Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಟ್ಟೆ ಬ್ಯಾನರ್ ಬಳಕೆಗೆ ಅವಕಾಶ ನೀಡಲು...

ಬಟ್ಟೆ ಬ್ಯಾನರ್ ಬಳಕೆಗೆ ಅವಕಾಶ ನೀಡಲು ಆಗ್ರಹ: ರಂಗ ಕಲಾವಿದರಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ3 Sept 2018 10:25 PM IST
share
ಬಟ್ಟೆ ಬ್ಯಾನರ್ ಬಳಕೆಗೆ ಅವಕಾಶ ನೀಡಲು ಆಗ್ರಹ: ರಂಗ ಕಲಾವಿದರಿಂದ ಧರಣಿ

ಬೆಂಗಳೂರು, ಸೆ.3: ರವೀಂದ್ರ ಕಲಾಕ್ಷೇತ್ರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಬಟ್ಟೆ ಬ್ಯಾನರ್ ಬಳಕೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ ರಂಗ ಕಲಾವಿದರು ನಗರದ ರವೀಂದ್ರ ಕಲಾಕ್ಷೇತ್ರದ ಎದುರು ಪ್ರತಿಭಟನಾ ಧರಣಿ ನಡೆಸಿದರು.

ನಗರದ ರವೀಂದ್ರ ಕಲಾಕ್ಷೇತ್ರ, ಕಲಾಗ್ರಾಮ, ಕೆ.ಎಚ್.ಕಲಾಸೌಧ ಸೇರಿದಂತೆ ಹಲವು ರಂಗಮಂದಿರಗಳಲ್ಲಿ ಪ್ರತಿನಿತ್ಯ ಹಲವಾರು ನಾಟಕಗಳು ನಡೆಯುತ್ತಲೇ ಇರುತ್ತವೆ. ಈ ಸಂದರ್ಭದಲ್ಲಿ ಬಿಬಿಎಂಪಿ ಫ್ಲೆಕ್ಸ್, ಬ್ಯಾನರ್ ನಿಷೇಧ ಮಾಡಿರುವ ಹಿನ್ನೆಲೆಯಲ್ಲಿ ಬಟ್ಟೆ ಬ್ಯಾನರ್‌ಗಳನ್ನು ತೆರವು ಮಾಡಲಾಗುತ್ತಿದೆ. ಹೀಗಾಗಿ, ಪ್ರಚಾರದ ಅಭಾವದಿಂದಾಗಿ ಪ್ರೇಕ್ಷಕರ ಕೊರತೆ ಹೆಚ್ಚಾಗುತ್ತದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಜೆ.ಲೋಕೇಶ್, ನಾಟಕ ಮಾಡುವ ಕಲಾತಂಡಗಳು ರಂಗಮಂದಿರಗಳ ಎದುರಿನಲ್ಲಿ ಅಷ್ಟೇ ಬಟ್ಟೆ ಬ್ಯಾನರ್ ಬಳಕೆ ಮಾಡುತ್ತಿದ್ದಾರೆ. ಎಲ್ಲೆಂದರಲ್ಲಿ ಅಡ್ಡಾದಿಡ್ಡಿಯಾಗಿ ಬ್ಯಾನರ್ ಬಳಕೆ ಮಾಡುತ್ತಿಲ್ಲ. ಹೀಗಿರುವಾಗ ಪಾಲಿಕೆಯು ಏಕಾಏಕಿಯಾಗಿ ಬ್ಯಾನರ್ ತೆರವು ಮಾಡುತ್ತಿರುವುದು ಸರಿಯಲ್ಲ ಎಂದು ಅಭಿಪ್ರಾಯಿಸಿದರು.

