Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬ್ರಹ್ಮಶ್ರೀ ನಾರಾಯಣ ಗುರುಗಳ...

ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರಧಾರೆಗಳು ತುಂಬಾ ಪ್ರಸ್ತುತ: ಮೈಸೂರು ಅಪರ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ27 Aug 2018 11:20 PM IST
share
ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರಧಾರೆಗಳು ತುಂಬಾ ಪ್ರಸ್ತುತ: ಮೈಸೂರು ಅಪರ ಜಿಲ್ಲಾಧಿಕಾರಿ

ಮೈಸೂರು,ಆ.27: ಅತ್ಯಾಧುನಿಕವಾದ ಜೀವನ ಶೈಲಿಗೆ ಬಹಳಷ್ಟು ನೆಮ್ಮದಿಯನ್ನು ಕೆಡಿಸಿಕೊಂಡಿರುವ ಜನರ ಮನಶಾಂತಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರಧಾರೆಗಳು ತುಂಬಾ ಪ್ರಸ್ತುತ ಎಂದು ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ್ ಅಭಿಪ್ರಾಯಪಟ್ಟರು.

ನಗರದ ಕಲಾಮಂದಿರದಲ್ಲಿ ಸೋಮವಾರ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಗೌರವ ಅರ್ಪಿಸುವುದರ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಋಗ್ವೇದದ ಒಂದು ಮಾತು ಯಾವಾಗಲೂ ನೆನಪಿನಲ್ಲಿರುವಂಥದ್ದು. ಉದಾತ್ತವಾದ ಚಿಂತನೆಗಳು, ಯಾವಾಗಲೂ ಯಾವುದೇ ಮೂಲದಲ್ಲಿರಲಿ ನಮಗೆ ಎಲ್ಲ ಕಡೆಗಳಿಂದ ಬರಲಿ ಎಂದು ದೇವರಲ್ಲಿ ಮಾಡುವಂಥದ್ದು. ಅಂದರೆ ಉದಾತ್ತ ಚಿಂತನೆಗಳನ್ನು ಹೊತ್ತಂತ ಯಾವುದೇ ವ್ಯಕ್ತಿ ಇರಬಹುದು, ಯಾವುದೇ ಜಾತಿಗೆ ಸೇರಿರಬಹುದು, ಯಾವ ಪ್ರದೇಶದವರೇ ಆಗಿರಬಹುದು, ಯಾವುದೇ ಭಾಷೆಯನ್ನು ಮಾತನಾಡುವವರಾಗಿರಬಹುದು ಅದನ್ನು ಭಾಷಾತೀತ, ಅಥವಾ ಜಾತಿಯಿಂದ ಅತೀತರಾದವರು ಅದಕ್ಕೆ ಎಲ್ಲೆ ಅನ್ನುವುದು ಇರುವುದಿಲ್ಲ ಎನ್ನುವುದಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳೇ ಕಾರಣ ಎಂದರು.

ಅವರು ಮೈಸೂರಿನವರಲ್ಲ, ಕನ್ನಡ ನಾಡಿನಲ್ಲಿ ಹುಟ್ಟಿ ಬೆಳೆದವರಲ್ಲ, ಆದಾಗ್ಯೂ ನಾವವರ ಉದಾತ್ತ ಚಿಂತನೆಗಳನ್ನು ಬೆಳೆಸಿಕೊಂಡವರು. ಎಲ್ಲವನ್ನೂ ಮೀರಿ, ಎಲ್ಲರನ್ನೂ ತಲುಪುವಂತಹ ಅವರ ವಿಚಾರಧಾರೆಗಳೆಲ್ಲ ಜಗತ್ಪ್ರಸಿದ್ಧವಾಗಿವೆ. ಬಹಳಷ್ಟು ಸಲ ಕೆಲವೊಬ್ಬರ ಬಗ್ಗೆ ಇಂಟರ ನೆಟ್ ನಲ್ಲಿ ಸರ್ಚ್ ಮಾಡಿದರೆ ಮಾಹಿತಿ ಸಿಗಲ್ಲ. ವೆಬ್ ಸೈಟ್ ನಲ್ಲಿ ನಾರಾಯಣ ಗುರುಗಳ ಬಗ್ಗೆ ಇದ್ದಷ್ಟು ವಿಚಾರಧಾರೆಗಳು ಮತ್ಯಾರದೂ ಸಿಗಲ್ಲ. ಅವರ ಕುರಿತು ಮೇಘಾಲಯದ ವೆಬ್ ಸೈಟ್ ನಲ್ಲಿ ಕೂಡ ಇದೆ. ಎಲ್ಲಿಯ ಮೇಘಾಲಯ ಎಲ್ಲಿಯ ಕೇರಳ. ಆದರೂ ಪ್ರತಿಯೊಬ್ಬರೂ ಇವತ್ತಿನ ಅತ್ಯಾಧುನಿಕವಾದ ಈ ಜೀವನಶೈಲಿಗೆ ಬಹಳಷ್ಟು ನೆಮ್ಮದಿಯನ್ನು ಕೆಡಿಸಿಕೊಂಡಿರುವ ಜನರ ಮನಶಾಂತಿಗೆ ಅವರ ವಿಚಾರಧಾರೆಗಳು ತುಂಬಾ ಪ್ರಸ್ತುತವೆಂದರೆ ತಪ್ಪಾಗಲಾರದು ಎಂದು ತಿಳಿಸಿದರು.

