Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಪು ತ್ಯಾಜ್ಯ ಘಟಕ ಎಲ್ಲೂರಿನಲ್ಲಿ ಬೇಡ:...

ಕಾಪು ತ್ಯಾಜ್ಯ ಘಟಕ ಎಲ್ಲೂರಿನಲ್ಲಿ ಬೇಡ: ಎಲ್ಲೂರು ಗ್ರಾಮಸ್ಥರ ವಿರೋಧ

ವಾರ್ತಾಭಾರತಿವಾರ್ತಾಭಾರತಿ4 Sept 2018 8:49 PM IST
share
ಕಾಪು ತ್ಯಾಜ್ಯ ಘಟಕ ಎಲ್ಲೂರಿನಲ್ಲಿ ಬೇಡ: ಎಲ್ಲೂರು ಗ್ರಾಮಸ್ಥರ ವಿರೋಧ

ಪಡುಬಿದ್ರಿ, ಸೆ. 4: ಎಲ್ಲೂರಿನಲ್ಲಿ ಯಾವುದೇ ಕಾರಣಕ್ಕೂ ಕಾಪು ಪುರಸಭೆಯ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣ ಮಾಡದೆ ಪುರಸಭೆ ಬಳಿಯಲ್ಲಿಯೇ ಇರುವ ಎರಡು ಎಕರೆ ಜಮೀನಿನಲ್ಲಿ ಘಟಕ ನಿರ್ಮಿಸಿ ಎಂದು ಎಲ್ಲೂರು ಗ್ರಾಮಸ್ಥರು ತಾಕೀತು ಮಾಡಿದ ಘಟನೆ ಮಂಗಳವಾರ ನಡೆದಿದೆ.

ಎಲ್ಲೂರು ಗ್ರಾಪಂ ಸಭಾಂಗಣದಲ್ಲಿ ಮಂಗಳವಾರ ಕಾಪು ಪುರಸಭೆ ಹಾಗೂ ಎಲ್ಲೂರು ಗ್ರಾಮ ಪಂಚಾಯಿತಿ ಸಂಯುಕ್ತವಾಗಿ ಆಯೋಜಿಸಿದ ಮಾಹಿತಿ ಕಾರ್ಯಾಗಾರ ಹಾಗೂ ಸಾರ್ವಜನಿಕ ಸಮಾಲೋಚನಾ ಸಭೆಯಲ್ಲಿ

ಕಾಪು ಪುರಸಭೆಯು ಎಲ್ಲೂರು ಗ್ರಾಮ ಪಂಚಾಯಿತಿಯ ಉಳ್ಳೂರು (ಉಳ್ಳಾಲ ಕಾಡು) ನಲ್ಲಿ ಸ್ಥಾಪಿಸಲುದ್ದೇಶಿಸಿರುವ ಘನ, ದ್ರವ ತ್ಯಾಜ್ಯ ಸಂಪನ್ಮೂಲಗಳ ನಿರ್ವಹಣಾ ಘಟಕವನ್ನು ಸ್ಥಾಪಿಸದಂತೆ ಒಕ್ಕೊರಲಿನಿಂದ ವಿರೋಧ ವ್ಯಕ್ತಪಡಿಸಿದರು.

