Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾನವನ ಮೆದುಳಿಗೂ ಸೇರುತ್ತಿರುವ ಧೂಳಿನ...

ಮಾನವನ ಮೆದುಳಿಗೂ ಸೇರುತ್ತಿರುವ ಧೂಳಿನ ಕಣ: ಮಹೇಶ್ ಕಶ್ಯಪ್

ವಾರ್ತಾಭಾರತಿವಾರ್ತಾಭಾರತಿ31 Aug 2018 10:50 PM IST
share

ಬೆಂಗಳೂರು, ಆ.31: ಇತ್ತೀಚಿಗೆ ನಡೆದ ಸಂಶೋಧನೆಗಳಲ್ಲಿ ಧೂಳಿನ ಕಣವು ಮಾನವನ ಮೆದುಳಿಗೂ ಸೇರುತ್ತಿರುವುದು ಬೆಳಕಿಗೆ ಬಂದಿದೆ ಎಂದು ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಮಹೇಶ್ ಕಶ್ಯಪ್ ಆತಂಕ ವ್ಯಕ್ತಪಡಿಸಿದರು.

ಶುಕ್ರವಾರ ನಗರದ ರಾಜಭವನ ರಸ್ತೆಯ ಖಾಸಗಿ ಹೊಟೇಲ್‌ನಲ್ಲಿ ಭಾರತೀಯ ವಾಯುಮಾಲಿನ್ಯ ನಿಯಂತ್ರಣ ಸಂಘ (ಐಪಿಸಿಎ) ಆಯೋಜಿಸಿದ್ದ ‘ಏರ್ ಓಥಾನ್’ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಧೂಳಿನ ಕಣಗಳು ಸೂಕ್ಷ್ಮವಾದಷ್ಟೂ ಶರೀರವನ್ನು ಸುಲಭವಾಗಿ ಪ್ರವೇಶಿಸುತ್ತವೆ. ಇತ್ತೀಚೆಗೆ ನಡೆದ ಸಂಶೋಧನೆಗಳಲ್ಲಿ ಪಿಎಂ-10 ಧೂಳಿನ ಕಣವು ಮಾನವನ ಮೆದುಳಿಗೂ ಸೇರುತ್ತಿರುವುದು ತಿಳಿದುಬಂದಿದೆ. ಇದು ಮೆದುಳಿಗೆ ಹಾನಿ ಮಾಡುವ ರೋಗಗಳಿಗೆ ಕಾರಣವಾಗುತ್ತಿದೆ ಎಂದು ತಿಳಿಸಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಮಹೇಶ್ ತಿಮ್ಮಯ್ಯ ಮಾತನಾಡಿ, ಪಿಎಂ-10, ಪಿಎಂ-2.5 ಗಿಂತಲೂ ಅತಿ ಸೂಕ್ಷ್ಮ ಧೂಳಿನ ಕಣವಾದ ಪಿಎಂ-1 ಪರೀಕ್ಷಿಸಲು ಸೂಕ್ತವಾದ ತಂತ್ರಜ್ಞಾನ ಹಾಗೂ ಉಪಕರಣಗಳಿಲ್ಲ ಎಂದು ಅವರು ಹೇಳಿದರು.

ಪಿಎಂ-1 ಎಂಬ ಅತಿ ಸೂಕ್ಷ್ಮ ಧೂಳಿನ ಕಣವು ಮಾನವನ ಆರೋಗ್ಯದ ಮೇಲೆ ಹೆಚ್ಚು ದುಷ್ಪರಿಣಾಮ ಬೀರುತ್ತಿದೆ. ಆದರೆ ಇದನ್ನು ಪತ್ತೆ ಮಾಡಲು ದೇಶದಲ್ಲಿ ಸರಿಯಾದ ಉಪಕರಣ ಲಭ್ಯವಿಲ್ಲ. ಮುಂದಿನ ದಿನಗಳಲ್ಲಿ ತಂತ್ರಜ್ಞಾನ ಅಭಿವೃದ್ಧಿಯಾದಾಗ ಈ ಧೂಳಿನ ಕಣದ ಪ್ರಮಾಣವನ್ನು ಪ್ರತಿ ದಿನ ಪರೀಕ್ಷಿಸುವ ಸಾಮರ್ಥ್ಯವನ್ನು ಮಂಡಳಿಗಳು ಹೊಂದಬಹುದು ಎಂದು ಅಭಿಪ್ರಾಯಪಟ್ಟರು.

