Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ಸಮ ಮತ ಪಡೆದ ಅಭ್ಯರ್ಥಿಗಳು;...

ಶಿವಮೊಗ್ಗ: ಸಮ ಮತ ಪಡೆದ ಅಭ್ಯರ್ಥಿಗಳು; ಚೀಟಿ ಎತ್ತುವ ಮೂಲಕ ಜೆಡಿಎಸ್‍ ಅಭ್ಯರ್ಥಿಗೆ ಒಲಿದ ಅದೃಷ್ಟ

ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ

ವಾರ್ತಾಭಾರತಿವಾರ್ತಾಭಾರತಿ3 Sept 2018 10:07 PM IST
share
ಶಿವಮೊಗ್ಗ: ಸಮ ಮತ ಪಡೆದ ಅಭ್ಯರ್ಥಿಗಳು; ಚೀಟಿ ಎತ್ತುವ ಮೂಲಕ ಜೆಡಿಎಸ್‍ ಅಭ್ಯರ್ಥಿಗೆ ಒಲಿದ ಅದೃಷ್ಟ

ಶಿವಮೊಗ್ಗ, ಸೆ. 3: ಕೆಲವೊಮ್ಮೆ ಒಂದೊಂದು ಮತವೂ ಎಷ್ಟು ಮಹತ್ವದ್ದಾಗಿರುತ್ತದೆ ಎಂಬುವುದಕ್ಕೆ ಹರಿಗೆ ವಾರ್ಡ್‍ನ ಚುನಾವಣಾ ಫಲಿತಾಂಶ ಸಾಕ್ಷಿಯಾಗಿದೆ. ಈ ವಾರ್ಡ್‍ನ ಫಲಿತಾಂಶ ಎಲ್ಲರನ್ನು ತುದಿಗಾಲ ಮೇಲೆ ನಿಲ್ಲುವಂತೆ ಮಾಡಿತ್ತು. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಸಮ ಮತ ಪಡೆಯುವ ಮೂಲಕ ಸಾಕಷ್ಟು ರೋಚಕತೆ ಸೃಷ್ಟಿಸಿತ್ತು. 

ಅಂತಿಮವಾಗಿ ನಿಯಮಾನುಸಾರ ಚೀಟಿ ಎತ್ತುವ ಮೂಲಕ ಚುನಾವಣಾಧಿಕಾರಿಗಳು ಅಭ್ಯರ್ಥಿಯ ಆಯ್ಕೆ ನಡೆಸಿದರು. ಅದೃಷ್ಟ ಜೆಡಿಎಸ್ ಪರವಾಗಿತ್ತು. ಕಾಂಗ್ರೆಸ್‍ಗೆ ಕೈ ಬಂದ ತುತ್ತು ಬಾಯಿಗೆ ಬರದಂತಾಗಿತ್ತು. 

ಸಮಬಲ: ಈ ವಾರ್ಡ್‍ನಲ್ಲಿ ಕಾಂಗ್ರೆಸ್‍ನಿಂದ ಹಾಲಿ ಕಾರ್ಪೋರೇಟರ್ ರಾಜಶೇಖರ್, ಜೆಡಿಎಸ್‍ನಿಂದ ಪತ್ರಕರ್ತ ಆರ್.ಎಸ್.ಸತ್ಯನಾರಾಯಣರಾಜ್ ಹಾಗೂ ಬಿಜೆಪಿಯಿಂದ ಜಿ. ಸುದರ್ಶನ್ ಕಣದಲ್ಲಿದ್ದರು. ಇತರೆ ಪಕ್ಷ ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳ್ಯಾರು ಕಣದಲ್ಲಿರಲಿಲ್ಲ. ಮೂರು ಪಕ್ಷಗಳ ನಡುವೆ ಜಿದ್ದಾಜಿದ್ದಿನ ಅಖಾಡ ಏರ್ಪಟ್ಟಿತ್ತು. 

ಈ ವಾರ್ಡ್‍ನಲ್ಲಿ ಒಟ್ಟಾರೆ ಆರು ಮತಗಟ್ಟೆಗಳಿದ್ದವು. 4557 ಜನರು ಮತದಾನ ಮಾಡಿದ್ದರು. ಇದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್.ರಾಜಶೇಖರ್‍ರವರಿಗೆ 1708, ಜೆಡಿಎಸ್ ಅಭ್ಯರ್ಥಿ ಆರ್.ಎಸ್.ಸತ್ಯನಾರಾಯಣರವರಿಗೆ 1708 ಹಾಗೂ ಬಿಜೆಪಿ ಅಭ್ಯರ್ಥಿ ಜಿ. ಸುದರ್ಶನ್‍ರವರಿಗೆ 1119 ಮತಗಳು ಹಾಗೂ ಚುನಾವಣಾ ಆಯೋಗದ ನೋಟಾ ಗುರುತಿಗೆ 22 ಮತಗಳು ಸಂದಾಯವಾಗಿದ್ದವು. 

ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳು ತಲಾ 1708 ಮತ ಪಡೆದಿದ್ದರಿಂದ, ಮತ್ತೊಮ್ಮೆ ಮರು ಮತ ಎಣಿಕೆ ನಡೆಸಲಾಯಿತು. ಈ ವೇಳೆ ಕೂಡ ಈ ಇಬ್ಬರು ಅಭ್ಯರ್ಥಿಗಳ ಮತಗಳಿಕೆಯಲ್ಲಿ ಯಾವುದೇ ವ್ಯತ್ಯಾಸ ಕಂಡುಬರಲಿಲ್ಲ. ಈ ಕಾರಣದಿಂದ ನಿಯಮಾನುಸಾರ ಚುನಾವಣಾಧಿಕಾರಿಗಳು ಚೀಟಿ ಎತ್ತುವ ಮೂಲಕ ಆಯ್ಕೆ ನಡೆಸಲು ಮುಂದಾದರು. ಚೀಟಿ ಆಯ್ಕೆಯಲ್ಲಿ ಜೆಡಿಎಸ್‍ನ ಆರ್.ಎಸ್.ಸತ್ಯನಾರಾಯಣರಾಜ್‍ರವರ ಹೆಸರು ಬಂದಿತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X