Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 10 ವರ್ಷದಲ್ಲಿ ಅರ್ಧ ಮುಳುಗಲಿದೆ ಈ ದೇಶ:...

10 ವರ್ಷದಲ್ಲಿ ಅರ್ಧ ಮುಳುಗಲಿದೆ ಈ ದೇಶ: ಪರಿಸರ ವಿಜ್ಞಾನಿಗಳ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ2 Sept 2018 9:48 PM IST
share
10 ವರ್ಷದಲ್ಲಿ ಅರ್ಧ ಮುಳುಗಲಿದೆ ಈ ದೇಶ: ಪರಿಸರ ವಿಜ್ಞಾನಿಗಳ ಎಚ್ಚರಿಕೆ

ಬ್ಯಾಂಕಾಕ್, ಸೆ. 2: ಹವಾಮಾನ ಬದಲಾವಣೆ ಮಾತುಕತೆಗಳನ್ನು ಏರ್ಪಡಿಸಲು ಬ್ಯಾಂಕಾಕ್ ಸಿದ್ಧಗೊಳ್ಳುತ್ತಿರುವಂತೆಯೇ, ಒಂದು ಕೋಟಿಗೂ ಅಧಿಕ ಜನಸಂಖ್ಯೆಯ ನಗರ ಬೆಚ್ಚಿಬೀಳುವಂತಹ ಸುದ್ದಿಯೊಂದು ಹೊರಬಿದ್ದಿದೆ.

ಇನ್ನೊಂದು ದಶಕದಲ್ಲಿ ಥಾಯ್ಲೆಂಡ್ ರಾಜಧಾನಿಯು ಆಂಶಿಕವಾಗಿ ನೀರಿನಲ್ಲಿ ಮುಳುಗಡೆಯಾಗಲಿದೆ ಎಂಬ ಎಚ್ಚರಿಕೆಯನ್ನು ಹೊರಡಿಸಲಾಗಿದೆ. ವಿಶ್ವಸಂಸ್ಥೆಯ ಮುಂದಿನ ಹವಾಮಾನ ಸಮ್ಮೇಳನದ ಸಿದ್ಧತಾ ಸಭೆಯು ಬ್ಯಾಂಕಾಕ್‌ನಲ್ಲಿ ಮಂಗಳವಾರ ಆರಂಭಗೊಳ್ಳಲಿದೆ. ಹವಾಮಾನ ಸಮ್ಮೇಳನವು 2018ರ ಕೊನೆಯಲ್ಲಿ ಪೋಲ್ಯಾಂಡ್‌ನಲ್ಲಿ ನಡೆಯಲಿದೆ.

ಇಂಗಾಲದ ಡೈ ಆಕ್ಸೈಡ್ ಹೊರಸೂಸುವಿಕೆಯನ್ನು ಕಡಿಮೆಗೊಳಿಸುವ ಹಾಗೂ ಹವಾಮಾನ ಬದಲಾವಣೆಯ ಪರಿಣಾಮಗಳಿಗೆ ಸುಲಭವಾಗಿ ಬಲಿಯಾಗುವ ದೇಶಗಳಿಗೆ ನೆರವು ನೀಡುವುದಕ್ಕೆ ಸಂಬಂಧಿಸಿದ ನಿಯಮಗಳನ್ನು ಸಮ್ಮೇಳನದಲ್ಲಿ ರೂಪಿಸಲಾಗುವುದು.

ಜಾಗತಿಕ ತಾಪಮಾನವು ಏರುತ್ತಿರುವಂತೆಯೇ ಹೆಚ್ಚೆಚ್ಚು ಶಕ್ತಿಶಾಲಿ ಚಂಡಮಾರುತಗಳು, ಯದ್ವಾತದ್ವ ಮಳೆ, ತೀವ್ರ ಬರಗಾಲ ಮತ್ತು ಭಾರೀ ಪ್ರವಾಹಗಳು ಮುಂತಾದ ಅಸಹಜ ಹವಾಮಾನ ಮಾದರಿಗಳು ಹೆಚ್ಚೆಚ್ಚು ಸಂಭವಿಸುತ್ತವೆ ಎಂದು ನಿರೀಕ್ಷಿಸಲಾಗಿದೆ. ಇದು 2015ರ ಪ್ಯಾರಿಸ್ ಹವಾಮಾನ ಒಪ್ಪಂದವನ್ನು ಜಾರಿಗೆ ತರವು ಜವಾಬ್ದಾರಿಯನ್ನು ಹೊತ್ತ ದೇಶಗಳ ಮೇಲಿನ ಒತ್ತಡವನ್ನು ಹೆಚ್ಚಿಸುತ್ತವೆ.

