Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರು: ದಲಿತ ಕುಟುಂಬದ ಎತ್ತಂಗಡಿಗೆ...

ತುಮಕೂರು: ದಲಿತ ಕುಟುಂಬದ ಎತ್ತಂಗಡಿಗೆ ಯತ್ನ; ಗ್ರಾ.ಪಂ.ಅಧಿಕಾರಿಗಳ ವಿರುದ್ಧ ದಲಿತರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ1 Sept 2018 10:20 PM IST
share
ತುಮಕೂರು: ದಲಿತ ಕುಟುಂಬದ ಎತ್ತಂಗಡಿಗೆ ಯತ್ನ; ಗ್ರಾ.ಪಂ.ಅಧಿಕಾರಿಗಳ ವಿರುದ್ಧ ದಲಿತರ ಪ್ರತಿಭಟನೆ

ತುಮಕೂರು,ಸೆ.01: ಪಂಚಾಯತ್ ಹಾಗೂ ಸರಕಾರಿ ಜಾಗವಲ್ಲದಿದ್ದರೂ ಹತ್ತಾರು ವರ್ಷಗಳಿಂದ ವಾಸವಿರುವ ಜಾಗವನ್ನು ಖಾತೆ ಮಾಡಿಕೊಡದೆ, ಬಡ ದಲಿತ ಕುಟುಂಬವೊಂದನ್ನು ಎತ್ತಂಗಡಿ ಮಾಡಲು ಹೊರಟಿರುವ ಸಿ.ಎಸ್.ಪುರ ಗ್ರಾಮಪಂ. ಅಧಿಕಾರಿಗಳ ವಿರುದ್ದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ಸಿ.ಎಸ್.ಪುರ(ಚಂದ್ರಶೇಖರಪುರ)ದಲ್ಲಿ ಕಳೆದ 30 ವರ್ಷಗಳಿಂದ ರಂಗಸ್ವಾಮಿ ಎಂಬುವವರು ರಸ್ತೆಯ ಒಂದು ಬದಿಯಲ್ಲಿ ಗ್ರಾಮ ಪಂ. ಪರವಾನಗಿ ಪಡೆದು ಚಪ್ಪಲಿ ಹೊಲೆಯುವ ಮತ್ತು ಪೋಟೋಗೆ ಕಟ್ಟು, ಗಾಜು ಹಾಕುವ ಒಂದು ಸಣ್ಣ ಗೂಡಂಗಡಿ ಇಟ್ಟು ಜೀವನ ನಡೆಸುತ್ತಿದ್ದರು. ಆದರೆ ಕೆಲ ದಿನಗಳ ಹಿಂದೆ ಸದರಿ ಜಾಗ ತನ್ನದಲ್ಲದಿದ್ದರೂ ಗ್ರಾ.ಪಂ.ನವರು ಗೂಡಂಗಡಿಯನ್ನು ಬದಿಗೆ ಸರಿಸಿ, ಗುಡಿಸಲು ಎತ್ತಂಗಡಿಗೆ ಪ್ರಯತ್ನಿಸಿದ್ದಾರೆ. ರಂಗಸ್ವಾಮಿ ಅವರಿಗೆ ಸದರಿ ಜಾಗದಲ್ಲಿರುವ ಒಂದು ಗುಡಿಸಲು ಬಿಟ್ಟರೆ ಗ್ರಾಮದಲ್ಲಿ ಬೇರೆ ಯಾವುದೇ ಜಮೀನು, ಮನೆ ಇಲ್ಲ. ಇರುವ ಸಣ್ಣ ಜಾಗದಲ್ಲಿಯೇ ತಾಯಿ, ಹೆಂಡತಿ ಮತ್ತು ಮಗನೊಂದಿಗೆ ಜೀವನ ನಡೆಸುತ್ತಿರುವ ರಂಗಸ್ವಾಮಿ, ಹಲವು ಬಾರಿ ಸದರಿ ಜಾಗವನ್ನು ತನ್ನ ಹೆಸರಿಗೆ ಮಂಜೂರು ಮಾಡಿಕೊಡುವಂತೆ ಗ್ರಾ.ಪಂ.ಗೆ ಹಾಗೂ ತಹಶೀಲ್ದಾರರಿಗೆ ಮನವಿ ಮಾಡಿದ್ದಾರೆ. ತಾಲೂಕು ಆಡಳಿತದಿಂದ ಸದರಿ ಜಾಗವನ್ನು ಸರ್ವೆ ಮಾಡಿಸಿದ್ದು, ಆ ಜಾಗ ಪಂಚಾಯತ್ ಗಾಗಲಿ, ರಸ್ತೆಗಾಗಲಿ ಸೇರಿಲ್ಲ. ಕಾಲು ದಾರಿಯಾಗಿದೆ ಎಂದು ಸರ್ವೆ ಅಧಿಕಾರಿಗಳು ವರದಿ ಮಾಡಿದ್ದರೂ ಇದಕ್ಕೆ ಬೆಲೆ ನೀಡದ ಕೆಲ ಗ್ರಾ.ಪಂ.ಸದಸ್ಯರು ರಂಗಸ್ವಾಮಿ ಅವರ ಕುಟುಂಬವನ್ನು ಶತಾಯಗತಾಯ ಅಲ್ಲಿಂದ ಎತ್ತಂಗಡಿ ಮಾಡಿಸಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.  ಇದರ ವಿರುದ್ದ ಕುಟುಂಬ ತಿರುಗಿ ಬಿದ್ದಿದ್ದು, ತನ್ನ ಕುಟುಂಬದೊಂದಿಗೆ ರಂಗಸ್ವಾಮಿ ಪ್ರತಿಭಟನೆಗೆ ಮುಂದಾಗಿದ್ದಾರೆ. 