ಮಂಡಳಿಯು ನಗರದಲ್ಲಿ ಸ್ಥಾಪಿಸಿರುವ ಮಾಲಿನ್ಯ ಪರೀಕ್ಷಾ ಕೇಂದ್ರಗಳ ಮೂಲಕ ಪಿಎಂ-10, ಪಿಎಂ-2.5, ಕಾರ್ಬನ್ ಮೊದಲಾದ ಮಾಲಿನ್ಯ ಕಾರಕಗಳನ್ನು ನಿತ್ಯ ಪರೀಕ್ಷಿಸಲಾಗುತ್ತಿದೆ. ನ್ಯಾಷನಲ್ ಆ್ಯಂಬಿಯೆಂಟ್ ಏರ್ ಕ್ವಾಲಿಟಿ ಸ್ಟಾಂಡರ್ಡ್ಸ್ ನಿಯಮವು 2009 ರಲ್ಲಿ ತಿದ್ದುಪಡಿಯಾದಾಗ ಹೊಸ ಮಾಲಿನ್ಯಕಾರಕಗಳ ಪಟ್ಟಿ ಮಾಡಲಾಯಿತು. ಪಿಎಂ-10, ಪಿಎಂ-2.5 ಧೂಳಿನ ಕಣಗಳ ಹೆಸರನ್ನು ಆಗಲೇ ಪಟ್ಟಿಗೆ ಸೇರಿಸಲಾಯಿತು ಎಂದರು.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಎಲ್ಲ ರಾಜ್ಯಗಳ ಮಾಲಿನ್ಯ ನಿಯಂತ್ರಣ ಮಂಡಳಿಗಳು ಪ್ರಮುಖವಾಗಿ 12 ವಾಯು ಮಾಲಿನ್ಯಕಾರಕಗಳ ಪ್ರಮಾಣವನ್ನು ಕಂಡುಹಿಡಿಯುವ ಸಾಮರ್ಥ್ಯ ಹೊಂದಿವೆ. ಆದರೂ, ಬಹುತೇಕ ಮಂಡಳಿಗಳು ಉಪಕರಣ, ತಂತ್ರಜ್ಞಾನದ ಕೊರತೆಯಿಂದ 8 ಮಾಲಿನ್ಯಕಾರಕಗಳ ಪ್ರಮಾಣವನ್ನಷ್ಟೇ ಪರೀಕ್ಷೆ ಮಾಡುತ್ತಿವೆ ಎಂದು ಹೇಳಿದರು.

ಐಪಿಸಿಎ ಉಪ ನಿರ್ದೇಶಕಿ ಡಾ.ರಾಧಾ ಗೋಯಲ್ ಮಾತನಾಡಿ, ಕೆಲ ವರ್ಷಗಳಿಂದ ಮನೆಯ ಒಳಗಿನ ವಾಯುಮಾಲಿನ್ಯದ ಬಗ್ಗೆ ಚರ್ಚೆಯಾಗುತ್ತಿದೆ. ಹೊರಗಿನ ವಾಯುಮಾಲಿನ್ಯಕ್ಕಿಂತ ಮನೆಯ ಒಳಗಿನ ಮಾಲಿನ್ಯ ಆರೋಗ್ಯದ ಮೇಲೆ ಹೆಚ್ಚು ದುಷ್ಪರಿಣಾಮ ಬೀರುತ್ತಿದೆ ಎಂದು ಕಾರ್ಯಾಗಾರದಲ್ಲಿ ವಿಪ್ರಾಸ್ಪರ್ಸ್‌ ಕಂಪೆನಿಯ ಮುಖ್ಯಸ್ಥ ಪ್ರದೀಪ್ ಮೈಥನಿ, ಐಐಎಸ್‌ಸಿ ವಿಜ್ಞಾನಿ ಪ್ರೊ.ನವಕಾಂತ ಭಟ್ ಸೇರಿ ಪ್ರಮುಖರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X