Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇವಲ 62 ಜವಾನ ಹುದ್ದೆಗೆ 81,700...

ಕೇವಲ 62 ಜವಾನ ಹುದ್ದೆಗೆ 81,700 ಪದವೀಧರರ ಅರ್ಜಿ!

ಉತ್ತರಪ್ರದೇಶದ ನಿರುದ್ಯೋಗ ಪರಿಸ್ಥಿತಿಗೆ ಉದಾಹರಣೆ

ವಾರ್ತಾಭಾರತಿವಾರ್ತಾಭಾರತಿ3 Sept 2018 8:56 PM IST
share
ಕೇವಲ 62 ಜವಾನ ಹುದ್ದೆಗೆ 81,700 ಪದವೀಧರರ ಅರ್ಜಿ!

ಲಕ್ನೊ, ಸೆ.3: ಉತ್ತರಪ್ರದೇಶದಲ್ಲಿರುವ ನಿರುದ್ಯೋಗದ ಪರಿಸ್ಥಿತಿಗೆ ಇಲ್ಲೊಂದು ಕೈಗನ್ನಡಿಯಾಗುವ ಸುದ್ದಿಯಿದೆ. ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 62 ಜವಾನ ಹುದ್ದೆಗಳಿಗೆ ಸುಮಾರು 50,000 ಪದವೀಧರರು, 28,000 ಸ್ನಾತಕೋತ್ತರ ಪದವೀಧರರು ಹಾಗೂ 3,700 ಪಿಎಚ್‌ಡಿ ಪದವೀಧರರು ಸೇರಿದಂತೆ 81,700 ಪದವೀಧರರು ಅರ್ಜಿ ಸಲ್ಲಿಸಿದ್ದಾರೆ.

ಪೊಲೀಸ್ ಇಲಾಖೆಯ ಟೆಲಿಕಾಂ ವಿಭಾಗದಲ್ಲಿ ಮೆಸೆಂಜರ್ ಹುದ್ದೆಗೆ ಕನಿಷ್ಟ ವಿದ್ಯಾರ್ಹತೆ 5ನೇ ತರಗತಿ ಪಾಸಾಗಿರಬೇಕು. ಆರಂಭಿಕ ವೇತನ 20,000 ರೂ. ಆದರೆ ಈಗ ಉನ್ನತ ಪದವೀಧರರೂ ಅರ್ಜಿ ಸಲ್ಲಿಸಿರುವ ಕಾರಣ ನೇಮಕಾತಿ ಪ್ರಕ್ರಿಯೆಯನ್ನು ಅಧಿಕಾರಿಗಳು ಮುಂದೂಡಿದ್ದಾರೆ. 62 ಹುದ್ದೆಗಳಿಗೆ 93,500 ಅರ್ಜಿಗಳು ದಾಖಲಾಗಿವೆ. ಇದರಲ್ಲಿ ಪದವೀಧರರು, ಸ್ನಾತಕೋತ್ತರ ಪದವೀಧರರು, ಎಂಬಿಎ, ಎಂಸಿಎ, ಪಿಎಚ್‌ಡಿ ಸೇರಿದಂತೆ ಇತರ ಉನ್ನತ ಪದವೀಧರರೂ ಸೇರಿದ್ದಾರೆ ಎಂದು ಉ.ಪ್ರ. ಪೊಲೀಸ್ ಇಲಾಖೆಯ ಟೆಲಿಕಾಂ ವಿಭಾಗದ ಮಹಾನಿರ್ದೇಶಕ ಪ್ರಮೋದ್ ಕುಮಾರ್ ತಿವಾರಿ ತಿಳಿಸಿದ್ದಾರೆ. ಇದೀಗ ನೇಮಕಾತಿ ಪ್ರಕ್ರಿಯೆ ಮುಂದೂಡಲಾಗಿದ್ದು ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅನುದಾನ ಒದಗಿಸುವಂತೆ ಸರಕಾರವನ್ನು ಕೋರಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಮಧ್ಯೆ, ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಪರಿಸ್ಥಿತಿಗೆ ಈ ಘಟನೆ ಸಾಕ್ಷಿಯಾಗಿದೆ ಎಂದು ಸಮಾಜವಾದಿ ಪಕ್ಷದ ವಕ್ತಾರ ಅಬ್ದುಲ್ ಹಫೀಝ್ ಗಾಂಧಿ ಹೇಳಿದ್ದಾರೆ. ರಾಜ್ಯದಲ್ಲಿ ಅರ್ಹತೆಯುಳ್ಳ ಯುವಕರ ಕೊರತೆಯಿದೆ ಎಂದು ಮುಖ್ಯಮಂತ್ರಿ ಈ ಹಿಂದೆ ನೀಡಿದ್ದ ಹೇಳಿಕೆ ಸುಳ್ಳು ಎಂಬುದು ಇದೀಗ ಸಾಬೀತಾಗಿದೆ. ರಾಜ್ಯದಲ್ಲಿರುವ ಅರ್ಹ ಯುವಕರಿಗೆ ಉದ್ಯೋಗಾವಕಾಶ ಒದಗಿಸುವಲ್ಲಿ ಸರಕಾರ ವಿಫಲವಾಗಿದೆ ಎಂದು ಅವರು ಟೀಕಿಸಿದ್ದಾರೆ.

ಇದಕ್ಕೆ ಇದಿರೇಟು ನೀಡಿರುವ ಉ.ಪ್ರದೇಶ ಬಿಜೆಪಿ ಮುಖಂಡ ರಾಕೇಶ್ ತ್ರಿಪಾಠಿ, ಸಮಾಜವಾದಿ ಪಕ್ಷದ ಆಡಳಿತದ ಸಂದರ್ಭ ಪ್ರತಿಯೊಂದು ನೇಮಕಾತಿಯ ಸಂದರ್ಭವೂ ಅಭ್ಯರ್ಥಿಗಳು ನ್ಯಾಯಾಲಯದ ಮೊರೆ ಹೋಗಬೇಕಾದ ಪರಿಸ್ಥಿತಿಯಿತ್ತು. ಅಷ್ಟರಮಟ್ಟಿಗೆ ಅವ್ಯವಹಾರ ತಾಂಡವವಾಡುತ್ತಿತ್ತು. ಹಣ ಬಲ ಇದ್ದವರಿಗೆ ಮಾತ್ರ ಉದ್ಯೋಗ ಎಂಬ ಅಲಿಖಿತ ನಿಯಮ ಜಾರಿಯಲ್ಲಿತ್ತು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ನೇಮಕಾತಿ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕ ರೀತಿಯಲ್ಲಿ ನಡೆಯುತ್ತಿದೆ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X