ಮುಖ್ಯಾಧಿಕಾರಿ ರಾಯಪ್ಪ ತ್ಯಾಜ್ಯ ನಿರ್ವಹಣಾ ಘಟಕದ ಬಗ್ಗೆ ಮಾಹಿತಿ ನೀಡಿದರು. ಈ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಗ್ರಾಮಸ್ಥ ನಾಗೇಶ್ ಭಟ್, ಗೋಮಾಳ ಜಾಗವಾಗಿರುವ ಉಳ್ಳಾಲ ಕಾಡಿನಲ್ಲಿ ಯಾವುದೇ ಕಾರಣಕ್ಕೂ ಘಟಕ ಸ್ಥಾಪಿಸಬಾರದು. ದೆಹಲಿ, ಬೆಂಗಳೂರಿನಲ್ಲಿ ಘನತ್ಯಾಜ್ಯ ಸುರಿಯಲು ಗುರುತಿಸಿದ ಸ್ಥಳಗಳಲ್ಲಿ ಆದ ಅನಾಹುತಗಳನ್ನು ಕಂಡಿದ್ದೇವೆ. ಪುರಸಭೆ ಹಾಗೂ ಸುತ್ತಮುತ್ತಲಿನ ಗ್ರಾಮಗಳ ತ್ಯಾಜ್ಯಗಳನ್ನು ಎಲ್ಲೂರು ಗ್ರಾಮದಲ್ಲಿ ಸುರಿಯುವುದು ಬೇಡ. ಗ್ರಾಮದ ಪ್ರತಿ ಮನೆಗಳಲ್ಲಿ ಪೈಪು ಕಾಂಪೋಸ್ಟ್‍ಗೆ ಉತ್ತೇಜನ ನೀಡಿದಲ್ಲಿ ತ್ಯಾಜ್ಯ ನಿರ್ವಹಣೆಗೆ ಅನುಕೂಲವಾಗಲಿದೆ ಎಂದು ಗ್ರಾಮಸ್ಥ ರತ್ನಾಕರ ಶೆಟ್ಟಿ ಸಲಹೆ ನೀಡಿದರು.

ಪುರಸಭೆಯ ಅಭಿವೃದ್ಧಿಗಾಗಿ ಕಸ ಇಲ್ಲಿ ಯಾಕೆ. ಬದಲಿ ವ್ಯವಸ್ಥೆ ಕಲ್ಪಿಸಿಕೊಳ್ಳಿ. ಹೆಚ್ಚು ಸರ್ಕಾರಿ ಜಮೀನು ಹೊಂದಿರುವ ಬೆಳಪು ಗ್ರಾಮ ಪಂಚಾಯಿತಿ ಎಲ್ಲದರಲ್ಲೂ ಮಾದರಿ ಎಂದು ಹೇಳಿಕೊಳ್ಳುತ್ತಿದ್ದು, ಘನತ್ಯಾಜ್ಯ ನಿರ್ವಹಣೆಯಲ್ಲಿಯೂ ಮಾದರಿ ಎಂದು ಗುರುತಿಸಲಿ. ಅದಕ್ಕಾಗಿ ಅಲ್ಲಿರುವ ಸರ್ಕಾರಿ ಜಮೀನಿನಲ್ಲಿ ಘಟಕ ಸ್ಥಾಪಿಸಿ ಎಂದು ಅವರು ಆಗ್ರಹಿಸಿದರು.

ಈ ಗ್ರಾಪಂನಲ್ಲಿ ಅದೆಷ್ಟೋ ಮಂದಿ ನಿವೇಶನ ರಹಿತರಿದ್ದಾರೆ. ಅವರಿಗೆ ಈ ಜಮೀನನ್ನು ವಿಂಗಡಿಸಿ ನೀಡಬೇಕು. ಇಲ್ಲವೆ ಗೋಮಾಳ ಜಾಗವಾಗಿರುವ ಈ ಜಮೀನಿನಲ್ಲಿ ಗೋಶಾಲೆ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು. ಎಲ್ಲೂರಿಗೆ ಅಗತ್ಯವಿರುವ ಘನತ್ಯಾಜ್ಯ ನಿರ್ವಹಣಾ ಘಟಕವನ್ನೂ ಪಂಚಾಯಿತಿಯಿಂದಲೇ ನಿರ್ಮಿಸಲಾಗುವುದು. ಈಗಾಗಲೇ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಮುಖ್ಯಾಧಿಕಾರಿಯಾಗಿ ನೀವೇ ಮಾರ್ಗದರ್ಶನ ಮಾಡುವಂತೆ ಸದಸ್ಯರು ಸಲಹೆ ನೀಡಿದರು.

