Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕಾರ ನಿರ್ಲಕ್ಷಿಸಿದರೆ ನಮ್ಮ ನೆಲೆಯನ್ನು...

ಸರಕಾರ ನಿರ್ಲಕ್ಷಿಸಿದರೆ ನಮ್ಮ ನೆಲೆಯನ್ನು ನಾವೇ ಪುನರ್ ನಿರ್ಮಿಸುತ್ತೇವೆ: ಸಿಎನ್‍ಸಿ ಪ್ರತಿಪಾದನೆ

ಕೊಡಗು ಮಳೆಹಾನಿ

ವಾರ್ತಾಭಾರತಿವಾರ್ತಾಭಾರತಿ31 Aug 2018 11:36 PM IST
share
ಸರಕಾರ ನಿರ್ಲಕ್ಷಿಸಿದರೆ ನಮ್ಮ ನೆಲೆಯನ್ನು ನಾವೇ ಪುನರ್ ನಿರ್ಮಿಸುತ್ತೇವೆ: ಸಿಎನ್‍ಸಿ ಪ್ರತಿಪಾದನೆ

ಮಡಿಕೇರಿ, ಆ.31: ಇತ್ತೀಚೆಗೆ ಕೊಡಗಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ನೆಲೆ ಕಳೆದುಕೊಂಡವರಿಗೆ ಸರಕಾರ ಸಕಾಲದಲ್ಲಿ ಪುನರ್ ವಸತಿ ಕಲ್ಪಿಸಲು ಕ್ರಮ ಕೈಗೊಳ್ಳದಿದ್ದಲ್ಲಿ ನಮ್ಮ ನೆಲೆಯನ್ನು ನಾವೇ ಪುನರ್ ನಿರ್ಮಿಸಿಕೊಳ್ಳುತ್ತೇವೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಪ್ರತಿಪಾದಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಭೂಕುಸಿತದ ಮೂಲಕ ಕೊಡವ ಪ್ರದೇಶಕ್ಕೆ ಹಾನಿಯಾಗಿರುವುದು ಅಂತರರಾಷ್ಟ್ರೀಯ ವಿಪತ್ತಾಗಿದೆ. ಇದನ್ನು ನಿರ್ವಹಣೆ ಮಾಡಲು ಸರಕಾರದಿಂದ ಸಾಧ್ಯವಾಗದಿದ್ದಲ್ಲಿ ನಮಗೆ ಬಿಟ್ಟು ಕೊಡಿ ಎಂದು ಒತ್ತಾಯಿಸಿದರು. ಕೊಡಗು ಕೇಂದ್ರಾಡಳಿತ ಪ್ರದೇಶವಾದರೆ, ಪತನವಾದ ನಮ್ಮ ನೆಲೆಯನ್ನು ನಾವೇ ಪುನರ್ ನಿರ್ಮಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. 

ಮಡಿಕೇರಿ ಹಾಗೂ ಸೋಮವಾರಪೇಟೆ ತಾಲೂಕನ್ನೊಳಗೊಂಡ ವಾಯವ್ಯ ಕೊಡಗಿನ 6 ನಾಡುಗಳ 35 ಗ್ರಾಮಗಳಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ  ಸಂತ್ರಸ್ತರಾದವರಿಗೆ ಅದೇ ಪ್ರದೇಶಗಳಲ್ಲಿ ಶಾಶ್ವತ ಪುನರ್ವಸತಿ ಕಲ್ಪಿಸುವಂತೆ ಒತ್ತಾಯಿಸಿ ಸಂಘಟನೆ ವತಿಯಿಂದ ಸೆ.1 ಮಡಿಕೇರಿಯಲ್ಲಿ ವಾಹನ ಜಾಥಾ ನಡೆಸುವುದರೊಂದಿಗೆ ಜಿಲ್ಲಾಡಳಿತದ ಮೂಲಕ ಕೇಂದ್ರ ಸರಕಾರ ಮತ್ತು ವಿಶ್ವಸಂಸ್ಥೆಯ ಗಮನ ಸೆಳೆಯಲಾಗುವುದು ಎಂದರು.

ಆ.12 ರಿಂದ 19 ರವರೆಗೆ ಕೊಡಗಿನ ವಾಯವ್ಯ ಭಾಗದಲ್ಲಿ ನಡೆದ ಭೀಕರ ಭೂಕುಸಿತವನ್ನು ಅಂತಾರಾಷ್ಟ್ರೀಯ ವಿಪತ್ತು ಮತ್ತು ರಾಷ್ಟ್ರೀಯ ಉತ್ಪಾತ ಎಂದು ಪರಿಗಣಿಸಬೇಕು. ಆ ಮೂಲಕ ನಿರಾಶ್ರಿತರಿಗೆ ಸಮರೋಪಾದಿಯಲ್ಲಿ ಶಾಸನಬದ್ಧ ಪುನರ್ವಸತಿ ಕಲ್ಪಿಸಲು ಸಿದ್ಧತೆ ಮತ್ತು ಬದ್ಧತೆ ತೋರಬೇಕು ಎಂದು ನಾಚಪ್ಪ ಒತ್ತಾಯಿಸಿದರು.

