Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೈಕಂಪಾಡಿ: ಮಧ್ಯರಾತ್ರಿ ಶ್ರಮದಾನದೊಂದಿಗೆ...

ಬೈಕಂಪಾಡಿ: ಮಧ್ಯರಾತ್ರಿ ಶ್ರಮದಾನದೊಂದಿಗೆ ರಸ್ತೆ ದುರಸ್ತಿ !

ವಾರ್ತಾಭಾರತಿವಾರ್ತಾಭಾರತಿ31 Aug 2018 9:22 PM IST
share
ಬೈಕಂಪಾಡಿ: ಮಧ್ಯರಾತ್ರಿ ಶ್ರಮದಾನದೊಂದಿಗೆ ರಸ್ತೆ ದುರಸ್ತಿ !

ಮಂಗಳೂರು, ಆ.31: ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಗುರುವಾರ ಮಧ್ಯರಾತ್ರಿ ಯುವಕರು ಶ್ರಮದಾನ ನಡೆಸಿ ಪ್ರಮುಖ ರಸ್ತೆಯನ್ನು ದುರಸ್ತಿ ಗೊಳಿಸಿದ ಘಟನೆ ನಡೆದಿದೆ.

ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮುಖ್ಯರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಿಂದ ಅಡ್ಕ ಕ್ರಾಸ್ ಕೆಐಎಡಿಬಿ ಕಚೇರಿವರಗೆ ವಿಧಾನಸಭಾ ಚುನಾವಣೆಗೆ ಮುಂಚೆ 11 ಕೋ.ರೂ. ವೆಚ್ಚದಲ್ಲಿ ಕಾಂಕ್ರಿಟೀಕರಣಗೊಳಿಸಿ ರಸ್ತೆ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಕೆಐಎಡಿಬಿ ಕಚೇರಿಯಿಂದ ಅಂಗರಗುಂಡಿ-ಮುಂಗಾರುವರೆಗೆ ರಸ್ತೆಯು ಹೊಂಡಗುಂಡಿಗಳಿಂದ ತೀವ್ರ ನಾದುರಸ್ತಿಯಲ್ಲಿತ್ತು. ಇತ್ತೀಚೆಗೆ ಸುರಿದ ಭಾರೀ ಮಳೆಗೆ ಇನ್ನಷ್ಟು ಗುಂಡಿಗಳಾಗಿ, ರಸ್ತೆಯಲ್ಲಿ ಕೆರೆ ಮಾದರಿಯಲ್ಲಿ ನೀರು ನಿಂತಿತ್ತು. ಇದರಿಂದ ಈ ರಸ್ತೆಯಲ್ಲಿ ಸಂಚರಿಸುವವರು ತೀವ್ರ ಯಾತನಾಮಯ ಪರಿಸ್ಥಿತಿ ಎದುರಿಸುತ್ತಿದ್ದರು. ಕೈಗಾರಿಕಾ ಪ್ರದೇಶಕ್ಕೆ ಸಂಚರಿಸುವವರು ಅಲ್ಲದೆ ಅಂಗರಗುಂಡಿ, ಜೋಕಟ್ಟೆ ಪ್ರದೇಶಗಳಿಗೆ ಬಸ್, ಘನ ವಾಹನಗಳು ತೆರಳಲು ಇದು ಮುಖ್ಯ ರಸ್ತೆಯಾಗಿದ್ದು, ಇಲ್ಲಿನ ನಿವಾಸಿಗಳ ಸಂಚಾರಕ್ಕೆ ತೀವ್ರ ಕಷ್ಟಪಡುವಂತಾಗಿತ್ತು. ಹಲವು ದ್ವಿಚಕ್ರ ಸವಾರರು ಇದರಿಂದ ರಾತ್ರಿ ವೇಳೆಯಲ್ಲಿ ಸಂಚರಿಸುವಾಗ ಬಿದ್ದು, ಗಾಯಗೊಂಡ ಘಟನೆಗಳು ನಡೆದಿದ್ದವು.

ಈ ರಸ್ತೆ ದುರಸ್ತಿ ಪಡಿಸಲು ಇಲ್ಲಿನ ನಿವಾಸಿಗಳು ಕೈಗಾರಿಕಾ ಅಭಿವೃದ್ಧಿ ಮಂಡಳಿ(ಕೆಐಎಡಿಬಿ) ಹಾಗೂ ಮಹಾನಗರಪಾಲಿಕೆಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ವಿಶೇಷವೆಂದರೆ, ಕೆಐಎಡಿಬಿ ಕಚೇರಿ ಎದುರೇ ರಸ್ತೆಯಲ್ಲಿ ಹಲವಾರು ಗುಂಡಿಗಳು ಬಿದ್ದಿದ್ದವು. ಕಳೆದ 3-4 ದಿನಗಳಿಂದ ಈ ರಸ್ತೆ ಇನ್ನಷ್ಟು ಜರ್ಜರಿತವಾಗಿ ಸಂಚಾರವೇ ದುಸ್ತರವಾಗಿತ್ತು. ಇದರಿಂದ ಬೇಸತ್ತ ಮತ್ತು ಆಕ್ರೋಶಿತರಾದ ಅಂಗರಗುಂಡಿ ಪ್ರದೇಶದ ಯುವಕರು ಜತೆ ಸೇರಿ ಗುರುವಾರ ರಾತ್ರಿ ಶ್ರಮದಾನ ನಡೆಸಿದರು. ಅದರಂತೆ ಖಾಸಗಿ ಕಾಂಕ್ರಿಟ್ ಮಿಕ್ಸರ್ ಸಂಸ್ಥೆಯಿಂದ ಒಂದು ಲೋಡ್ ಕಾಂಕ್ರಿಟ್ ಖರೀದಿಸಿ ರಸ್ತೆ ಹೊಂಡ ಗುಂಡಿ ತುಂಬಿಸಿದರು. ಶುಕ್ರವಾರ ಬೆಳಗಿನ ಜಾವದವರೆಗೆ ಶ್ರಮದಾನ ನಡೆಸಿ ಗಮನ ಸೆಳೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X