Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಚಾರ, ಚಿಂತನೆ, ಪ್ರವಚನಗಳು ಜೀವನ...

ವಿಚಾರ, ಚಿಂತನೆ, ಪ್ರವಚನಗಳು ಜೀವನ ಪೂರ್ತಿ ಉಳಿಯುತ್ತವೆ: ಮುರುಘಾ ಶ್ರೀ

ವಾರ್ತಾಭಾರತಿವಾರ್ತಾಭಾರತಿ29 Aug 2018 9:48 PM IST
share
ವಿಚಾರ, ಚಿಂತನೆ, ಪ್ರವಚನಗಳು ಜೀವನ ಪೂರ್ತಿ ಉಳಿಯುತ್ತವೆ: ಮುರುಘಾ ಶ್ರೀ

ದಾವಣಗೆರೆ,ಆ.29: ರಸದೌತಣದ ಊಟೋಪಚಾರಗಳು ಕೇವಲ ನಾಲ್ಕು ಗಂಟೆಗಳ ನಂತರ ಕ್ಷೀಣಿಸುತ್ತವೆ. ಆದರೆ ವಿಚಾರಗಳು, ಚಿಂತನೆಗಳು, ಪ್ರವಚನಗಳು ಜೀವನ ಪೂರ್ತಿ ಉಳಿಯುತ್ತವೆ ಎಂದು ಚಿತ್ರದುರ್ಗ ಶ್ರೀ ಜಗದ್ಗುರು ಮುರುಘ ರಾಜೇಂದ್ರ ಡಾ. ಶಿವಮೂರ್ತಿ ಮುರುಘಾ ಶರಣರು ಅಭಿಪ್ರಾಯ ಪಟ್ಟರು.

ನಗರದ ವಿರಕ್ತಮಠದಲ್ಲಿ ಶ್ರಾವಣ ಮಾಸದ 108ನೇ ವರ್ಷದ ಕ್ರಾರ್ಯಕ್ರಮದ ಅಂಗವಾಗಿ ಒಂದು ತಿಂಗಳ ಕಾಲ ಹಮ್ಮಿಕೊಳ್ಳಲಾಗಿರುವ ಚರಿತಾಮೃತ ಪ್ರವಚನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಆಶೀರ್ವಚನ ನೀಡಿದರು. ನಾವು ತಿನ್ನುವ ಆಹಾರ ಹೇಗೆ ಪಚನ ಆಗುತ್ತದೋ ಅದೇ ರೀತಿಯಾಗಿ ಕೇಳುವ ಪ್ರವಚನಗಳು ಪಚನ ಮಾಡಿಕೊಳ್ಳಲು ಪ್ರಯತ್ನಿಸಬೇಕು. ನಮಗೆ ಹೊಟ್ಟೆಯ ಆಹಾರವೇ ಮುಖ್ಯವಲ್ಲ. ನಮ್ಮ ಸುಂದರ ಜೀವನಕ್ಕೆ ಇಂತಹ ಪ್ರವಚನಗಳು, ವಚನಗಳು ಪ್ರಮುಖವಾಗಿವೆ. ಪ್ರವಚನಗಳು ನಮಗೆ ಬೇಗನೆ ಪಚನ ಆಗುವುದಿಲ್ಲ. ಅವುಗಳ ಪಚನಕ್ಕೆ ಪ್ರಯತ್ನಿಸಬೇಕೆಂದ ಅವರು, ಇದೇ 31ರಂದು ಅಮೆರಿಕಾದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಸೇರಿಕೊಂಡು ಅಕ್ಕ ಸಮ್ಮೇಳನ ನಡೆಸುತ್ತಿದ್ದು, ಆ ಸಮ್ಮೇಳನದಲ್ಲಿ 3ರಿಂದ 5 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಲಿಂಗಾರ್ಚನೆ, ಲಿಂಗಧ್ಯಾನ, ಲಿಂಗಾನುಭವ, ಧ್ಯಾನ ಸೇರಿದಂತೆ ಶರಣರ ವಿಷಯಗಳನ್ನು ಅಲ್ಲಿ ತಿಳಿಸಿಕೊಡಲಾಗುತ್ತದೆ. ಆ ಸಮ್ಮೇಳನದ ಉದ್ಘಾಟನಾ ಸಮಾರಂಭಕ್ಕೆ ತಮಗೆ ಆಮಂತ್ರಣ ಬಂದಿದ್ದು, ತಾವು ಭಾಗವಹಿಸುತ್ತಿರುವುದಾಗಿ ಶರಣರು ಹೇಳಿದರು.

ಐತಿಹಾಸಿಕ ಹಿನ್ನಲೆಯ ಹೊಂದಿರುವ ವಿರಕ್ತಮಠ ಈಗ ಹೊಸ ಕಳೆಯನ್ನು ಪಡೆದುಕೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿ, ಒಂದು ತಿಂಗಳ ಕಾಲ ನಡೆಯುವ ಶರಣ ಚರಿತಾಮೃತ ಪ್ರವಚನ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡು, ಶರಣ ವಿಚಾರಧಾರೆ ಆಲಿಸಬೇಕೆಂದರು.

ಸಮಾರಂಭದ ಸಾನ್ನಿಧ್ಯ ವಹಿಸಿದ್ದ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ಮಾತನಾಡಿ, ಐತಿಹಾಸಿಕ ಹಿನ್ನಲೆ ಹೊಂದಿರುವ ವಿರಕ್ತಮಠದಲ್ಲಿ ಮೊದಲ ಬಾರಿಗೆ ಶ್ರಾವಣ ಮಾಸದ ತಿಂಗಳ ಪ್ರವಚನ, ಬಸವ ಜಯಂತಿ ಆಚರಣೆ ಮಾಡಲಾಯಿತು. ಅದೇ ರೀತಿಯಾಗಿ ಶ್ರೀ ಮುರುಘಾ ಶರಣರ ನೇತೃತ್ವದಲ್ಲಿ ಶೈಕ್ಷಣಿಕ ದಾಸೋಹ ಆರಂಭವಾಗಿದೆ. ಈ ವರ್ಷ ಡಾ.ಶಿವಮೂರ್ತಿ ಮುರುಘಾ ಶರಣರ ಹೆಸರಿನಲ್ಲಿ ಪಿಯುಸಿ ವಾಣಿಜ್ಯ ಕಾಲೇಜು ಆರಂಭವಾಗಿದೆ. ಬರುವ ವರ್ಷದಿಂದ ವಿಜ್ಞಾನ ವಿಭಾಗ ಪ್ರಾರಂಭ ಮಾಡುವ ಉದ್ದೇಶ ಹೊಂದಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಮೋತಿ ವೀರಣ್ಣ, ಮೇಯರ್ ಶೋಭಾ ಪಲ್ಲಾಗಟ್ಟಿ, ಪ್ರವಚನಕಾರ ಬಸವರಾಜೇಂದ್ರ ಶರಣರು ಪಾಲ್ಗೊಂಡಿದ್ದರು. ಹಾಸಬಾವಿ ಕರಿಬಸಪ್ಪ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X