Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನೇತ್ರದಾನದ ಬಗ್ಗೆ ತಪ್ಪು ಕಲ್ಪನೆ...

ನೇತ್ರದಾನದ ಬಗ್ಗೆ ತಪ್ಪು ಕಲ್ಪನೆ ಹೋಗಲಾಡಿಸಬೇಕಾಗಿದೆ: ಹರೀಶ್ ಬಾಳಿಗ

ನೇತ್ರಾದಾನ ಜಾಗೃತಿ ಓಟ

ವಾರ್ತಾಭಾರತಿವಾರ್ತಾಭಾರತಿ2 Sept 2018 1:29 PM IST
share
ನೇತ್ರದಾನದ ಬಗ್ಗೆ ತಪ್ಪು ಕಲ್ಪನೆ ಹೋಗಲಾಡಿಸಬೇಕಾಗಿದೆ: ಹರೀಶ್ ಬಾಳಿಗ

ಮಂಗಳೂರು, ಸೆ.2: ನೇತ್ರ ದಾನದ ಬಗ್ಗೆ ಸಮಾಜದ ಬಹುತೇಕ ಜನರಲ್ಲಿ ತಪ್ಪು ಕಲ್ಪನೆ ಇದೆ ಅದನ್ನು ಹೋಗಲಾಡಿಸಬೇಕಾಗಿದೆ ಎಂದು ಎಂಆರ್‌ಪಿಎಲ್ ಸಿಎಸ್‌ಆರ್ ವಿಭಾಗದ ಮುಖ್ಯಸ್ಥ ಹರೀಶ್ ಬಾಳಿಗ ತಿಳಿಸಿದ್ದಾರೆ.

ಅವರು ಇಂದು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ನೇತ್ರ ಚಿಕಿತ್ಸಾ ತಜ್ಞರನ್ನೊಳಗೊಂಡ ದ.ಕ ಜಿಲ್ಲಾ ನೇತ್ರ ತಜ್ಞರ ಸೊಸೈಟಿಯ ವತಿಯಿಂದ ನೇತ್ರದಾನ ಜಾಗೃತಿ ಪಾಕ್ಷಿಕ ಅಂಗವಾಗಿ ಇಂದು ನಗರದಲ್ಲಿ ಐದು ಕಿಲೋಮೀಟರ್ ಓಟ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಓಟದಲ್ಲಿ ವಿಜೇತರಿಗೆ ಪ್ರಶಸ್ತಿ ವಿತರಿಸಿ, ಮಾತನಾಡುತ್ತಿದ್ದರು.

ಕಣ್ಣನ್ನು ನಾವು ದಾನ ಮಾಡುವ ಅಗತ್ಯದ ಬಗ್ಗೆ ಸರಿಯಾದ ಮಾಹಿತಿ ನೀಡಿ ಅದರ ಮಹತ್ವನ್ನು ಜನರಿಗೆ ತಿಳಿಸುವ ಕೆಲಸ ಆಗಬೇಕಾಗಿದೆ. ಈ ನಿಟ್ಟಿ ನೇತ್ರ ತಜ್ಞರ ಸಂಘದ ಮೂಲಕ ಸಂಚಾರಿ ತಂಡ ಡಿಜಿಟಲ್ ಪರದೆಯ ಮೂಲಕ ಜನರಿಗೆ ನೆರವು ನೀಡುತ್ತಿರುವುದು ಮಹತ್ವದ ಕಾರ್ಯಕ್ರಮವಾಗಿದೆ ಎಂದು ಹರೀಸ್ ಬಾಳಿಗ ತಿಳಿಸಿದರು.

ನೇತ್ರಾದಾನದ ಬಗ್ಗೆ ಅರಿವು ಮುಡಿಸುವ ನಿಟ್ಟಿನಲ್ಲಿ ವಿಶೇಷ ಓಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ಸಂಚಾರಿ ವಾಹನದ ಮೂಲಕ ವಿವಿಧ ಗ್ರಾಮಗಳಿಗೆ ತೆರಳಿ ನೇತ್ರದಾನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ನೇತ್ರತಜ್ಞರ ಸಂಘದ ಅಧ್ಯಕ್ಷ ಡಾ.ಸುಧೀರ್ ಹೆಗ್ಡೆ ತಿಳಿಸಿದರು.

