Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರಳ ಬ್ಯಾಂಕಿಂಗ್ ಸೇವೆ ಕಲ್ಪಿಸುವ...

ಸರಳ ಬ್ಯಾಂಕಿಂಗ್ ಸೇವೆ ಕಲ್ಪಿಸುವ ಐಪಿಪಿಬಿಗೆ ಚಾಲನೆ

ಕರ್ನಾಟಕದ 31 ಅಂಚೆ ಶಾಖೆಗಳಲ್ಲಿ ಆರಂಭ

ವಾರ್ತಾಭಾರತಿವಾರ್ತಾಭಾರತಿ1 Sept 2018 7:53 PM IST
share

ಬೆಂಗಳೂರು, ಸೆ.1: ಬ್ಯಾಂಕಿಂಗ್ ಸೇವೆ ವಂಚಿತ ಸಾಮಾನ್ಯರಿಗೂ ಸರಳವಾಗಿ ಬ್ಯಾಂಕಿಂಗ್ ಸೇವೆ ಕಲ್ಪಿಸುವ ಅಂಚೆ ಇಲಾಖೆಯ ಭಾರತೀಯ ಅಂಚೆ ಪಾವತಿ ಬ್ಯಾಂಕ್(ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್-ಐಪಿಪಿಬಿ)ಗೆ ಚಾಲನೆ ಸಿಕ್ಕಿದೆ. 

ಕರ್ನಾಟಕದಲ್ಲಿ 31 ಜಿಲ್ಲಾ ಶಾಖೆಗಳಲ್ಲಿನ 155 ಸೇವಾ ಕೇಂದ್ರಗಳಲ್ಲಿ ಕಾರ್ಯಾರಂಭವಾಯಿತು. ಸಾಮಾನ್ಯ ಜನ ಸರಳವಾಗಿ ಕನಿಷ್ಠ ಠೇವಣಿಯಿಲ್ಲದೆ ಶೂನ್ಯ ಶುಲ್ಕದೊಂದಿಗೆ ಕೇವಲ ಆಧಾರ್, ಮೊಬೈಲ್ ಸಂಖ್ಯೆ ಆಧರಿಸಿ ಖಾತೆ ತೆರೆದು ಬ್ಯಾಂಕಿಂಗ್ ಸೇವೆ ಪಡೆಯುವ ಪರಿಕಲ್ಪನೆಯ ಸೇವೆಗೆ ಪ್ರಧಾನಿ ಮೋದಿ ಹೊಸದಿಲ್ಲಿಯಲ್ಲಿ ಶನಿವಾರ ಚಾಲನೆ ನೀಡಿದರು.

ಬೆಂಗಳೂರಿನ ಪುರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕದ 31 ಜಿಲ್ಲಾ ಶಾಖೆಗಳಲ್ಲಿನ 155 ಸೇವಾ ಕೇಂದ್ರಗಳಿಗೆ ಸಂಸದ ಪಿ.ಸಿ.ಮೋಹನ್ ಅವರು ಚಾಲನೆ ನೀಡಿ ಮಾತನಾಡಿದರು. ರಾಜ್ಯದ 31 ಶಾಖೆಗಳಲ್ಲಿ ಇಂದು ಪಾವತಿ ಬ್ಯಾಂಕಿಂಗ್ ಸೇವೆ ಆರಂಭವಾಗಲಿದ್ದು, ಡಿಸೆಂಬರ್ ವೇಳೆಗೆ ರಾಜ್ಯದ ಎಲ್ಲ 9000 ಸೇವಾ ಕೇಂದ್ರಗಳಲ್ಲೂ ಐಪಿಪಿಬಿ ಸೇವೆ ಶುರುವಾಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕರ್ನಾಟಕ ವೃತ್ತದ ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಡಾ.ಚಾರ್ಲ್ಸ್ ಲೋಬೋ, ಐಪಿಪಿಬಿ ಹಿರಿಯ ವ್ಯವಸ್ಥಾಪಕ ಸುರೇಶ್, ಕರ್ನಾಟಕ ಅಂಚೆ ವತ್ತದ ಸಹಾಯಕ ನಿರ್ದೇಶಕ ವೆಂಕಟಾಚಲ ಭಟ್ ಉಪಸ್ಥಿತರಿದ್ದರು.