ಬಹಳಷ್ಟು ವ್ಯಕ್ತಿಗಳು ಇತಿಹಾಸಕ್ಕಷ್ಟೇ ಪ್ರಸ್ತುತವಾದರೆ. ಇವರು ಇಂದಿನ ಪ್ರಸ್ತುತ ಸ್ಥಿತಿಗೂ ಪ್ರಸ್ತುತರಾಗಿದ್ದಾರೆ.ಸಮಾಜದಲ್ಲಿದ್ದ ಜಾತಿ, ಅಸಮಾನತೆಯನ್ನು ಹೋಗಲಾಡಿಸಲು ಹೋರಾಟ ಮಾಡಿದವರಲ್ಲ. ಮನುಷ್ಯನ ಆಂತರಿಕ, ಬಾಹ್ಯ ವ್ಯಕ್ತಿತ್ವವನ್ನು ಅಭಿವೃದ್ಧಿಪಡಿಸಲು ಹಲವಾರು ವಿಚಾರಧಾರೆಗಳನ್ನು ಕೊಟ್ಟಿದ್ದಾರೆ. ಅವರ ದಿನನಿತ್ಯದ ಬದುಕು ಹೇಗಿತ್ತು ಎಂದು ನೋಡಿದರೆ ಪ್ರಾರ್ಥನೆ, ಊಟದ ಸಮಯ, ಯೋಗ ಇವೆಲ್ಲ ನೋಡಿದರೆ ನಮ್ಮಲ್ಲಿರುವ ಅನಾರೋಗ್ಯ ಸ್ಥಿತಿಯಿಂದ ಹೊರಬರಬಹುದು. ನಾವು ಮಧ್ಯರಾತ್ರಿ ಊಟ ಮಾಡಿ ಮಲಗುತ್ತೇವೆ. ಇದು ಆರೋಗ್ಯಕ್ಕೆ ಹಾನಿಕರ. ಅದಕ್ಕೆ ನಾರಾಯಣ ಗುರುಗಳ ದಿನನಿತ್ಯದ ಪದ್ಧತಿ ಪಾಲನೆ ಮಾಡಿದರೆ ಸಮಾಜದ 95% ಜನರು ಆರೋಗ್ಯವಾಗಿರುತ್ತಾರೆ. ಅಂತಹ ವಿಚಾರಧಾರೆ, ಒಳ್ಳೆಯ ಸಂದೇಶ ನೀಡಿದ್ದಾರೆ. ನಮ್ಮ ಬದುಕಿಗೆ ಬೇಕಾದ ಆಲೋಚನೆಗಳು, ಸಲಹೆಗಳನ್ನು ಕೊಟ್ಟಿದ್ದಾರೆ. ಅವರ ಜಯಂತಿಯ ಮೂಲಕ ಸಂಕಲ್ಪ ಮಾಡಿ ಮುಂದಿನ ಜಯಂತಿಯೊಳಗೆ ಗುರಿಯಾಗಿಟ್ಟುಕೊಂಡು ಪಾಲನೆ ಮಾಡಿ ಅವರ ಬದುಕಿಗೆ ಸಾರ್ಥಕತೆ ತಂದು ಕೊಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗಂಗಾವತಿಯ ವಕೀಲ ನಾಗರಾಜು ಎಸ್.ಗುತ್ತೇದಾರ್ ವಿಶೇಷ ಉಪನ್ಯಾಸ ನೀಡಿದರು. ಈ ಸಂದರ್ಭ ಪಾಲಿಕೆಯ ಆಯುಕ್ತ ಜಗದೀಶ್, ಮೂಡಾ ಆಯುಕ್ತ ಕಾಂತರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಹೆಚ್.ಚೆನ್ನಪ್ಪ, ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎಂ.ಕೆ.ಪೋತರಾಜ್, ಸರೋಜಮ್ಮ, ರಾಜಶೇಖರ್ ಕದಂಬ, ತಹಶೀಲ್ದಾರ್ ರಮೇಶ್ ಬಾಬು ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X