Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶೃಂಗೇರಿ: ಕೇಂದ್ರದ ಜನವಿರೋಧಿ ಆಡಳಿತ...

ಶೃಂಗೇರಿ: ಕೇಂದ್ರದ ಜನವಿರೋಧಿ ಆಡಳಿತ ಖಂಡಿಸಿ ಕಾಂಗ್ರೆಸ್ ಧರಣಿ

ವಾರ್ತಾಭಾರತಿವಾರ್ತಾಭಾರತಿ3 Sept 2018 11:24 PM IST
share

ಶೃಂಗೇರಿ, ಸೆ.3: ಪ್ರಧಾನಿ ನರೇಂದ್ರ ಮೋದಿ ಅವರ ಸರ್ವಾಧಿಕಾರ ಧೋರಣೆಯಿಂದ ದೇಶ ಆಧೋಗತಿಯತ್ತ ಸಾಗುತ್ತಿದೆ. ಕೇಂದ್ರಸರಕಾರ ಜನವಿರೋಧಿ ಆಡಳಿತ ನೀಡುತ್ತಿದ್ದು, ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲಗಳ ಬೆಲೆಯನ್ನು ಏರಿಸಿ ಬಡವರನ್ನು ಸಂಕಷ್ಟಕ್ಕೆ ದೂಡಿದೆ. ರೈತ ವಿರೋಧಿಯಾಗಿರುವ ಕೇಂದ್ರ ಸರಕಾರಕ್ಕೆ ಜನತೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆಂದು ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಟೀಕಿಸಿದರು.

ಸೋಮವಾರ ತಾ. ಬ್ಲಾಕ್ ಕಾಂಗ್ರೆಸ್ ಪಟ್ಟಣದ ಕುರುಬಕೇರಿ ಸರ್ಕಲ್‍ನಲ್ಲಿ ಆಯೋಜಿಸಿದ್ದ ಕೇಂದ್ರ ಸರಕಾರದ ವಿರುದ್ಧದ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಅತಿವೃಷ್ಟಿ ಸಂಭವಿಸಿದರೂ ಸಂಸದೆ ಶೋಭಾ ಕರಂದ್ಲಾಜೆ ಒಮ್ಮೆಯೂ ಭೇಟಿ ನೀಡಿ ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳಿಲ್ಲ. ಅತೀವೃಷ್ಟಿಯಿಂದ ತೊಂದರೆಗೆ ಸಿಲುಕಿರುವ ರೈತರ ಪರವಾಗಿ ಮಾತನಾಡಿಲ್ಲ. ಅತೀವೃಷ್ಟಿಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲೂ ಅವರು ಸಕಾರಾತ್ಮಕವಾಗಿ ಕಾರ್ಯನಿರ್ವಹಿಸಿಲ್ಲ ಎಂದು ಆರೋಪಿಸಿದರು.

ಕೇಂದ್ರ ಸರಕಾರದಿಂದ ಪ್ರಕೃತಿವಿಕೋಪ ಪರಿಹಾರಧನ ತರಲು ಸಂಸದೆಗೆ ಆಸಕ್ತಿಯಿಲ್ಲ. ಆದರೆ ಜಿಲ್ಲಾ ಉಸ್ತುವಾರಿ ಸಚಿವರಾದ ಜಾರ್ಜ್ ಅವರು ಮಲೆನಾಡಿಗೆ ಭೇಟಿ ನೀಡಿ ರೈತರ ನೋವನ್ನು ಆಲಿಸಿದ್ದಾರೆ. ಸಂಸದೆ ಚುನಾವಣಾ ಸಮಯದಲ್ಲಿ ಮಾತ್ರ ಕ್ಷೇತ್ರಕ್ಕೆ ಬರುತ್ತಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕಾಲದಲ್ಲಿ ಪೆಟ್ರೋಲ್ ಬೆಲೆ ಏರಿದಾಗ ಪ್ರತಿಭಟಿಸಿದ್ದ ಬಿಜೆಪಿ ನಾಯಕರು ಪ್ರಸಕ್ತ ಬೆಲೆ ಏರಿಕೆಯಿಂದ ಜನತೆ ಕಂಗಾಲಾಗಿದ್ದರೂ ಮೌನಕ್ಕೆ ಶರಣಾಗಿದ್ದಾರೆ ಎಂದು ಆರೋಪಿಸದರು.

ತಾ.ಪಂ ಸದಸ್ಯ ಕೆ.ಆರ್.ವೆಂಕಟೇಶ್ ಮಾತನಾಡಿ, ಸಂಸದೆ ಶೋಭಾ ಕರಂದ್ಲಾಜೆ ಕ್ಷೇತ್ರದಿಂದ ನಾಪತ್ತೆಯಾಗಿದ್ದಾರೆ. ಒಂದುವೇಳೆ ಅವರು ಕ್ಷೇತ್ರಕ್ಕೆ ಬಂದಲ್ಲಿ ಕಪ್ಪುಬಾವುಟ ಪ್ರದರ್ಶನ ಮಾಡಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. 

ಧರಣಿಯಲ್ಲಿ ತಾ.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾರಣಕೂಡಿಗೆ ನಟರಾಜ್, ಎ.ಪಿ.ಎಂ.ಸಿ ಅಧ್ಯಕ್ಷ ರಮೇಶ್ ಭಟ್, ಜಿಲ್ಲಾ ಡಿಸಿಸಿಬ್ಯಾಂಕ್ ಉಪಾಧ್ಯಕ್ಷ ದಿನೇಶ್ ಹೆಗಡೆ, ತಾ.ಪಂ ಉಪಾಧ್ಯಕ್ಷೆ ಚಂದ್ರಮತಿ ತಿಮ್ಮಪ್ಪ, ಸದಸ್ಯೆ ಕಲ್ಪನಾ ಸುಂದರೇಶ್, ತಾ.ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಕೀಲಾ ಗುಂಡಪ್ಪ, ವಿದ್ಯಾರಣ್ಯಪುರ ಗ್ರಾ.ಪಂ ಸದಸ್ಯೆ ಸೌಭಾಗ್ಯ ಗೋಪಾಲನ್ ಹಾಗೂ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X