Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ಕಾಫಿ ಬೆಳೆಗಾರರ ಸಾಲ ಮನ್ನಾಕ್ಕೆ...

​ಕಾಫಿ ಬೆಳೆಗಾರರ ಸಾಲ ಮನ್ನಾಕ್ಕೆ ಬೆಳೆಗಾರರ ಸಂಘಟನೆಗಳ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ27 Aug 2018 10:10 PM IST
share

ಮಡಿಕೇರಿ, ಆ.27: ಮಹಾಮಳೆ ಹಾಗೂ ಭೂಕುಸಿತದಿಂದಾಗಿ ಕಾಫಿ ಬೆಳೆಗಾರರು ಸಾಕಷ್ಟು ಸಂಕಷ್ಟಕ್ಕೊಳಗಾಗಿದ್ದು, ಅವರ ಸಾಲವನ್ನು ಮನ್ನಾ ಮಾಡುವಂತೆ ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್‍ನ ಅಧ್ಯಕ್ಷ ಎಚ್.ಟಿ.ಪ್ರಮೋದ್  ಒತ್ತಾಯಿಸಿದ್ದಾರೆ.

ಕಾಫಿ ಮಂಡಳಿ ಅಧ್ಯಕ್ಷ ಭೋಜೇಗೌಡ ಅವರು ಕೊಡಗಿಗೆ ಆಗಮಿಸಿದ್ದ ಸಂದರ್ಭ ಈ ಕುರಿತು ಮನವಿ ಸಲ್ಲಿಸಿದ ಅವರು, ದೇಶದಲ್ಲಿ ಕಾಫಿ ಉದ್ಯಮ ಬೃಹತ್ ಉದ್ಯಮವಾಗಿದ್ದು, ಅತಿ ಹೆಚ್ಚು ಮಂದಿಗೆ ಉದ್ಯೋಗ ನೀಡಿದೆ. ಕಾಫಿಯಿಂದಾಗಿ ಸಾಕಷ್ಟು ಆದಾಯ ವಿವಿಧ ರೂಪದಲ್ಲಿ ಬರುತ್ತಿದೆ. ಆದರೆ, ಈ ಬಾರಿ ಕಾಫಿ ಬೆಳೆಗಾರರು ಸಾಕಷ್ಟು ಸಂಕಷ್ಟದಲ್ಲಿದ್ದು, ಮಾರ್ಚ್ 31ರ ತನಕ ಇದ್ದ ಸುಮಾರು 6 ಸಾವಿರ ಕೋಟಿ ರೂ.ಗಳ ಸಾಲದ ಮೇಲಿನ ಸುಮಾರು 1,200 ಕೋಟಿ ರೂ. ಬಡ್ಡಿ ಮನ್ನಾ ಮಾಡುವಂತೆ ಒತ್ತಾಯಿಸಲಾಗಿತ್ತು. ಆದರೆ, ಇದೀಗ ಕಾಫಿ ಬೆಳೆಯುವ ಪ್ರದೇಶಗಳಲ್ಲಿ ಅದಕ್ಕೂ ಮಿಗಿಲಾದ ದುರಂತ ನಡೆದಿದ್ದು, ಕೊಡಗು ಜಿಲ್ಲೆಯ ಸುಮಾರು 28 ಗ್ರಾಮಗಳಲ್ಲಿ ಕಾಫಿ ತೋಟಗಳಿಗೆ ಭಾರೀ ಪ್ರಮಾಣದ ನಷ್ಟ ಉಂಟಾಗಿದೆ. ಕೆಲವು ಗ್ರಾಮಗಳಲ್ಲಿ ಕಾಫಿ ತೋಟಗಳೇ ನಾಶವಾಗಿವೆ. ಕಾಫಿ ತೋಟಗಳಿಲ್ಲದ ಹಿನ್ನೆಲೆಯಲ್ಲಿ ಅಲ್ಲಿನವರಿಗೆ ಸಾಲ ಮರುಪಾವತಿಸಲು ಸಾಧ್ಯವೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಹಿನ್ನೆಲೆಯಲ್ಲಿ  ಅವರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು. 

ಕರ್ನಾಟಕ ಗ್ರೋವರಸ್ ಫೆಡರೇಷನ್‍ನ ಪ್ರಮುಖರಾದ ನಂದ ಬೆಳ್ಯಪ್ಪ ಮಾತನಾಡಿ, ಹಾರಂಗಿ ಜಲಾಶಯದಲ್ಲಿ ಬಹುದಿನಗಳ ಕಾಲ ಭರ್ತಿಯಾಗಿ ನೀರು ಸಂಗ್ರಹಿಸಿಟ್ಟಿದ್ದೇ ಆ ವಿಭಾಗದ ದುರಂತಕ್ಕೆ ಕಾರಣ ಎಂದು ಆರೋಪಿಸಿದರು.

ಮಳೆಯ ಅಂದಾಜು ಮಾಡಲಾಗದ ಅಧಿಕಾರಿಗಳು ಜಲಾಶಯದಲ್ಲಿ ನೀರು ತುಂಬಿಸಿದ್ದ ಹಿನ್ನೆಲೆಯಲ್ಲಿ ಭೂಕುಸಿತವಾಗಿದೆ. ಅಲ್ಲದೆ ಜಲಾಶಯದಿಂದ ಒಮ್ಮೆಲೆ ನೀರು ಬಿಟ್ಟದ್ದು ಮಣ್ಣು ಜಾರಲು ಕಾರಣವಾಗಿದೆ. ಇದಕ್ಕೆ ಸಂಬಂಧಪಟ್ಟವರೇ ಹೊಣೆಯಾಗಿದ್ದಾರೆ ಎಂದು ಆರೋಪಿಸಿದ ದೂರಿದ ಅವರು, ಮಳೆಗಾಲದಲ್ಲಿ   ಕನಿಷ್ಟ 25 ಅಡಿಗಳಷ್ಟಾದರೂ ಜಲಾಶಯವನ್ನು ಖಾಲಿ ಇಡಬೇಕು ಎಂದು ಸಲಹೆ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X