Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೆಪ್ಟಂಬರ್ ಒಂದರಿಂದ ದುಬಾರಿಯಾಗಲಿವೆ...

ಸೆಪ್ಟಂಬರ್ ಒಂದರಿಂದ ದುಬಾರಿಯಾಗಲಿವೆ ಕಾರು, ಬೈಕ್‌ಗಳು

ವಾರ್ತಾಭಾರತಿವಾರ್ತಾಭಾರತಿ31 Aug 2018 8:02 PM IST
share
ಸೆಪ್ಟಂಬರ್ ಒಂದರಿಂದ ದುಬಾರಿಯಾಗಲಿವೆ ಕಾರು, ಬೈಕ್‌ಗಳು

ಹೊಸದಿಲ್ಲಿ, ಆ.31: ಸರ್ವೋಚ್ಚ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ವಿಮೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಐಆರ್‌ಡಿಎ) ದೀರ್ಘಾವಧಿ ಮೂರನೇ ಪಕ್ಷದ ವಿಮೆ (ಥರ್ಡ್ ಪಾರ್ಟಿ ಇನ್ಶೂರೆನ್ಸ್)ಯನ್ನು ಕಡ್ಡಾಯಗೊಳಿಸಿರುವ ಪರಿಣಾಮ ಸೆಪ್ಟಂಬರ್ ಒಂದರಿಂದ ಕಾರು ಮತ್ತು ಬೈಕ್‌ಗಳು ದುಬಾರಿಯಾಗಲಿವೆ.

 ಕಾರುಗಳಿಗೆ ಮೂರು ವರ್ಷಗಳ ಅವಧಿಯ ಥರ್ಡ್ ಪಾರ್ಟಿ ವಿಮೆ ಕ್ರಮವಾಗಿ, 1,000 ಸಿಸಿಗಿಂತ ಕಡಿಮೆ ಸಾಮರ್ಥ್ಯದ ಇಂಜಿನ್‌ಗೆ 5,286 ರೂ., 1,000ದಿಂದ 1,500ಕ್ಕೆ 9,534 ರೂ. ಮತ್ತು 1,500ಕ್ಕಿಂತ ಮೇಲ್ಪಟ್ಟ ಸಾಮರ್ಥ್ಯದ ಇಂಜಿನ್ ಹೊಂದಿರುವ ಕಾರುಗಳಿಗೆ 24,305 ರೂ. ಆಗಿದೆ. ಇದೇ ವೇಳೆ, ದ್ವಿಚಕ್ರ ವಾಹನಗಳ ಐದು ವರ್ಷಗಳ ಥರ್ಡ್ ಪಾರ್ಟಿ ವಿಮೆಗೆ ಕ್ರಮವಾಗಿ, 75 ಸಿಸಿಗಿಂತ ಕಡಿಮೆ ಸಾಮರ್ಥ್ಯದ ಇಂಜಿನ್ ಹೊಂದಿರುವ ವಾಹನಕ್ಕೆ 1,045 ರೂ., 75ರಿಂದ 150 ಸಿಸಿ ಇಂಜಿನ್‌ನ ವಾಹನಕ್ಕೆ 3,285 ರೂ. ಹಾಗೂ 350 ಸಿಸಿಗಿಂತ ಅಧಿಕ ಸಾಮರ್ಥ್ಯದ ಇಂಜಿನ್ ಹೊಂದಿರುವ ವಾಹನಕ್ಕೆ 13,034 ರೂ. ಆಗಿದೆ.

 ಕಾರು ಮತ್ತು ದ್ವಿಚಕ್ರ ವಾಹನ ಕೊಳ್ಳುವವರು ಥರ್ಡ್ ಪಾರ್ಟಿ ವಿಮೆ ಮಾಡಿಸುವುದನ್ನು ಸರ್ವೋಚ್ಚ ನ್ಯಾಯಾಲಯ ಈ ವರ್ಷದ ಜೂನ್‌ನಲ್ಲಿ ಕಡ್ಡಾಯಗೊಳಿಸಿ ಆದೇಶ ನೀಡಿತ್ತು. ನ್ಯಾಯಾಲಯದ ಆದೇಶದಿಂದ ರಸ್ತೆ ಅಪಘಾತದ ಸಂತ್ರಸ್ತರಿಗೆ ನೆರವಾಗಲಿದ್ದು, ಅಪಘಾತ ನಡೆಸಿದ ವಾಹನದ ಮಾಲಕರ ಹಿಂದೆ ಓಡುವುದು ತಪ್ಪುತ್ತದೆ ಮತ್ತು ನೇರವಾಗಿ ವಿಮಾ ಸಂಸ್ಥೆಗಳಿಂದ ಪರಿಹಾರ ಪಡೆಯಲು ಸಾಧ್ಯವಾಗಲಿದೆ ಎಂದು ವಿಮಾ ಅಧಿಕಾರಿಗಳು ತಿಳಿಸಿದ್ದಾರೆ. ಮೋಟಾರು ವಾಹನ ಕಾಯ್ದೆಯನ್ವಯ ಥರ್ಡ್ ಪಾರ್ಟಿ ವಿಮೆ ಕಡ್ಡಾಯವಾಗಿದ್ದು ಕಳ್ಳತನ ಮತ್ತು ಹಾನಿ ಮುಂತಾದ ಸಂದರ್ಭಗಳಲ್ಲೂ ವಿಮೆ ಪರಿಹಾರ ಒದಗಿಸುತ್ತದೆ. ಸದ್ಯ ಸೆಪ್ಟಂಬರ್ ಒಂದರಿಂದ ಈ ಆದೇಶವನ್ನು ಜಾರಿಗೆ ತರುವಂತೆ ಐಆರ್‌ಡಿಎ ಸೂಚಿಸಿದೆ. ಸಾಮಾನ್ಯ ವಿಮಾ ಸಂಸ್ಥೆಗಳು, ಹೊಸ ಕಾರುಗಳಿಗೆ ಕೇವಲ ಮೂರು ವರ್ಷ ಮತ್ತು ಹೊಸ ಬೈಕ್‌ಗಳಿಗೆ ಐದು ವರ್ಷಗಳ ಥರ್ಡ್ ಪಾರ್ಟಿ ವಿಮೆ ನೀಡಬೇಕು ಎಂದು ಐಆರ್‌ಡಿಎ ತನ್ನ ಆದೇಶದಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X