ಜೌಗುಪ್ರದೇಶದಲ್ಲಿ ನಿರ್ಮಾಣಗೊಂಡ ಬ್ಯಾಂಕಾಕ್

ಬ್ಯಾಂಕಾಕನ್ನು ಸಮುದ್ರ ಮಟ್ಟದಿಂದ 1.5 ಮೀಟರ್ ಎತ್ತರದಲ್ಲಿ ಜೌಗು ಪ್ರದೇಶದಲ್ಲಿ ನಿರ್ಮಿಸಲಾಗಿತ್ತು.

ಜಾಗತಿಕ ತಾಪಮಾನದ ಪ್ರಕೋಪಕ್ಕೆ ಮೊದಲು ಸಿಲುಕುವ ಜಗತ್ತಿನ ನಗರಗಳ ಪಟ್ಟಿಯಲ್ಲಿ ಬ್ಯಾಂಕಾಕ್ ಮೊದಲ ಸ್ಥಾನದಲ್ಲಿದೆ. ಏಶ್ಯದ ಇತರ ನಗರಗಳಾದ ಇಂಡೋನೇಶ್ಯ ರಾಜಧಾನಿ ಜಕಾರ್ತ ಮತ್ತು ಫಿಲಿಪ್ಪೀನ್ಸ್ ರಾಜಧಾನಿ ಮನಿಲಾ ಕೂಡ ಈ ಪಟ್ಟಿಯಲ್ಲಿದೆ.

40 ಶೇ. ಮುಳುಗಡೆ

ಭಾರೀ ಮಳೆ ಮತ್ತು ಹವಾಮಾನ ವ್ಯವಸ್ಥೆಯಲ್ಲಿ ಆಗುವ ಬದಲಾವಣೆಯ ಪರಿಣಾಮವಾಗಿ 2030ರಲ್ಲೇ ಬ್ಯಾಂಕಾಕ್‌ನ ಸುಮಾರು 40 ಶೇಕಡ ಮುಳುಗಡೆಯಾಗಲಿದೆ ಎಂದು ವಿಶ್ವಬ್ಯಾಂಕ್‌ನ ವರದಿಯೊಂದು ಹೇಳಿದೆ.

‘‘ಪ್ರಸಕ್ತ ನಗರವು ವರ್ಷಕ್ಕೆ 1ರಿಂದ 2 ಸೆಂಟಿ ಮೀಟರ್‌ಗಳಷ್ಟು ಮುಳುಗುತ್ತಿದೆ. ಶೀಘ್ರ ಭವಿಷ್ಯದಲ್ಲೇ ಭೀಕರ ಪ್ರವಾಹ ಸಂಭವಿಸುವ ಅಪಾಯವಿದೆ’’ ಎಂದು ಪರಿಸರ ಸಂಘಟನೆ ‘ಗ್ರೀನ್‌ಪೀಸ್’ನ ತಾರಾ ಬೋಕಮ್‌ಸ್ರಿ ಹೇಳುತ್ತಾರೆ.

ಸಮೀಪದ ಥಾಯ್ಲೆಂಡ್ ಕೊಲ್ಲಿಯಲ್ಲಿನ ಸಮುದ್ರಗಳ ಮಟ್ಟ ವರ್ಷಕ್ಕೆ 4 ಮಿಲಿಮೀಟರ್‌ನಷ್ಟು ಏರುತ್ತಿದೆ ಹಾಗೂ ಇದು ಜಾಗತಿಕ ಸರಾಸರಿಗಿಂತ ಅಧಿಕವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X