Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ದ್ವೀಪವೊಂದರ ಕಥೆ -ಕೊನೆಯ ಅಲೆ

ದ್ವೀಪವೊಂದರ ಕಥೆ -ಕೊನೆಯ ಅಲೆ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ28 Aug 2018 12:01 AM IST
share
ದ್ವೀಪವೊಂದರ ಕಥೆ -ಕೊನೆಯ ಅಲೆ

ಪಂಕಜ್ ಸೇಖ್‌ಸರಿಯಾರವರು ಸಂಶೋಧಕರು, ಪತ್ರಕರ್ತರು ಮತ್ತು ಛಾಯಾಚಿತ್ರಕಾರರು. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಎರಡು ದಶಕಗಳ ಕಾಲ ಕಾರ್ಯನಿರ್ವಹಿಸಿ ಅಲ್ಲಿನ ಬದುಕಿನ ತಾಯಿ ಬೇರಿನ ಜೊತೆಗೆ ಸಂಬಂಧ ಬೆಸೆದುಕೊಳ್ಳಲು ಪ್ರಯತ್ನಿಸಿದವರು. ಈ ದ್ವೀಪಗಳ ಬಗೆಗೆ ಅವರು ನಾಲ್ಕು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ‘ದಿ ಲಾಸ್ಟ್ ವೇವ್’ ಅವರ ಪ್ರಥಮ ಕಾದಂಬರಿ. ಸುಮಂಗಲಾ ಎಸ್. ಮುಮ್ಮಿಗಟ್ಟಿ ಅವರು ಈ ಕಾದಂಬರಿಯನ್ನು ‘ಕೊನೆಯ ಅಲೆ’ ಹೆಸರಿನಲ್ಲಿ ಕನ್ನಡಕ್ಕಿಳಿಸಿದ್ದಾರೆ.
  ಒಬ್ಬ ಸೃಜನಶೀಲ ಸಂಶೋಧಕನ ತಳಮಳಗಳು ಕಂಡದ್ದನ್ನು ಕಂಡಂತೆ ದಾಖಲಿಸುವುದರೊಂದಿಗೆ ಮುಗಿಯುವುದಿಲ್ಲ. ಅವನು ಸಂವೇದನಾಶೀಲನಾಗಿದ್ದರೆ ಆತ ನಿಧಾನಕ್ಕೆ ಅನ್ವೇಷನೆಯ ಒಂದು ಭಾಗವೇ ಆಗುತ್ತಾನೆ. ಈ ಕಾದಂಬರಿಯ ಮುಖ್ಯ ಕಥಾಪಾತ್ರ ಹರೀಶನಲ್ಲಿ, ನಾವು ಮೂಲ ಲೇಖಕನನ್ನು ಗುರುತಿಸಬಹುದು. ಕಥೆಯ ಕೇಂದ್ರ ಅಂಡಮಾನ್‌ನ ಉಷ್ಣ ವಲಯದ ಮಳೆಕಾಡುಗಳ ಮೂಲ ನಿವಾಸಿಗಳಾದ ಜರವಾ ಜನಾಂಗ. ಅತ್ಯಂತ ಪುರಾತನ ಮತ್ತು ಅತಂತ್ರವಾಗುತ್ತಿರುವ ಸಮುದಾಯ ಇದು. ಅವರ ಬದುಕಿಗೆ ಪೂರಕವಾಗಿರುವ ಅಂಶಗಳೆಲ್ಲ ನಾಶವಾಗುತ್ತಿರುವುದನ್ನು ಹರೀಶ ಗುರುತಿಸುತ್ತಾನೆ. ಅಂಕಲ್ ಪೇಮ್‌ನ ಜೊತೆಗೆ ಜರವಾ ಜನಾಂಗವನ್ನು ಉಳಿಸುವ ಅವರ ಬದುಕಿನ ಲಯ ಕಡಿದುಕೊಳ್ಳದಂತೆ ನೋಡಿಕೊಳ್ಳುವ ದಾರಿಯನ್ನು ಹುಡುಕಲು ಯತ್ನಿಸುತ್ತಾನೆ. ಈ ದಾರಿಯಲ್ಲಿ ಆತನಿಗೆ ಜೊತೆಯಾಗುವವಳು, ಸಮುದಾಯಕ್ಕೆ ಸೇರಿದ ಸೀಮಾ. ವಿದ್ಯಾವಂತಳೂ, ಜಗತ್ತನ್ನು ಅರಿತವಳೂ ಆಗಿರುವ ಸೀಮಾ ಮತ್ತು ಹರೀಶ ಒಂದು ಸಮಾನಾಂತರ ದಿಕ್ಕಿನಲ್ಲಿ ಚಲಿಸುತ್ತಿರುವವರಾದರೂ, ಇಬ್ಬರ ಅನುಭೂತಿಗಳು ಎಲ್ಲೋ ಅವರನ್ನು ಸೇರಿಸುವಂತಿತ್ತು. ನಿಧಾನಕ್ಕೆ ಅವರು ಯಾವುದೋ ಒಂದು ಬಿಂದುವಿನಲ್ಲಿ ಸೇರಬೇಕೆನ್ನುವಾಗ ಅವರ ಬದುಕಿಗೆ ಅಪ್ಪಳಿಸುವುದು ದೈತ್ಯ ಸುನಾಮಿ. ಈ ದೈತ್ಯ ಅಲೆಗಳು ವಿಘಟಿತವಾಗುತ್ತಿರುವ ಪರಿಸರ, ಬದುಕನ್ನು ತನ್ನ ಒಂದೇ ತೆಕ್ಕೆಯಲ್ಲಿ ತೆಗೆದುಕೊಳ್ಳುತ್ತದೆ. 2004ರ ಸುನಾಮಿ ಹೇಗೆ ದ್ವೀಪವಾಸಿಗಳ ಬದುಕನ್ನು ಇನ್ನಿಲ್ಲದಂತೆ ಬದಲಾಯಿಸಿತು ಎನ್ನುವುದನ್ನು ಈ ಕಾದಂಬರಿ ಹೇಳುತ್ತದೆ. ಕೊನೆಯ ಅಲೆ ಕಳೆದು ಹೋದ ಪ್ರೇಮಿಗಳ, ಜನಾಂಗವೊಂದರ ಸಂಸ್ಕೃತಿಯ ಇತಿಹಾಸ ಮತ್ತು ಕಾಲನ ಹೊಡೆತಕ್ಕೆ ಸಿಲುಕಿ ನಲುಗಲು ಸದಾ ಸಿದ್ಧವಾಗಿರುವ ಪರಿಸರ ವ್ಯವಸ್ಥೆಯೊಂದರ ಕಥೆಯಾಗಿದೆ. ಇದು ಕೇವಲ ಜರವಾ ಸಮುದಾಯವೊಂದರ ಕತೆಯಾಗಬೇಕಾಗಿಲ್ಲ. ನಾಗರಿಕತೆಯ ಸುನಾಮಿಗೆ ಸಿಲುಕಿ ತೊಯ್ದೆಡುವ ಅಸಂಖ್ಯ ಬುಡಕಟ್ಟು ನಿವಾಸಿಗಳ ಕತೆಯೂ ಹೌದು.
ನವಕರ್ನಾಟಕ ಪ್ರಕಾಶನ ಹೊರತಂದಿರುವ ಕೃತಿಯ ಒಟ್ಟು ಪುಟಗಳು 264. ಮುಖಬೆಲೆ 250 ರೂ. ಆಸಕ್ತರು 080-22161900 ದೂರವಾಣಿಯನ್ನು ಸಂಪರ್ಕಿಸಬಹುದಾಗಿದೆ.

share
-ಕಾರುಣ್ಯಾ
-ಕಾರುಣ್ಯಾ
Next Story
X