Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದೇಶಕ್ಕೆ ಮೈಲಾರ ಮಹದೇವರ ಕೊಡುಗೆ ಅಪಾರ:...

ದೇಶಕ್ಕೆ ಮೈಲಾರ ಮಹದೇವರ ಕೊಡುಗೆ ಅಪಾರ: ಕೇಂದ್ರ ಸಚಿವ ಮನೋಜ್ ಸಿನ್ಹಾ

ಹುತಾತ್ಮ ಮೈಲಾರ ಮಹದೇವ ಅಂಚೆ ಚೀಟಿ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ3 Sept 2018 7:08 PM IST
share
ದೇಶಕ್ಕೆ ಮೈಲಾರ ಮಹದೇವರ ಕೊಡುಗೆ ಅಪಾರ: ಕೇಂದ್ರ ಸಚಿವ ಮನೋಜ್ ಸಿನ್ಹಾ

ಬೆಂಗಳೂರು, ಸೆ.3: ಹುತಾತ್ಮ ಮೈಲಾರ ಮಹದೇವರು ಈ ದೇಶಕ್ಕೆ ಅಪಾರ ಕೊಡುಗೆ ನೀಡಿದ್ದು, ಅವರ ತ್ಯಾಗ, ಬಲಿದಾನ ಇಂದಿಗೂ ಮಾರ್ಗದರ್ಶನವಾಗಿದೆ ಎಂದು ಕೇಂದ್ರದ ಸಂಪರ್ಕ ಸಂವಹನ ಸಚಿವ ಮನೋಜ್ ಸಿನ್ಹಾ ತಿಳಿಸಿದರು.

ಸೋಮವಾರ ನಗರದ ಗಾಂಧಿ ಭವನದಲ್ಲಿ ಕೇಂದ್ರ ಸಂಪರ್ಕ ಸಂವಹನ ಇಲಾಖೆ, ಗಾಂಧಿ ಸ್ಮಾರಕ ನಿಧಿ ಸಹಯೋಗದೊಂದಿಗೆ ಏರ್ಪಡಿಸಿದ್ದ, ಹುತಾತ್ಮ ಮೈಲಾರ ಮಹದೇವ ಅವರ ಸ್ಮಾರಣಾರ್ಥ, ಅಂಚೆ ಚೀಟಿ ಲೋಕಾರ್ಪಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ದೇಶದ ಸ್ವಾತಂತ್ರ್ಯಕ್ಕಾಗಿ ಸಂಸಾರ ತೊರೆದು ಬ್ರಿಟಿಷರ ಗುಂಡೇಟಿಗೆ ಎದೆಯೊಡ್ಡಿ ಅದೆಷ್ಟೊ ಮಂದಿ ಹುತಾತ್ಮರಾಗಿದ್ದಾರೆ. ಆದರೆ, ಗಾಂಧೀಜಿ ಹೊರತು ಪಡಿಸಿದರೆ ಮಹದೇವ ಅವರ ಕುಟುಂಬ ಮಾತ್ರ ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿತ್ತು ಎಂದು ಸ್ಮರಿಸಿದರು.

ಮಹದೇವ ಅವರು ಗಾಂಧೀಜಿ ನೇತೃತ್ವದ ಉಪ್ಪಿನ ಸತ್ಯಾಗ್ರಹದಲ್ಲಿ ಕನ್ನಡ ನಾಡನ್ನು ಪ್ರತಿನಿಧಿಸಿದ್ದರು. ಅಂಥ ವ್ಯಕ್ತಿಯನ್ನು ಹಾಗೂ ಅವರ ವಿಚಾರಧಾರೆಗಳನ್ನು ನಾವುಗಳು ಎಂದಿಗೂ ಮರೆಯಬಾರದು. ಇನ್ನು ಅನೇಕ ಮಹನೀಯರ ತ್ಯಾಗ, ಬಲಿದಾನದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ ಎಂದರು.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮಾತನಾಡಿ, ಮೈಲಾರ ಅವರು ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭೂಗತರಾಗಿ ಏಳು ತಿಂಗಳಿಗೂ ದೀರ್ಘಕಾಲ ಅವರು ಮಾಡಿದ ಸಾಹಸ, ಪಟ್ಟ ಕಷ್ಟ, ತೋರಿದ ದಾಢಸಿತನ ಅಸಾಧಾರಣ. ‘ಮಾಡು ಇಲ್ಲವೆ ಮಡಿ’ ಎಂಬ ಗಾಂಧೀಜಿಯ ಕರೆಯಂತೆ ಮಾಡಿ ಮಡಿದ ಧೀರ, ಎದೆಗಾರ ಎಂದು ಬಣ್ಣಿಸಿದರು.

ಗಾಂಧೀಜಿ 1930ರಲ್ಲಿ ಹೂಡಿದ ಉಪ್ಪಿನ ಸತ್ಯಾಗ್ರಹದ ವೇಳೆಗೆ ದಂಡಿಗೆ ನಡೆದ ದೀರ್ಘ ಕಾಲು ನಡಿಗೆಯ ಯಾತ್ರೆಯಲ್ಲಿ ಪಾಲ್ಗೊಂಡ 78 ಸತ್ಯಾಗ್ರಹಿಗಳಲ್ಲಿ ಮಹದೇವ ಕರ್ನಾಟಕದ ಏಕಮಾತ್ರ ಪ್ರತಿನಿಧಿ. ಆಶ್ರಮದ ದಾಖಲೆಯಲ್ಲಿ ಮೈಲಾರ ಮಾರ್ತಾಂಡ ಎಂದು ಇವರ ಹೆಸರಿದೆ. ಆಗ ನಡೆದ ಉಪ್ಪಿನ ಸತ್ಯಾಗ್ರಹದಲ್ಲಿ ಪಾಲ್ಗೊಂಡ ಮಹದೇವ ಇತರರ ಜತೆ ಬಂಧಿತರಾಗಿ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಿದರು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಸದ ಶಿವಕುಮಾರ್ ಸಿ.ಉದಾಸಿ, ಕರ್ನಾಟಕ ವೃತ್ತದ ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಡಾ.ಚಾರ್ಲ್ಸ್ ಲೋಬೋ, ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಡಾ.ವೂಡೇ ಪಿ.ಕೃಷ್ಣ, ಮೈಲಾರ ಮಹದೇವಅವರ ಪುತ್ರಿ ಕಸ್ತೂರಿ ದೇವಿ ಸಿದ್ದಲಿಂಗಯ್ಯ ಸೇರಿದಂತೆ ಪ್ರಮುಖರಿದ್ದರು.

ಶರೀಫರ ಅಂಚೆ ಚೀಟಿಗೆ ಮನವಿ

ಸಂತ ಶಿಶುನಾಳ ಶರೀಫ್ ಅವರ ನೆನಪಿನಲ್ಲಿ ಅಂಚೆ ಚೀಟಿ ಹೊರ ತರುವ ಉದ್ದೇಶದಿಂದ ಕೇಂದ್ರಕ್ಕೆ ಮನವಿ ನೀಡಲಾಗಿದ್ದು, ಈ ಸಂಬಂಧ ಮನೋಜ್ ಸಿನ್ಹಾ ಸಹಕಾರ ನೀಡಬೇಕು.

-ಜಗದೀಶ್ ಶೆಟ್ಟರ್, ಮಾಜಿ ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X