Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತಕ್ಕೆ ಸರಣಿ ಸೋಲು

ಭಾರತಕ್ಕೆ ಸರಣಿ ಸೋಲು

ನಾಲ್ಕನೇ ಟೆಸ್ಟ್ ನಲ್ಲಿ ಇಂಗ್ಲೆಂಡ್ ಗೆ 60 ರನ್ ಗಳ ಜಯ

ವಾರ್ತಾಭಾರತಿವಾರ್ತಾಭಾರತಿ2 Sept 2018 10:10 PM IST
share
ಭಾರತಕ್ಕೆ ಸರಣಿ ಸೋಲು

    ಸೌಥ್‌ಹ್ಯಾಂಪ್ಟನ್, ಸೆ.2: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಕ್ರಿಕೆಟ್ ಟೆಸ್ಟ್‌ನಲ್ಲಿ ಮೊಯಿನ್ ಅಲಿ ದಾಳಿಗೆ ಸಿಲುಕಿದ ಭಾರತ 60 ರನ್‌ಗಳ ಅಂತರದಲ್ಲಿ  ಸೋಲು ಅನುಭವಿಸಿದೆ.
ಇದರೊಂದಿಗೆ ಭಾರತ ಐದು ಟೆಸ್ಟ್‌ಗಳ ಸರಣಿಯನ್ನು 1-3 ಅಂತರದಲ್ಲಿ ಕಳೆದುಕೊಂಡಿದೆ.
ಎರಡನೇ ಇನಿಂಗ್ಸ್‌ನಲ್ಲಿ 245 ರನ್‌ಗಳ ಗೆಲುವಿನ  ಸವಾಲನ್ನು ಪಡೆದ ಭಾರತ 69.4 ಓವರ್‌ಗಳಲ್ಲಿ 184 ರನ್‌ಗಳಿಗೆ ಆಲೌಟಾಗಿದೆ.
   
 ಭಾರತ 22 ರನ್ ಸೇರಿಸುವಷ್ಟರಲ್ಲಿ 3ವಿಕೆಟ್‌ಗಳನ್ನು ಕಳೆದುಕೊಂಡು ಒತ್ತಡಕ್ಕೆ ಸಿಲುಕಿತ್ತು. ಬಳಿಕ ನಾಯಕ ವಿರಾಟ್ ಕೊಹ್ಲಿ ಮತ್ತು ಅಜಿಂಕ್ಯ ರಹಾನೆ 4ನೇ ವಿಕೆಟ್‌ಗೆ 101 ರನ್‌ಗಳ ಜೊತೆಯಾಟ ನೀಡಿ ತಂಡವನ್ನು ಆಧರಿಸುವ ಪ್ರಯತ್ನ ನಡೆಸಿದರು. ಕೊಹ್ಲಿ (58) ಅರ್ಧಶತಕ ದಾಖಲಿಸಿ ನಿರ್ಗಮಿಸಿದರು. ಕೊಹ್ಲಿ ನಿರ್ಗಮನದ ಬಳಿಕ ಹಾರ್ದಿಕ್ ಪಾಂಡ್ಯ (0) ಖಾತೆ ತೆರೆಯದೆ ನಿರ್ಗಮಿಸಿದರು. ರಿಷಭ್ ಪಂತ್(18) ಎರಡಂಕೆಯ ಕೊಡುಗೆ ನೀಡಿದರು.ಅಜಿಂಕ್ಯ ರಹಾನೆ (51) ಔಟಾದ ಬಳಿಕ ಭಾರತದ ಗೆಲುವಿನ ಆಸೆ ಕ್ಷೀಣಿಸಿತು.
 ಆರಂಭಿಕ ದಾಂಡಿಗ ಲೋಕೇಶ್ ರಾಹುಲ್(0) ಮತ್ತು ಚೇತೇಶ್ವರ ಪೂಜಾರ(5) ಮತ್ತು ಶಿಖರ್ ಧವನ್ (17) , ಇಶಾಂತ್ ಶರ್ಮಾ (0) ಔಟಾದರು.
ಟೆಸ್ಟ್‌ನ ನಾಲ್ಕನೇ ದಿನವಾಗಿರುವ ರವಿವಾರ ಇಂಗ್ಲೆಂಡ್ ಎರಡನೇ ಇನಿಂಗ್ಸ್‌ನಲ್ಲಿ 96.1 ಓವರ್‌ಗಳಲ್ಲಿ 271 ರನ್‌ಗಳಿಗೆ ಆಲೌಟಾಗಿದೆ.
ಮೂರನೇ ದಿನದಾಟದಂತ್ಯಕ್ಕೆ 91.5 ಓವರ್‌ಗಳಲ್ಲಿ 8 ವಿಕೆಟ್ ನಷ್ಟದಲ್ಲಿ 260 ರನ್ ಗಳಿಸಿತ್ತು. ಈ ಮೊತ್ತಕ್ಕೆ 11 ರನ್ ಸೇರಿಸುವಷ್ಟರಲ್ಲಿ ಆಲೌಟಾಗಿದೆ.
 ಸ್ಟುವರ್ಟ್ ಬ್ರಾಡ್(0) ಖಾತೆ ತೆರೆಯದೆ ಶಮಿಗೆ ವಿಕೆಟ್ ಒಪ್ಪಿಸಿದರು. ಸ್ಯಾಮ್ ಕರನ್ 46 ರನ್ ಗಳಿಸಿ ರನೌಟಾದರು. ಕರನ್ ಶನಿವಾರ ದಿನದಾಟದಂತ್ಯಕ್ಕೆ 37 ರನ್ ಗಳಿಸಿ ಔಟಾಗದೆ ಕ್ರೀಸ್‌ನಲ್ಲಿದ್ದರು. ಜೇಮ್ಸ್ ಆ್ಯಂಡರ್ಸನ್ ಔಟಾಗದೆ 1 ರನ್ ಗಳಿಸಿದ್ದಾರೆ.
ಭಾರತದ ಪರ ಮುಹಮ್ಮದ್ ಶಮಿ 57ಕ್ಕೆ 4, ಇಶಾಂತ್ ಶರ್ಮಾ 36ಕ್ಕೆ 2, ರವಿಚಂದ್ರನ್ ಅಶ್ವಿನ್ ಮತ್ತು ಜಸ್‌ಪ್ರೀತ್ ಬುಮ್ರಾ ತಲಾ 1 ವಿಕೆಟ್ ಪಡೆದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X