Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇರಳಕಟ್ಟೆ: ಚರಂಡಿ ಅವ್ಯವಸ್ಥೆ;...

ದೇರಳಕಟ್ಟೆ: ಚರಂಡಿ ಅವ್ಯವಸ್ಥೆ; ಕಲುಷಿತಗೊಂಡಿರುವ ಬಾವಿಗಳಿಂದ ಕುಡಿಯುವ ನೀರಿಗೆ ಸಮಸ್ಯೆ

ವಾರ್ತಾಭಾರತಿವಾರ್ತಾಭಾರತಿ3 Sept 2018 8:32 PM IST
share
ದೇರಳಕಟ್ಟೆ: ಚರಂಡಿ ಅವ್ಯವಸ್ಥೆ; ಕಲುಷಿತಗೊಂಡಿರುವ ಬಾವಿಗಳಿಂದ ಕುಡಿಯುವ ನೀರಿಗೆ ಸಮಸ್ಯೆ

ಕೊಣಾಜೆ, ಸೆ. 3:  ದೇರಳಕಟ್ಟೆಯ ಕಾನಕ್ಕೆರೆ ಪ್ರದೇಶದಲ್ಲಿ ಚರಂಡಿ ಅವ್ಯವಸ್ಥೆಯಿಂದಾಗಿ ಸುಮಾರು 20 ಬಾವಿಗಳ ನೀರು ಕಲುಷಿತಗೊಂಡಿರುವ ಘಟನೆ ನಡೆದಿದ್ದು, ಇದರಿಂದ ಪ್ರದೇಶದ ಮನೆಮಂದಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು,  ಈ ಕುರಿತು ಜಿಲ್ಲಾಡಳಿತ ಹಾಗೂ ಸ್ಥಳೀಯ ಪಂಚಾಯತಿಗೂ ಗ್ರಾಮಸ್ಥರು ದೂರು ನೀಡಿದ್ದಾರೆ.

ದೇರಳಕಟ್ಟೆ ಜಂಕ್ಷನ್ನಿನಲ್ಲಿ  6 ವರ್ಷಗಳ ಹಿಂದೆ ನೆಲೆನಿಂತ ಖಾಸಗಿ ಕಟ್ಟಡದಿಂದಾಗಿ ಚರಂಡಿ ಅವ್ಯವಸ್ಥೆಯಿಂದಾಗಿ ಕುಡಿಯುವ ನೀರಿನ ಬಾವಿಗಳಲ್ಲಿ ಸಮಸ್ಯೆ ನಿರ್ಮಾಣವಾಗಿದೆ ಎಂದು ತಿಳಿದುಬಂದಿದೆ. ಇದರಿಂದ  ಕಳೆದ ಹಲವಾರು ವರ್ಷಗಳಿಂದ ಬಾಳುತ್ತಿರುವ ಕಾನೆಕೆರೆ ಪ್ರದೇಶದ ಜನ ತೊಂದರೆಗೀ ಡಾಗುತ್ತಿದ್ದಾರೆ.  ವಾಣಿಜ್ಯ  ಸಂಕೀರ್ಣ ಕಟ್ಟಡದಲ್ಲಿ ಹೊಟೇಲು, ಅಂಗಡಿಗಳು ಹಾಗೂ  ಲಾಡ್ಜಿಂಗ್ ವ್ಯವಸ್ಥೆ ಇದೆ. ಆದರೆ  ಕಟ್ಟಡದ ಮಾಲೀಕರು ಚರಂಡಿ  ನಿರ್ಮಿಸಿದ್ದರೂ, ತೈಲದಂತೆ  ರಾಸಾಯನಿಕ  ಹರಿದು ಸ್ಥಳೀಯ ಬಾವಿಗಳನ್ನು ಸೇರುತ್ತಿದೆ. ಇದರಿಂದ   ಬಾವಿಗಳಲ್ಲಿನ ನೀರು ಕುಡಿಯಲು ಅಯೋಗ್ಯ ವಾಗಿದೆ. ವರ್ಷದಿಂದ ಸಮಸ್ಯೆ ಉಲ್ಬಣವಾಗಿದ್ದು, ಜಿಲ್ಲಾಡಳಿತ ಹಾಗೂ ಸ್ಥಳೀಯ ಬೆಳ್ಮ ಗ್ರಾಮ ಪಂಚಾಯಿತಿಗೆ ದೂರು ನೀಡುತ್ತಾ ಬಂದಿದ್ದೇವೆ . ಆದರೂ ಯಾವುದೇ ಕ್ರಮಕೈಗೊಳ್ಳಲಾಗಿಲ್ಲ ಅನ್ನುವ ಆರೋಪ ಸ್ಥಳೀಯರದ್ದಾಗಿದೆ. 