ದೇಶಾದ್ಯಂತ 1.55 ಲಕ್ಷ ಅಂಚೆ ಕಚೇರಿ ಶಾಖೆಗಳಿದ್ದು, ಈ ಪೈಕಿ 650 ಪ್ರಮುಖ (ಜಿಲ್ಲಾ) ಶಾಖೆಗಳಲ್ಲಿ ಐಪಿಪಿಬಿ ಸೇವೆ ಶುರುವಾಗಲಿದೆ. ದೇಶಾದ್ಯಂತ 3250 ಸೇವಾ ಕೇಂದ್ರಗಳಲ್ಲಿ ಸೇವೆ ಆರಂಭವಾಗಲಿದೆ. ಐಪಿಪಿಬಿ ಖಾತೆಯಲ್ಲಿ ಗರಿಷ್ಠ 1 ಲಕ್ಷ ರೂ.ವರೆಗೆ ಠೇವಣಿಗೆ ಅವಕಾಶವಿದ್ದು, ತ್ತೈಮಾಸಿಕ ಶೇ.4ರಷ್ಟು ಬಡ್ಡಿ ಸಿಗಲಿದೆ. ಐಪಿಪಿಬಿ ಖಾತೆಯನ್ನು ಅಂಚೆ ಕಚೇರಿ ಉಳಿತಾಯ ಖಾತೆಗೆ ಜೋಡಣೆ ಮಾಡುವುದರಿಂದ 1 ಲಕ್ಷಕ್ಕಿಂತ ಹೆಚ್ಚು ಮೊತ್ತವಿದ್ದರೆ ಹೆಚ್ಚುವರಿ ಮೊತ್ತ ಉಳಿತಾಯ ಖಾತೆಗೆ ವರ್ಗಾವಣೆಯಾಗುತ್ತದೆ.

ಮನೆ ಮನೆಗೆ ತಮ್ಮ ಬ್ಯಾಂಕ್: ವಿಮಾನಯಾನ ಟಿಕೆಟ್, ರೈಲ್ವೆ ಟಿಕೆಟ್, ಬಸ್ ಟಿಕೆಟ್, ಬುಕ್ ಮೈ ಶೋ, ಟೆಲಿಕಾಂ ಬಿಲ್, ಬೆಸ್ಕಾಂ, ಜಲಮಂಡಳಿ, ಬಿಎಸ್‌ಎನ್ ಎಲ್ ಸೇರಿ ಇತರೆ ಸೇವಾ ಬಿಲ್ ಪಾವತಿಗೆ ಅವಕಾಶವಿರಲಿದೆ. ಆನ್‌ಲೈನ್ ಎನ್‌ಇಎಫ್ಟಿ, ಆರ್‌ಟಿಜಿಎಸ್, ಐಎಂಪಿಎಸ್ ಸೌಲಭ್ಯವೂ ಇದೆ. ಫಲಾನುಭವಿಗೆ ನೇರ ಪಾವತಿ (ಡಿಬಿಟಿ) ಕಾರ್ಯಕ್ಕೂ ಬಳಕೆಯಾಗಲಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ, ಮಾಸಾಶನ, ಸಹಾಯಧನ, ಪಿಂಚಣಿ, ವಿದ್ಯಾರ್ಥಿ ವೇತನ, ಸಬ್ಸಿಡಿ ಇತರೆ ಆರ್ಥಿಕ ನೆರವನ್ನು ನೇರವಾಗಿ ಐಪಿಪಿಬಿ ಖಾತೆಗೆ ವರ್ಗಾಹಿಸಲು ಅವಕಾಶವಿರಲಿದೆ. ಹೀಗಾಗಿ, ಇದನ್ನು ಮನೆ ಮನೆಗೆ ತಮ್ಮ ಬ್ಯಾಂಕ್’ ಎನ್ನಬಹುದು.