ಈ ಕುಟುಂಬಕ್ಕೆ  ವಾಸಿಸಲು ಗ್ರಾ.ಪಂ.ವ್ಯಾಪ್ತಿಯಲ್ಲಿ ಬೇರೆ ಸ್ಥಳ ನೀಡುವಂತೆ ಹಲವು ಬಾರಿ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಬಾಳೆ ಎಲೆ, ತೆಂಗಿನ ಸೋಗೆ ಇನ್ನಿತರ  ಕೃಷಿ ತ್ಯಾಜ್ಯಗಳಿಂದಲೇ ಸಣ್ಣ ಗುಡಿಸಲು ಕಟ್ಟಿಕೊಂಡು ವಾಸವಿರುವ ಕುಟುಂಬದ ಮನವಿಗೆ ಇದುವರೆಗೂ ಗ್ರಾ.ಪಂ. ಆಡಳಿತವಾಗಲಿ, ತಾಲೂಕು ಆಡಳಿತವಾಗಲಿ ಸ್ಪಂದಿಸಿಲ್ಲ. ಬದಲಿಗೆ ರಸ್ತೆಯಲ್ಲಿ ಹಾಕಿರುವ ಗುಡಿಸಲು ತೆರವುಗೊಳಿಸುವಂತೆ ಪದೇ ಪದೇ ಗ್ರಾ.ಪಂ.ಪಿಡಿಓ, ಕಾರ್ಯದರ್ಶಿ, ಇನ್ನಿತರ ಅಧಿಕಾರಿಗಳು ರಂಗಸ್ವಾಮಿಯವರ ಕುಟುಂಬದ ಮೇಲೆ ಒತ್ತಡ ಹೇರುತ್ತಿದ್ದು, ಗುಡಿಸಲಿನ ಪಕ್ಕದಲ್ಲಿಯೇ ಕಸ ಸುರಿದು ತೊಂದರೆ ನೀಡುತ್ತಿದ್ದಾರೆ. ಇದರಿಂದ ಬೇಸತ್ತ ಕುಟುಂಬ ಸ್ಥಳೀಯ ದಲಿತರ ಮುಖಂಡರೊಂದಿಗೆ ಸೇರಿ ಪರ್ಯಾಯ ವ್ಯವಸ್ಥೆ ಕಲ್ಪಿಸುವವರೆಗೆ ಗುಡಿಸಲು ಖಾಲಿ ಮಾಡುವುದಿಲ್ಲ. ಒಂದು ವೇಳೆ ಅಧಿಕಾರಗಳ ಒತ್ತಾಯ ಹೆಚ್ಚಾದರೆ ಜಿಲ್ಲಾಧಿಕಾರಿಗಲ ಕಚೇರಿ ಎದುರು ಕುಟುಂಬದರು ಆತ್ಮಹತ್ಯೆಗೆ ಶರಣಾಗುವುದಾಗಿ ಪ್ರತಿಭಟನೆ ನಿರತ ರಂಗಸ್ವಾಮಿ ತಿಳಿಸಿದ್ದಾರೆ.

ಬಡವರಿಗೆ, ಅಶಕ್ತರಿಗೆ, ನಿರ್ಗತಿಕರಿಗೆ ಸೂರು ಕಲ್ಪಿಸಬೇಕಾದ್ದು ಅಯಾಯ ಸ್ಥಳೀಯ ಸಂಸ್ಥೆಗಳ ಅದ್ಯ ಕರ್ತವ್ಯಗಳಲ್ಲಿ ಒಂದಾಗಿದೆ. ಚಪ್ಪಲಿ ಹೊಲೆಯುವುದು ಮತ್ತು ಪೋಟೋ ಕಟ್ಟು, ಗಾಜು ಹಾಕುವುದರಿಂದ ಬರುವ 50-100 ರೂ ಹಣದಲ್ಲಿಯೇ ಮೂರು ಜನರ ಹೊಟ್ಟೆ ತುಂಬಿಸಿಕೊಂಡು ಅರ ಹೊಟ್ಟೆಯಲ್ಲಿಯೇ ಬದುಕುತ್ತಿರುವ ಕುಟುಂಬಕ್ಕೆ ವಾಸಿಸಲು ಯಾವುದಾದರೂ ಯೋಜನೆಯ ಮೂಲಕ ವಸತಿ ಕಲ್ಪಿಸಬೇಕಾದ ಗ್ರಾ.ಪಂ.ಅಧಿಕಾರಿಗಳು, ಬೀದಿ ಬದಿಯಲ್ಲಿ ಬದುಕುತ್ತಿರುವ ಕುಟುಂಬಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಹಿರಿಯ ಅಧಿಕಾರಿಗಳು ಕೂಡಲೇ ಗಮನಹರಿಸಿ, ಬಡ ಕುಟುಂಬಕ್ಕೆ ಸದರಿ ಜಾಗವನ್ನು ಮಂಜೂರು ಮಾಡಿಕೊಡುವಂತೆ ದಲಿತ ಮುಖಂಡರುಗಳು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X