Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶೇ.2 ರಷ್ಟು ಭೂ ಸಾರಿಗೆ ಉಪಕರ ವಿಧಿಸಲು...

ಶೇ.2 ರಷ್ಟು ಭೂ ಸಾರಿಗೆ ಉಪಕರ ವಿಧಿಸಲು ಬಿಬಿಎಂಪಿ ಚಿಂತನೆ

ವಾರ್ತಾಭಾರತಿವಾರ್ತಾಭಾರತಿ27 Aug 2018 10:56 PM IST
share
ಶೇ.2 ರಷ್ಟು ಭೂ ಸಾರಿಗೆ ಉಪಕರ ವಿಧಿಸಲು ಬಿಬಿಎಂಪಿ ಚಿಂತನೆ

ಬೆಂಗಳೂರು, ಆ.27: ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ ಶೇ.2 ರಷ್ಟು ನಗರ ಭೂ ಸಾರಿಗೆ ಉಪಕರ ವಿಧಿಸಲು ಮುಂದಾಗಿದೆ. ಕಳೆದ ಮೂರು ವರ್ಷಗಳ ಹಿಂದೆಯಷ್ಟೇ ಆಸ್ತಿ ತೆರಿಗೆ ಶೇ.20 ರಿಂದ 25ಕ್ಕೆ ಹೆಚ್ಚಳ ಮಾಡಲಾಗಿತ್ತು.

ನಗರದ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿರುವುದರಿಂದ ಬಿಎಂಟಿಸಿ ಬಸ್‌ಗಳು ಹಾಳಾಗುತ್ತಿವೆ. ಹೀಗಾಗಿ ನಗರ ಭೂ ಸಾರಿಗೆ ವ್ಯವಸ್ಥೆ ಉತ್ತಮಗೊಳಿಸಲು ಪಾಲಿಕೆಯಿಂದ ಹಣ ನೀಡಬೇಕೆಂದು ಸಾರಿಗೆ ಸಚಿವರೇ ಹೇಳಿಕೆ ನೀಡಿದ್ದರು. ಜತೆಗೆ ಈ ಕುರಿತು ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಿದ್ದರು. ಅದಕ್ಕೆ ಒಪ್ಪಿಗೆ ಸೂಚಿಸಿರುವ ರಾಜ್ಯ ಸರಕಾರ, ಕೆಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಆಸ್ತಿ ತೆರಿಗೆ ಮೊತ್ತದ ಶೇ.2 ಹಣವನ್ನು ನಗರ ಭೂ ಸಾರಿಗೆ ಉಪಕರ ಎಂದು ವಿಧಿಸುವಂತೆ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಇದನ್ನು ಪಾಲಿಕೆಯ ಕೌನ್ಸಿಲ್ ಮುಂದಿಟ್ಟು, ಅನುಮೋದನೆ ದೊರೆತರೆ ಬೆಂಗಳೂರಿನ ಆಸ್ತಿ ಮಾಲೀಕರು ಇನ್ನು ಮುಂದೆ ಹೆಚ್ಚುವರಿ ಶೇ.2ರಷ್ಟು ತೆರಿಗೆ ಪಾವತಿಸಬೇಕಾಗುತ್ತದೆ.

ಪಾಲಿಕೆಯಿಂದ ಈ ಹಿಂದಿನಿಂದಲೂ ನಗರ ಭೂ ಸಾರಿಗೆ ಉಪಕರ ಸಂಗ್ರಹಿಸಲಾಗಿತ್ತಾದರೂ, ಆಸ್ತಿ ಮಾಲಕರಿಗೆ ಹೊರೆಯಾಗುತ್ತದೆ ಎಂಬ ಉದ್ದೇಶದಿಂದ ಉಪಕರ ವಸೂಲಿ ಆದೇಶ ಹಿಂಪಡೆಯುವಂತೆ 2014ರಲ್ಲಿಯೇ ಕೌನ್ಸಿಲ್ ನಿರ್ಣಯ ತೆಗೆದುಕೊಂಡು ಸರಕಾರಕ್ಕೆ ಕಳುಹಿಸಲಾಗಿತ್ತು. ಆದರೆ, ಬಿಬಿಎಂಪಿ ನಿರ್ಣಯವನ್ನು ಪರಿಗಣಿಸಲು ಬರುವುದಿಲ್ಲ ಎಂದು ಸರಕಾರ ತಿಳಿಸಿದ್ದು, ನಗರ ಭೂ ಸಾರಿಗೆ ಉಪಕರ ಸಂಗ್ರಹಿಸುವಂತೆ ಸೂಚಿಸಿದೆ.

ಅಲ್ಲದೆ, ಉಪಕರ ಸಂಗ್ರಹಿಸದಿರುವುದರಿಂದ ರಾಜಸ್ವಕ್ಕೆ ನಷ್ಟವಾಗುತ್ತಿದೆ ಎಂಬ ಲೆಕ್ಕಪರಿಶೋಧನಾ ವರದಿಯಲ್ಲಿ ಆಕ್ಷೇಪಣೆ ವ್ಯಕ್ತಪಡಿಸಲಾಗಿತ್ತು. ಹೀಗಾಗಿ ಈ ಹಿಂದೆ ಆದೇಶಿಸಿದಂತೆ 2013ರಿಂದಲೇ ಶೇ.2 ಹೆಚ್ಚುವರಿ ತೆರಿಗೆ ವಸೂಲಿ ಮಾಡಬೇಕಿತ್ತು. ಆ ಹಿನ್ನೆಲೆಯಲ್ಲಿ 2019-20ನೇ ಸಾಲಿನ ಆಸ್ತಿ ತೆರಿಗೆ ಪಾವತಿ ವೇಳೆ 2013-14 ರಿಂದ 2018-19ರವರೆಗೆ ವಸೂಲಿಯಾಗದ ಉಪಕರ ಮೊತ್ತವನ್ನು ವಸೂಲಿ ಮಾಡುವ ಕುರಿತು ಬಿಬಿಎಂಪಿ ಚಿಂತನೆ ನಡೆಸಿದೆ. ಬಿಬಿಎಂಪಿ ಸಂಗ್ರಹಿಸುವ ನಗರ ಭೂ ಸಾರಿಗೆ ಉಪಕರವನ್ನು ನಗರ ಭೂ ಸಾರಿಗೆ ಇಲಾಖೆಗೆ ಪಾವತಿಸಲಾಗುತ್ತದೆ. ಆ ಹಣವನ್ನು ನಗರದಲ್ಲಿ ಸಾರಿಗೆ ಹಾಗೂ ಸಂಚಾರ ವ್ಯವಸ್ಥೆ ಉತ್ತಮ ಪಡಿಸಲು ವೆಚ್ಚ ಮಾಡಲಾಗುವುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X