ಐಪಿಪಿಬಿ ವಿಶೇಷತೆ: ಖಾತೆ ತೆರೆಯಲು ಅರ್ಜಿ ಭರ್ತಿ ಮಾಡುವ ಅಗತ್ಯವಿಲ್ಲ. ಠೇವಣಿಗೆ, ಹಣ ವರ್ಗಾವಣೆಗೂ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಕೇವಲ ಆಧಾರ್ ಕಾರ್ಡ್‌ಸಂಖ್ಯೆ, ಮೊಬೈಲ್ ಸಂಖ್ಯೆ ನೀಡಿ ಖಾತೆ ತೆರೆಯಬಹುದು. ಮನೆ ಬಾಗಿಲಲ್ಲೇ ಅಂಚೆ ಸಿಬ್ಬಂದಿ ಮೂಲಕ ಖಾತೆ ತೆರೆಯಬಹುದು, ಹಣ ಪಡೆಯಬಹುದು. ಖಾತೆ ತೆರೆಯಲು ಕನಿಷ್ಠ ಠೇವಣಿ ಅಗತ್ಯವಿಲ್ಲ. ಬ್ಯಾಂಕ್ ವ್ಯವಹಾರಕ್ಕೆ ಪಾಸ್‌ಬುಕ್ ಬೇಕಿಲ್ಲ. ಪ್ರತಿ ವ್ಯವಹಾರಕ್ಕೂ ಎಸ್‌ಎಂಎಸ್ ಸಂದೇಶ ರವಾನೆ. ಖಾತೆ ಸಂಖ್ಯೆ ನೆನಪಿಟ್ಟುಕೊಳ್ಳುವ ಅಗತ್ಯವಿಲ್ಲ.

ಕ್ಯೂಆರ್ ಕಾರ್ಡ್ ಎಲ್ಲ ಮಾಹಿತಿ ನೀಡುತ್ತದೆ. ಎಲ್ಲ ಬಿಲ್ ಪಾವತಿಗಳನ್ನೂ ಐಪಿಪಿಬಿ ಖಾತೆಯಿಂದಲೇ ನಿರ್ವಹಿಸಲು ಅವಕಾಶ. ಕಾರ್ಡ್ ಬಳಕೆ ವೇಳೆ ಬೆರಳಚ್ಚು ಇಲ್ಲವೇ ಒಟಿಪಿ ವಿವರ ದಾಖಲೀಕರಣ ಅಗತ್ಯ. ಆಧಾರ್ ಕಾರ್ಡ್ ಅಥವಾ ಒಟಿಪಿ ಇಲ್ಲದಿದ್ದರೆ ಕಾರ್ಡ್ ಬಳಸುವ ಅವಕಾಶವಿಲ್ಲದ ಕಾರಣ ದುರ್ಬಳಕೆ ಸಾಧ್ಯವಿಲ್ಲ.

ಅಕೌಂಟ್ ಕಾರ್ಡ್ ಮಾತ್ರ: ಐಪಿಪಿಬಿ ಖಾತೆದಾರರಿಗೆ ನೀಡುವ ಕ್ಯೂಆರ್ ಕಾರ್ಡ್ ಅಕೌಂಟ್ ಕಾರ್ಡ್ ಆಗಿ ಮಾತ್ರ ಬಳಕೆಯಾಗುತ್ತದೆ. ಎಟಿಎಂ/ ಡೆಬಿಟ್ ಕಾರ್ಡ್‌ನಂತೆ ಬಳಸಲು ಅವಕಾಶವಿಲ್ಲ. ಸ್ವೈಪ್‌ಗೆ ಅವಕಾಶವಿಲ್ಲದಿದ್ದರೂ ಹಣ ವರ್ಗಾವಣೆಗೆ ಬಳಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X