ಭೂಕಂಪನ ಮತ್ತು ಭೂಕುಸಿತದಿಂದ ನಿರಾಶ್ರಿತರಾದ ಸಂತ್ರಸ್ತರ ಶಾಶ್ವತ ಪುನರ್ವಸತಿಗೆ ಒತ್ತಾಯಿಸುವ ನಿಟ್ಟಿನಲ್ಲಿ ಸೆ.1ರಂದು ಸಿ.ಎನ್.ಸಿಯು 24ನೇ ವರ್ಷದ ಸಾರ್ವತ್ರಿಕ ಕೈಲ್‍ಪೊವ್ದ್ ನಮ್ಮೆಯನ್ನು ಸಾಂಕೇತಿಕ ಆಯುಧ ಪೂಜೆ ಮತ್ತು  ಮೌನ ಶೋಕಾಚರಣೆಯ ಮೂಲಕ ವಾಹನ ಜಾಥಾ ನಡೆಸಿ ಹಕ್ಕೊತ್ತಾಯ ಮಂಡಿಸಲಿದೆ ಎಂದು ಹೇಳಿದರು.

ಕೊಡಗಿನ ವಾಯುವ್ಯ ಭಾಗದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಕ್ಕೆ ಕೊಡಗಿನ ಹೃದಯ ಭಾಗದಲ್ಲಿ ನಿರ್ಮಿಸಿರುವ ಹಾರಂಗಿ ಜಲಾಶಯವೇ ಕಾರಣ ಎಂದು ಪ್ರತಿಪಾದಿಸಿದ ನಾಚಪ್ಪ ಅವರು, ಪ್ರಸಕ್ತ ನಿರಾಶ್ರಿತರಾಗಿರುವ ಕುಟುಂಬಗಳಿಗೆ ಆಯಾ ಪ್ರದೇಶಗಳಲ್ಲೇ ಪುನರ್ವಸತಿ ಕಲ್ಪಿಸುವ ಮುನ್ನ ಹಾರಂಗಿ ಜಲಾಶಯವನ್ನು ಸಂಪೂರ್ಣವಾಗಿ ಕಿತ್ತೊಗೆಯಬೇಕು ಎಂದು ಒತ್ತಾಯಿಸಿದರು.   

ಸಂತ್ರಸ್ತರಿಗೆ ಶಾಶ್ವತ ಪುನರ್ವಸತಿ ಕಾರ್ಯ ಪೂರ್ಣಗೊಳ್ಳುವವರೆಗೆ 10 ವರ್ಷಗಳ ಕಾಲ ಅವರ ಜೀವನ ನಿರ್ವಹಣೆಗೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಅನಾಥ ಪ್ರಜ್ಞೆ ಕಾಡದಂತೆ ಭರವಸೆ ಮೂಡಿಸುವ ಸಲುವಾಗಿ, ಸಂತ್ರಸ್ತರು ಬಾಡಿಗೆ ಮನೆ ಪಡೆದುಕೊಂಡು ವಾಸಿಸಲು ಆ ಮನೆ ಬಾಡಿಗೆ ಮತ್ತು ಜೀವನ ನಿರ್ವಹಣೆಗೆ ಆರ್ಥಿಕ ಸಹಾಯದ ವಿಶೇಷ ಪ್ಯಾಕೇಜ್‍ನ ವ್ಯವಸ್ಥೆ ಮಾಡಬೇಕು ಎಂದರು.

ಜಿಲ್ಲೆಯಲ್ಲಿ ಪ್ರಸಕ್ತ ಸಂಭವಿಸಿರುವ ಪ್ರಕೃತಿ ವಿಕೋಪದ ಹೆಸರಿನಲ್ಲಿ ಸಂತ್ರಸ್ತರಲ್ಲದವರು ಲಾಭ ಪಡೆಯುವ ಸಂಭವವಿದೆ. ಕಾವೇರಿ ನದಿ ದಂಡೆಯಲ್ಲಿ ಅಕ್ರಮವಾಗಿ ನೆಲೆ ನಿಂತು ಪ್ರತಿವರ್ಷ ಗಂಜಿ ಕೇಂದ್ರ ಸೇರಿ ಪರಿಹಾರ ಪಡೆದು ಪ್ರವಾಹ ಇಳಿಮುಖವಾದ ಮೇಲೆ ತಮ್ಮ ಅಕ್ರಮ ನೆಲೆಗಳಿಗೆ ತೆರಳುವವರೂ ಇದ್ದಾರೆ. ವಿಪರೀತ ಮಳೆಯಿಂದಾಗಿ ಕಾಫಿ ತೋಟ ಮತ್ತು ಗದ್ದೆ ಬೆಳೆ ಕಳೆದುಕೊಂಡವರು ನೈಜ ಸಂತ್ರಸ್ತರಾಗಿದ್ದು, ನೈಜ ಭೂಕುಸಿತದಿಂದ ಸಂತ್ರಸ್ತರರಾದವರ ಕಲ್ಯಾಣಕ್ಕೆ ಮತ್ತು ಪುನರ್ವಸತಿಗೆ ತಲುಪಲಿರುವ ಪ್ಯಾಕೇಜ್‍ನ ದಿಕ್ಕು ತಪ್ಪಿಸಬಾರದು ಎಂದೂ ನಾಚಪ್ಪ ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X