ಕಾಪು ಪುರಸಭೆ ವ್ಯಾಪ್ತಿಯಲ್ಲಿ ಪ್ರತಿದಿನ 10 ಟನ್ ತ್ಯಾಜ್ಯ ಸಂಗ್ರಹವಾಹುತ್ತಿದೆ. ಅದರಲ್ಲಿ 5 ಟನ್ ಹಸಿಕಸ ಲಭ್ಯವಾಗುತ್ತಿದೆ. ನಮ್ಮಲ್ಲಿಯೂ ಸಾಕಷ್ಟು ಮಂದಿ ಪರಿಸರ ಪ್ರೇಮಿಗಳಿದ್ದಾರೆ. ಬೆರಳೆಣಿಕೆ ಮಂದಿ ಮಾತ್ರ ತ್ಯಾಜ್ಯ ವಿಲೇ ಮಾಡುತ್ತಾರೆ. ನಮಗೆ ನಿರ್ವಹಣೆ ಮಾಡಲು ಸಮಯವಿಲ್ಲ. ನಮ್ಮ ಪರಿಸರವನ್ನು ನಾವೇ ಹಾಳು ಮಾಡುತ್ತಿದ್ದೇವೆ. ಮಧುರೆ, ಪುಣೆ, ಚೆನ್ನೈ, ಬೆಂಗಳೂರಿನಲ್ಲಿ ಮಾತ್ರ ಪ್ಲಾಸ್ಟಿಕ್ ಮರು ಬಳಕೆ ಕಾರ್ಯ ನಡೆಯುತ್ತಿದೆ. ನಾವಿರುವರೆಗೂ ಸ್ವಚ್ಛತೆ ಮಾಡುವ ಧೃಡ ನಿರ್ಧಾರ ಮಾಡಿಕೊಳ್ಳಬೇಕು. ಎಲ್ಲೂರು ಪಂಚಾಯಿತಿ ಅನುಮತಿ ನೀಡಿದಲ್ಲಿ ಮಾತ್ರ ಘನತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪಿಸಲು ಮುಂದಾಗುವುದಾಗಿ ಕಾಪು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ಹೇಳಿದರು.

 ಈ ಘಟಕ ಸ್ಥಾಪನೆ ಕುರಿತು ಸೆಪ್ಟೆಂಬರ್ 18 ರಂದು ನಡೆಯುವ ವಿಶೇಷ ಗ್ರಾಮಸಭೆಯಲ್ಲಿ ಘಟಕ ವಿರೋಧಿಸಿ ನಿರ್ಣಯ ಕೈಗೊಳ್ಳುವ ತೀರ್ಮಾನಕ್ಕೆ ಬರಲಾಗಿದೆ. ನಮ್ಮ ಗ್ರಾಮದ ತ್ಯಾಜ್ಯವನ್ನು ನಾವೇ ವಿಲೇ ಮಾಡುವ ಘಟಕ ನಿರ್ಮಾಣಕ್ಕೆ ಪಂಚಾಯಿತಿನಿಂದ ಈಗಾಗಲೇ ನಿರ್ಣಯ ಕೈಗೊಳ್ಳಲಾಗಿದೆ. ಎಲ್ಲೂರು ಗ್ರಾಮದಲ್ಲಿ ನಿರ್ಮಾಣ ಮಾಡಲುದ್ದೇಶಿಸಿರುವ ಪುರಸಭೆಯ ಘನತ್ಯಾಜ್ಯ ನಿರ್ವಹಣಾ ಘಟಕ ವಿರೋಧದ ಗ್ರಾಮಸ್ಥರ ನಿರ್ಧಾರಕ್ಕೆ ಬದ್ದಳಿರುವುದಾಗಿ ಗ್ರಾಪಂ ಅಧ್ಯಕ್ಷೆ ವಸಂತಿ ಮಧ್ವರಾಜ್ ಸ್ಪಷ್ಟಪಡಿಸಿದರು.

ಜಿಪಂ ಸದಸ್ಯೆ ಶಿಲ್ಪಾ ಜಿ ಸುವರ್ಣ, ಗ್ರಾಪಂ ಉಪಾಧ್ಯಕ್ಷ ಜಯಂತ್ ಕುಮಾರ್, ಪಿಡಿಒ ಮಮತಾ ಶೆಟ್ಟಿ, ಕಾರ್ಯದರ್ಶಿ ಚಂದ್ರಶೇಖರ್ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X