ಈ ಕಾರ್ಯಕ್ರಮದ ಪ್ರಮುಖ ಪ್ರಾಯೋಜಕರಾಗಿ ಎಂಆರ್‌ಪಿಎಲ್, ರೋಟರಿ ಇಂಟರ್ ನ್ಯಾಶನಲ್, ರೌಂಡ್ ಟೇಬಲ್, ಸಮ್‌ವಿತ್ತಿ ಕ್ಯಾಪಿಟಲ್, ಭರತ್ ಮೋಟಾರ್ಸ್‌, ಆಭರಣ ಜ್ಯುವೆಲ್ಲರ್ಸ್‌, ಮರಿಯಾನ ಬಿಲ್ಡರ್ಸ್‌ ಮತ್ತು ಜ್ಯೂಯಿಸ್ ಜಿಮ್ ಹಾಗೂ ಜಿಲ್ಲೆಯ ಎಲ್ಲಾ ಮೆಡಿಕಲ್ ಕಾಲೇಜುಗಳ ಸಹಯೋಗದೊಂದಿಗೆ ನೇತ್ರಾದಾನ ಆಚರಣೆ ನಡೆಯಲಿದೆ.

ಜಾಗೃತಿ ಓಟ ಮತ್ತು ಪ್ರಶಸ್ತಿ ವಿತರಣೆ

ನಗರದ ಮನಪಾ ಕಚೇರಿಯ ಬಳಿಯಿಂದ ನೆಹರು ಮೈದಾನದ ವರೆಗೆ 5 ಕಿಮೀ ಜಾಗೃತಿ ಓಟ ಕಾರ್ಯಕ್ರಮ ನೇತ್ರಾದಾನ ಜಾಗೃತಿ ಓಟದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದವರನ್ನು ಅಭಿನಂದಿಸಿದರು.

ಪುರುಷರ ವಿಭಾಗದಲ್ಲಿ ಸೌರಭ್ ಪಾಟೀಲ್ ಪ್ರಥಮ, ಗೌರವ್ ರಾಮ್‌ವತಿ ದ್ವಿತೀಯ ಹಾಗೂ ಚೇತನ್ ಆರ್ ತೃತೀಯ ಬಹುಮಾನ ಪಡೆದರು.

ಮಹಿಳಾ ವಿಭಾಗದಲ್ಲಿ ಡಾ. ಸಹನಾ ಆಚಾರ್ಯ ಪ್ರಥಮ, ಡಾ. ಅನುಪಮ ರಾವ್ ದ್ವಿತೀಯ, ಡಾ. ಪಾರೂಲ್ ಪಾಟೇಲ್ ತೃತೀಯ ಬಹುಮಾನ ಪಡೆದರು.

ದಕ್ಷಿಣ ಕನ್ನಡ ನೇತ್ರ ತಜ್ಞರ ಸಂಘದ ಅಧ್ಯಕ್ಷ ಡಾ.ಸುಧೀರ್ ಹೆಗ್ಡೆ, ಎಂಆರ್‌ಪಿಎಲ್ ಸಿಎಸ್‌ಆರ್ ವಿಭಾಗದ ಮುಖ್ಯಸ್ಥ ಹರೀಶ್ ಬಾಳಿಗ, ಕರ್ನಾಟಕ ನೇತ್ರತಜ್ಞರ ಸೊಸೈಟಿಯ ಅಧ್ಯಕ್ಷ ಡಾ.ಸಾಯಿ ಗಿರಿಧರ್ ಮೊದಲಾದವರು ಭಾಗವಹಿಸಿದ್ದರು. ಡಾ.ಅಜಯ್ ಕುಡ್ವ ಸ್ವಾಗತಿಸಿ, ಡಾ. ವಿಕ್ರಂಪೈ ವಂದಿಸಿದರು. ಆಕಾಂಕ್ಷ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X