Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿರಾಶ್ರಿತರಿಗೆ ಕಳೆದುಕೊಂಡಷ್ಟೇ ಭೂಮಿ...

ನಿರಾಶ್ರಿತರಿಗೆ ಕಳೆದುಕೊಂಡಷ್ಟೇ ಭೂಮಿ ನೀಡಿ: ಸಿಪಿಐಎಂ ಕೊಡಗು ಜಿಲ್ಲಾ ಘಟಕ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ1 Sept 2018 10:37 PM IST
share
ನಿರಾಶ್ರಿತರಿಗೆ ಕಳೆದುಕೊಂಡಷ್ಟೇ ಭೂಮಿ ನೀಡಿ: ಸಿಪಿಐಎಂ ಕೊಡಗು ಜಿಲ್ಲಾ ಘಟಕ ಒತ್ತಾಯ

ಮಡಿಕೇರಿ, ಸೆ.1: ಪ್ರಕೃತಿ ವಿಕೋಪದಿಂದ ತಮ್ಮ ಅಸ್ತಿತ್ವವನ್ನೆ ಕಳೆದುಕೊಂಡ ಕುಟುಂಬಗಳಿಗೆ ಕಳೆದುಕೊಂಡಷ್ಟೇ ಭೂಮಿ ನೀಡುವುದರೊಂದಿಗೆ ಕೃಷಿ ಫಸಲು ಬಂದು ಜೀವನ ನಡೆಸಲು ಸಾಧ್ಯವಾಗುವವರೆಗೆ ಸರ್ಕಾರ ಅಗತ್ಯ ಸಹಾಯಧನ ನೀಡಬೇಕು ಮತ್ತು ಬಡ್ಡಿ ರಹಿತ ಸಾಲ ಒದಗಿಸಬೇಕು ಎಂದು ಸಿಪಿಐಎಂ ಜಿಲ್ಲಾ ಘಟಕ ಒತ್ತಾಯಿಸಿದೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಜಿಲ್ಲಾ ಕಾರ್ಯದರ್ಶಿ ಡಾ.ಇ.ರ. ದುರ್ಗಾಪ್ರಸಾದ್ ಅವರು, ಇತ್ತೀಚಿನ ವರ್ಷಗಳಲ್ಲಿ ಕಂಡರಿಯದ ಮಳೆ ಈ ಬಾರಿ ಕೊಡಗಿನಲ್ಲಿ ಸುರಿದಿದ್ದು, ಪರಿಣಾಮವಾಗಿ ಸಾಕಷ್ಟು ನಷ್ಟ ಸಂಭವಿಸಿದೆ. ನೀರಿನ ಒತ್ತಡದಿಂದ ಬೆಟ್ಟಗಳೆ ನದಿಯಂತೆ ಹರಿದು ಬಂದು ನೂರಾರು ಹೆಕ್ಟೇರ್ ಗದ್ದೆ ತೋಟಗಳನ್ನು ಮುಚ್ಚಿ ಹಾಕಿವೆ. ಇದರಿಂದಾಗಿ ಕೃಷಿಯನ್ನೆ ಅವಲಂಬಿಸಿ ಬದುಕುತ್ತಿರುವ ಸಣ್ಣ ಮಧ್ಯಮ ರೈತರ ಭವಿಷ್ಯ ಕತ್ತಲೆಯಲ್ಲಿ ಮುಳುಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಕೆಲವು ಶ್ರೀಮಂತ ಖಾಸಗಿ ಸಂಸ್ಥೆಗಳು ಕಾಫಿ ತೋಟಕ್ಕಾಗಿ ಭೂಮಿಯನ್ನು ಖರೀದಿಸುವುದರೊಂದಿಗೆ ಸರ್ಕಾರಿ ಭೂಮಿಯನ್ನು ಕಬಳಿಸಿದ್ದಾರೆ. ಆದ್ದರಿಂದ ಅಕ್ರಮ ಒತ್ತುವರಿ ಭೂಮಿಯನ್ನು ಸರ್ವೇ ಮಾಡಿ ತೋಟ, ಗದ್ದೆ, ಮನೆಗಳನ್ನು ಕಳೆದುಕೊಂಡವರಿಗೆ ಹಂಚಬೇಕು ಎಂದು ಒತ್ತಾಯಿಸಿದರು.

ಅತಿವೃಷ್ಟಿಯಿಂದಾಗಿ ಕಾಫಿ, ಕರಿಮೆಣಸು ಮತ್ತು ಭತ್ತದ ಇಳುವರಿ ಕಡಿಮೆಯಾಗುವ ಅಥವಾ ಇಲ್ಲದಾಗುವ ಸಾಧ್ಯತೆ ಹೆಚ್ಚಿದ್ದು, ರೈತರ ಜೀವನ ಚೇತರಿಸಿಕೊಳ್ಳುವವರೆಗೆ ನಿತ್ಯ ಜೀವನದ ನಿರ್ವಹಣೆಗಾಗಿ ಸಣ್ಣ, ಮಧ್ಯಮ ಬೆಳೆಗಾರರಿಗೆ ದೀರ್ಘಾವಧಿ ಕಂತುಗಳಲ್ಲಿ ಬಡ್ಡಿ ರಹಿತ ಸಾಲ ಒದಗಿಸಬೇಕು, ತೋಟ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಕೃಷಿ ಕಾರ್ಮಿಕರು, ಬುಡಕಟ್ಟು ಜನರು, ಉದ್ಯೋಗವಿಲ್ಲದೆ ಸಂಕಷ್ಟದಲ್ಲಿ ಸಿಲುಕಿದ್ದು ಇವರುಗಳಿಗೆ ಒಬ್ಬ ವ್ಯಕ್ತಿಗೆ ತಿಂಗಳಿಗೆ ತಲಾ 20 ಕೆ.ಜಿ. ಅಕ್ಕಿ ಹಾಗೂ ಇತರ ನಿತ್ಯೋಪಯೋಗಿ ವಸ್ತುಗಳನ್ನು ನೀಡಬೇಕು ಎಂದರು.

