿದೆ ಮತ್ತು ಪ್ರಾಟ್ ಆ್ಯಂಡ್ ವಿಟ್ನಿ ಮತ್ತು ಬೊಂಬಾರ್ಡಿಯರ್ ಇಂಜಿನ್‌ಗಳ ಮಾನದಂಡಕ್ಕೆ ಸರಿಯಾಗಿದೆ.

2018-19ರ ವಿತ್ತೀಯ ವರ್ಷದಲ್ಲಿ ಭಾರತೀಯ ವೈಮಾನಿಕ ಸಂಸ್ಥೆಗಳು ಜಾಗತಿಕವಾಗಿ ಏರುತ್ತಿರುವ ವೈಮಾನಿಕ ಇಂಧನ ದರದಿಂದಾಗಿ ತೀವ್ರ ನಷ್ಟಕ್ಕೆ ಸಿಲುಕಿವೆ. ಸದ್ಯ ಜೈವಿಕ ಇಂಧನದ ಅನ್ವೇಷಣೆ ಮತ್ತು ಅದನ್ನು ಯಶಸ್ವಿಯಾಗಿ ವಿಮಾನ ಹಾರಾಟದಲ್ಲಿ ಬಳಸಿರುವುದು ಭಾರತೀಯ ವೈಮಾನಿಕ ಸಂಸ್ಥೆಗಳಿಗೆ ಹೊಸ ಭರವಸೆಯನ್ನು ನೀಡಿದೆ ಎಂದು ಸ್ಪೈಸ್‌ಜೆಟ್ ಮುಖ್ಯಸ್ಥ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಜಯ್ ಸಿಂಗ್ ತಿಳಿಸಿದ್ದಾರೆ.

ಜೈವಿನ ಇಂಧನವನ್ನು ಜತ್ರೋಪಾ ಮರದ ಬೀಜದಿಂದ ತೆಗೆಯಲಾದ ಎಣ್ಣೆಯಿಂದ ತಯಾರಿಸಲಾಗಿದೆ. ಸೋಮವಾರ ಸ್ಪೈಸ್‌ಜೆಟ್ ವಿಮಾನದಲ್ಲಿ ಬಳಸಲಾದ ಜೈವಿಕ ಇಂಧನವನ್ನು ಚತ್ತೀಸ್‌ಗಡದ ಐನೂರು ರೈತ ಕುಟುಂಬಗಳು ಸತತವಾಗಿ ಶ್ರಮಿಸಿ ತಯಾರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X