Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾಧ್ಯಮ, ಬಿಜೆಪಿ-ಕಾರ್ಪೊರೇಟ್ ಕಂಪೆನಿಗಳ...

ಮಾಧ್ಯಮ, ಬಿಜೆಪಿ-ಕಾರ್ಪೊರೇಟ್ ಕಂಪೆನಿಗಳ ನಡುವೆ ನೇರ ಸಂಬಂಧ: ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಪಿ.ಸಾಯಿನಾಥ್

ವಾರ್ತಾಭಾರತಿವಾರ್ತಾಭಾರತಿ2 Sept 2018 8:21 PM IST
share
ಮಾಧ್ಯಮ, ಬಿಜೆಪಿ-ಕಾರ್ಪೊರೇಟ್ ಕಂಪೆನಿಗಳ ನಡುವೆ ನೇರ ಸಂಬಂಧ: ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಪಿ.ಸಾಯಿನಾಥ್

ಬೆಂಗಳೂರು, ಸೆ.2: ಮಾಧ್ಯಮ, ಬಿಜೆಪಿ ಹಾಗೂ ಕಾರ್ಪೊರೇಟ್ ಕಂಪೆನಿಗಳ ಮಧ್ಯೆ ನೇರವಾದ ಸಂಬಂಧವಿದೆ. ಹೀಗಾಗಿಯೆ ಮಾಧ್ಯಮಗಳಲ್ಲಿ ಬಿತ್ತರಗೊಳ್ಳುವ ಶೇ.90ರಷ್ಟು ಸುದ್ಧಿಗಳು ಬಿಜೆಪಿಗೆ ಸಂಬಂಧಿಸಿದಾಗಿರುತ್ತದೆ ಎಂದು ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಪಿ. ಸಾಯಿನಾಥ್ ಆರೋಪಿಸಿದ್ದಾರೆ.

ರವಿವಾರ ಡಾ.ಯು.ಆರ್.ಅನಂತಮೂರ್ತಿ ನೆನಪಿಗಾಗಿ ನಗರದ ಸುಚಿತ್ರ ಆಯೋಜಿಸಿದ್ದ ಮಾಧ್ಯಮ ಮತ್ತು ಗ್ರಾಮೀಣ ಭಾರತ ಕುರಿತು ಆಯೋಜಿಸಿದ್ದ ವಿಶೇಷ ಉಪನ್ಯಾಸದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬಿಜೆಪಿ ಕಾರ್ಪೊರೇಟ್ ಕಂಪೆನಿಗಳಿಗೆ ಪೂರಕವಾಗಿ ಕಾನೂನುಗಳನ್ನು ಜಾರಿ ಮಾಡುತ್ತವೆ. ಗಣಿಗಾರಿಕೆ, ಬ್ಯಾಂಕಿಂಗ್ ಹಾಗೂ ಶಿಕ್ಷಣದ ಖಾಸಗೀಕರಣ ಮಾಡುವ ಮೂಲಕ ಕಂಪೆನಿಗಳಿಗೆ ಕೋಟ್ಯಂತರ ರೂ.ಲಾಭ ಮಾಡಿಕೊಟ್ಟಿದೆ. ಇದಕ್ಕೆ ಕೃತಜ್ಞತೆಯಾಗಿ ಇದೇ ಕಂಪೆನಿಗಳ ಒಡೆತನದಲ್ಲಿರುವ ಮಾಧ್ಯಮಗಳು ಬಿಜೆಪಿ ಪರವಾಗಿ ಸುದ್ದಿಗಳನ್ನು ಬಿತ್ತರಿಸುತ್ತವೆ ಎಂದು ಅವರು ಹೇಳಿದರು.

ದೇಶದಲ್ಲಿರುವ ಬಹುತೇಕ ಮಾಧ್ಯಮಗಳು ಬೃಹತ್ ಕಂಪೆನಿಗಳ ಒಡೆತನದಲ್ಲಿವೆ. ಹೀಗಾಗಿ ತಮ್ಮ ಹಿತಾಸಕ್ತಿಗೆ ಪೂರಕವಾದಂತಹ ಸುದ್ದಿಗಳನ್ನೆ ದೇಶದ ಸರ್ವಜನರ ಸುದ್ಧಿ ಎನ್ನುವ ಮಾದರಿಯಲ್ಲಿ ಪ್ರಸಾರ ಮಾಡುತ್ತಿವೆ. ಹೀಗಾಗಿ ದೇಶದಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆ, ಕೇರಳದಲ್ಲಿ ಪ್ರವಾಹದಿಂದಾಗಿ ನೂರಾರು ಜನ ಸಾವನ್ನಪ್ಪಿ, ಲಕ್ಷಾಂತರ ಮಂದಿ ನಿರಾಶ್ರಿತಗೊಂಡಿರುವುದು ಮಾಧ್ಯಮಗಳಿಗೆ ಮುಖ್ಯ ಸುದ್ದಿಯೆ ಆಗುವುದಿಲ್ಲವೆಂದು ಅವರು ಹೇಳಿದರು.

1920ರ ಸುಮಾರಿನಲ್ಲಿ ದೇಶದಲ್ಲಿ ಪ್ಲೇಗ್ ರೋಗ ಹರಡಿದ ಸಂದರ್ಭದಲ್ಲಿ ಮಾಧ್ಯಮಗಳು, ಜನರಿಗೆ ಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದವು. ಆದರೆ, ಇಂದು ಮಾಧ್ಯಮಗಳು ಕೇವಲ ಉದ್ಯಮ ಪತಿಗಳ, ಧಾರ್ಮಿಕವಾದಿಗಳ ಹಾಗೂ ತಮ್ಮ ಹಿತಾಸಕ್ತಿಗೆ ಪೂರಕವಾದ ರಾಜಕೀಯ ಪಕ್ಷಗಳ ಸುದ್ದಿಗಳಿಗೆ ಮಾತ್ರ ಸೀಮಿತಗೊಂಡಿವೆ ಎಂದು ಅವರು ವಿಷಾದಿಸಿದರು.

ದೇಶದ ಸ್ವಾತಂತ್ರಕ್ಕಾಗಿ ಹಾಗೂ ಸಮಾಜ ಸುಧಾರಣೆಗಾಗಿ ಹೋರಾಟ ಮಾಡಿದ ರಾಜಾರಾಮ್ ಮೋಹನ್‌ರಾಯ್, ಮಹಾತ್ಮ ಗಾಂಧೀಜಿ, ಡಾ.ಬಿ.ಆರ್.ಅಂಬೇಡ್ಕರ್, ಭಗತ್‌ ಸಿಂಗ್ ಸೇರಿದಂತೆ ಹಲವು ನಾಯಕರು ಪತ್ರಕರ್ತರಾಗಿದ್ದರು. ಸಮಾಜ ಬದಲಾವಣೆ ಜತೆಗೆ ಪತ್ರಕರ್ತರಾಗಿ ಜನರ ತಿಳುವಳಿಕೆಯನ್ನು ಬೆಳೆಸಿದ್ದರು. ಈ ಹಿನ್ನೆಲೆಯಲ್ಲಿ ನೋಡುವುದಾದರೆ, ಸಮಾಜದ ಬದಲಾವಣೆಯ ಜತೆ-ಜತೆಯಲ್ಲಿ ಸಾಗುವುದೆ ನಿಜವಾದ ಪತ್ರಕರ್ತನ ಲಕ್ಷಣವೆಂದು ಅವರು ಹೇಳಿದರು.

‘1990ರ ಸಾಲಿನಲ್ಲಿ ದೇಶದಲ್ಲಿ ಒಬ್ಬ ಬಿಲಿಯನೇರ್ ಇರಲಿಲ್ಲ. ಆದರೆ, 2000 ಹಾಗೂ 2018ರ ಸಾಲಿನಲ್ಲಿ ನೂರಾರು ಬಿಲಿಯನೇರ್ ಹುಟ್ಟಿದ್ದಾರೆ. ದೇಶದಲ್ಲಿ ಕೋಟ್ಯಾಂತರ ರೈತರು-ಕಾರ್ಮಿಕರು ಹಗಲಿರುಳು ದುಡಿದರೂ ಜೀವನ ನಡೆಸಲು ಸಾಧ್ಯವಾಗದೆ ಆತ್ಮಹತ್ಯೆಗೆ ಶರಣಾಗುತ್ತಿರುವ ಸಂದರ್ಭದಲ್ಲಿ ಉದ್ಯಮಪತಿಗಳು ವರ್ಷದಿಂದ ವರ್ಷಕ್ಕೆ ಬಿಲಿಯನೇರ್‌ಗಳಾಗುತ್ತಿರುವುದರ ಹಿಂದಿನ ಮರ್ಮವೇನು’
-ಪಿ.ಸಾಯಿನಾಥ್, ಹಿರಿಯ ಪತ್ರಕರ್ತ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X