ಸಿದ್ದಾಪುರ, ಕೊಂಡಂಗೇರಿ ಮೊದಲಾದೆಡೆ ಹೊಳೆ ದಂಡೆಯಲ್ಲಿ ನಿರ್ಮಿಸಿರುವ ಮನೆಗಳಿಗೆ ಪ್ರವಾಹದಿಂದ ಹಾನಿಯುಂಟಾಗಿದ್ದು, ಅಂತಹ ಕುಟುಂಬಗಳನ್ನು ಗುರುತಿಸಿ ಸೂಕ್ತ ಸ್ಥಳಗಳಲ್ಲಿ ಅಗತ್ಯ ಸೌಕರ್ಯಗಳಿರುವ ಮನೆಗಳಿಗೆ ಸ್ಥಳಾಂತರಿಸಬೇಕು ಮತ್ತು ಹೊಳೆ ದಂಡೆಯಲ್ಲಿ ಮನೆ ನಿರ್ಮಿಸುವುದನ್ನು ನಿಷೇಧಿಸಬೇಕು ಎಂದು ಡಾ.ದುರ್ಗಾಪ್ರಸಾದ್ ಒತ್ತಾಯಿಸಿದರು.

ಸಿದ್ದಾಪುರದಂತಹ ಸ್ಥಳಗಳಲ್ಲಿ ಹೊಳೆ ಬದಿಗಳಲ್ಲಿ ವಾಸಿಸುತ್ತಿರುವವರಿಗೆ ಅದೇ ಪಂಚಾಯತ್ ವ್ಯಾಪ್ತಿಯಲ್ಲಿ ಸೂಕ್ತ ಸ್ಥಳ ನೀಡಬೇಕು. ಮನೆಗಳನ್ನು ಕಟ್ಟಿಕೊಡಬೇಕು ಅಥವಾ ಕಟ್ಟಿಕೊಳ್ಳಲು ಬೇಕಾದ ಎಲ್ಲಾ ಸಹಾಯ ಒದಗಿಸಬೇಕೆಂದರು.

ಕೊಡಗಿನ ಆರ್ಥಿಕ ಪರಿಸ್ಥಿತಿ ಏರು ಪೇರಾಗಿದ್ದು, ಸಣ್ಣ ಮಧ್ಯಮ ವ್ಯಾಪಾರಿಗಳು ವ್ಯಾಪಾರವಿಲ್ಲದೆ ತೊಂದರೆಗೆ ಸಿಲುಕಿದ್ದಾರೆ. ಅನೇಕರು ವ್ಯಾಪಾರಕ್ಕಾಗಿ ಸಾಲ ತೆಗೆದುಕೊಂಡವರಿದ್ದು, ಅಂತಹವರಿಗೆ ವ್ಯಾಪಾರ ಮುಂದುವರಿಸಲು ಮತ್ತು ಜೀವನ ನಿರ್ವಹಣೆಗೆಂದು ಬಡ್ಡಿ ರಹಿತ ಸಾಲ ಒದಗಿಸಬೇಕು ಎಂದು ದುರ್ಗಾಪ್ರಸಾದ್ ಆಗ್ರಹಿಸಿದರು.

ಮಳೆ ಹಾನಿಯಿಂದ ತಮ್ಮ ವಾಸ ಸ್ಥಳಗಳಲ್ಲಿ ವಾಸಿಸಲು ಸಾಧ್ಯವಾಗದೆ ಪರಿಹಾರ ಕೇಂದ್ರಗಳಲ್ಲಿ ಇರುವವರನ್ನು ತಾತ್ಕಾಲಿಕ ಶೆಡ್‍ಗಳಿಗೆ ವರ್ಗಾಯಿಸುವುದು ಸರಿಯಲ್ಲ. ಮುಂದೆ ಅವರು ಈ ಶೆಡ್‍ಗಳಲ್ಲೆ ಅತಂತ್ರ ಜೀವನ ನಡೆಸುವ ಪರಿಸ್ಥಿತಿ ಉಂಟಾಗಲಿದ್ದು, ಈ ಹಿನ್ನೆಲೆಯಲ್ಲಿ ಅವರೆಲ್ಲರಿಗು ಶಾಶ್ವತ ನೆಲೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಸಿಪಿಐಎಂ ಜಿಲ್ಲಾ ಸಂಘಟನಾ ಸಮಿತಿ ಸದಸ್ಯರಾದ ಎನ್.ಡಿ. ಕುಟ್ಟಪ್ಪನ್, ಎಂ.ಕೆ. ಜೋಸ್ ಹಾಗೂ ಹೆಚ್.ಆರ್. ಶಿವಪ್ಪ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X