ಪೈಪ್ ಮುಚ್ಚಿದ ಪಂಚಾಯತ್ : ರವಿವಾರ  ಸ್ಥಳೀಯ ಬೆಳ್ಮ ಗ್ರಾಮ ಪಂಚಾಯಿತಿನ ಉಪಾಧ್ಯಕ್ಷರು ಸೇರಿದಂತೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಕಟ್ಟಡದಿಂದ ಹೊರಬರುವ ನೀರಿನ ಪೈಪುಗಳನ್ನು ಮುಚ್ಚಿದ್ದಾರೆ.  ಕಟ್ಟಡದವರು  ಸ್ಥಳೀಯ ನಿವಾಸಿಗಳಿಗೆ ಮುಂದೆ ತೊಂದರೆಯಾಗದಂತೆ ಕ್ರಮಕೈಗೊಳ್ಳುವವರೆಗೂ ಪೈಪನ್ನು ಮುಚ್ಚಿಯೇ ಇಡಲಾಗುವುದು  ಎಂದು ಉಪಾಧ್ಯಕ್ಷ ಸತ್ತಾರ್ ತಿಳಿಸಿದ್ದಾರೆ.

150 ಮನೆಗಳ ನಿವಾಸಿಗಳು ಬಾವಿಯ ನೀರನ್ನು ಆಶ್ರಯಿಸುತ್ತಿದ್ದಾರೆ. ಆದರೆ ಖಾಸಗಿ ಕಟ್ಟಡದ ಚರಂಡಿ ನೀರನ್ನು ಹೊರಗೆ ಬಿಡಲಾಗುತ್ತಿದೆ. ಇದರಿಂದ ದಾರಿಯುದ್ದಕ್ಕೂ  ಚರಂಡಿ ನೀರು ಹರಿಯುತ್ತಾ ಜನರಿಗೆ ನಡೆದಾಡಲೂ ತೊಂದರೆಯಾಗುತ್ತಿದೆ.  ಚರಂಡಿ ನೀರಿಗೆಂದು  ಕಟ್ಟಡದ ಮಾಲೀಕರು ಬಾವಿ ಕಟ್ಟಿ ಅದರೊಳಕ್ಕೆ ಬಿಡುತ್ತಿದ್ದಾರೆ. ಆದರೆ  ಇದರಿಂದಾಗಿ ಬಾವಿಗಳೆಲ್ಲವೂ  ಕಲುಷಿತಗೊಂಡಿದೆ. ಜನರಿಗೆ ಕುಡಿಯಲು ಸರಿಯಾದ  ನೀರು ಕೂಡಾ ಇಲ್ಲ.  ಪಂಚಾಯಿತಿ ಸಮಸ್ಯೆಯನ್ನು ಬಗೆಹರಿಸುವ ವಿಶ್ವಾಸವನ್ನು ಕೊಟ್ಟಿದೆ. ಅದರ ಭರವಸೆಯಲ್ಲಿ ಕಾನಕ್ಕೆರೆ ನಿವಾಸಿಗಳು ಇದ್ದೇವೆ.
- ಮಹಮ್ಮದ್ ಫಾರೂಕ್, ಕಾನೆಕ್ಕೆರೆ ನಿವಾಸಿ 

ಚರಂಡಿ ನೀರು ತೋಡಿನಲ್ಲಿ ಬಂದು  ಬಾವಿ ನೀರು ಕುಡಿಯಲು ಸಾಧ್ಯವಾಗುತ್ತಿಲ್ಲ. 100 ವರ್ಷಗಳಿಂದ ಇಲ್ಲಿ ವಾಸಿಸುತ್ತಿದ್ದೇವೆ. ಆದರೆ 6ವರ್ಷಗಳ ಹಿಂದೆ ಬಂದವರಿಂದ ಇದೀಗ ಜನರಿಗೆ ತೊಂದರೆಯಾಗುತ್ತಿದೆ. ದಾರಿಯಲ್ಲಿ ನಡೆದಾಡಿಕೊಂಡು ಮಸೀದಿ, ಶಾಲೆಗೆ ತೆರಳಲು ಮಕ್ಕಳಿಗೆ  ಹಾಗೂ ದೊಡ್ಡವರಿಗೂ ಸಮಸ್ಯೆಯಾಗಿದೆ.  ಸಂಬಂಧಪಟ್ಟವರಿಗೆ ದೂರು ನೀಡಿ ಸಾಕಾಗಿ ಹೋಗಿದೆ. 
-ಅಬೂಬಕ್ಕರ್ , ಕಾನಕ್ಕೆರೆ ನಿವಾಸಿ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X