ಸರಕಾರವು ಈ ಕುರಿತು ಚಿಂತನೆ ಮಾಡಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಸ್ಥಳದ ಸುತ್ತಮುತ್ತಲಿನಲ್ಲಿ, ಬಸ್ಸು ನಿಲ್ದಾಣ, ಆಯ್ದ ಮೆಟ್ರೋ ನಿಲ್ದಾಣಗಳಲ್ಲಿ ಗುರುತಿಸಿ ಪೋಸ್ಟರ್ ಹಾಗೂ ಬ್ಯಾನರ್ ಅಳವಡಿಸಲು ಅವಕಾಶ ಕಲ್ಪಿಸಬೇಕು. ಈ ಸಂಬಂಧ ಇಲಾಖೆಯ ನಿರ್ದೇಶಕರಿಗೆ, ಸಂಬಂಧಪಟ್ಟ ಸಚಿವರಿಗೆ ಪತ್ರ ಬರೆಯಲಾಗುತ್ತದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಡಿಯಲ್ಲಿನ ಕಲಾಗ್ರಾಮ ಹಾಗೂ ನಯನ ರಂಗಮಂದಿರಲ್ಲಿ ಕೆಟ್ಟು ಹೋಗಿರುವ ಜನರೇಟರ್ ವ್ಯವಸ್ಥೆ ಸರಿಪಡಿಸಬೇಕು. ನಾಟಕ ಪ್ರದರ್ಶನದ ವೇಳೆ ಬೆಳಕಿನ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಕಲಾಗ್ರಾಮ ಹಾಗೂ ನಯನ ರಂಗಮಂದಿರದಲ್ಲಿ ಕೆಲಸ ಮಾಡುವ ಗುತ್ತಿಗೆ ಸಿಬ್ಬಂದಿಗೆ ಪ್ರತಿ ತಿಂಗಳು ನಿಗದಿಯಾದ ದಿನದಂದು ತಪ್ಪದೇ ಸಂಬಳ ಸಿಗುವ ವ್ಯವಸ್ಥೆಯಾಗಬೇಕು ಎಂದು ಪ್ರತಿಭಟನಾನಿರತರು ಆಗ್ರಹಪಡಿಸಿದರು.

ರವೀಂದ್ರ ಕಲಾಕ್ಷೇತ್ರ, ಕಲಾಗ್ರಾಮ ಹಾಗೂ ನಯನ ರಂಗಮಂದಿರಗಳ ಆನ್‌ಲೈನ್ ಬುಕ್ಕಿಂಗ್ ವ್ಯವಸ್ಥೆಯಲ್ಲಿರುವ ನ್ಯೂನತೆಗಳನ್ನು ಸರಿಪಡಿಸಿ ರಂಗತಂಡಗಳಿಗೆ ಸತಾಯಿಸದೇ ಮೊದಲು ಬಂದವರಿಗೆ ಮೊದಲ ಆದ್ಯತೆ ಕೊಟ್ಟು ಮುಂಗಡವಾಗಿ ನೋಂದಣಿ ಮಾಡುವ ಪಾರದರ್ಶಕ ವ್ಯವಸ್ಥೆ ತರಬೇಕು. ರಂಗಮಂದಿರಗಳ ನಿರ್ವಹಣೆ ಮಾಡುವ ಜವಾಬ್ದಾರಿ ಹೊತ್ತಿರುವ ವ್ಯವಸ್ಥಾಪಕರು ಹಾಗೂ ಅಧಿಕಾರಿಗಳು ರಂಗತಂಡಗಳ ಮುಖ್ಯಸ್ಥರು ಹಾಗೂ ಕಲಾವಿದರುಗಳೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಒತ್ತಾಯಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಸಾಂಸ್ಕೃತಿಕ ಸಂಘ ಸಂಸ್ಥೆಗಳಿಗೆ ಕೊಡುವ ಪ್ರಾಯೋಜನೆ, ವಾರ್ಷಿಕ ಅನುದಾನ ಹಾಗೂ ಇನ್ನಿತರೆ ಯೋಜನೆಗಳ ಧನಸಹಾಯಗಳನ್ನು ಉದ್ದೇಶಿತ ಕಾರ್ಯಕ್ರಮ ನಡೆಸಿದ ಸೂಕ್ತ ದಾಖಲೆ ನೀಡಿದ ನಂತರ ಅನುದಾನ ನೀಡಬೇಕು ಎಂದು ನಿರ್ದೇಶಕರು ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಇದೇ ವೇಳೆ ಕಲಾವಿದರು ಮನವಿ ಮಾಡಿದರು. ಪ್ರತಿಭಟನೆಯಲ್ಲಿ ನಾಟಕ ಅಕಾಡೆಮಿ ಸದಸ್ಯರಾದ ಶಶಿಕಾಂತ್ ಎಡಹಳ್ಳಿ, ಬಿ.ವಿಟ್ಠಲ್, ಆರ್.ವೆಂಕಟರಾಜು, ಮಹಿಳಾ ಸಂಘಟನೆಯ ಕೆ.ಎಸ್.ವಿಮಲಾ, ಮಾವಳ್ಳಿ ಶಂಕರ್, ಸಮುದಾಯ ಸಂಘಟನೆಯ ಗುಂಡಣ್ಣ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X