Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಶಿ ರಾಶಿ ಸಾಮಾಗ್ರಿ ಬಂದರೂ...

ರಾಶಿ ರಾಶಿ ಸಾಮಾಗ್ರಿ ಬಂದರೂ ಸಂತ್ರಸ್ತರಿಗೆ ತಲುಪುತ್ತಿಲ್ಲ: ಪರಿಹಾರ ಕೇಂದ್ರದ ಅಸಹಾಯಕರಿಂದ ದೂರು

ವಾರ್ತಾಭಾರತಿವಾರ್ತಾಭಾರತಿ4 Sept 2018 11:28 PM IST
share
ರಾಶಿ ರಾಶಿ ಸಾಮಾಗ್ರಿ ಬಂದರೂ ಸಂತ್ರಸ್ತರಿಗೆ ತಲುಪುತ್ತಿಲ್ಲ: ಪರಿಹಾರ ಕೇಂದ್ರದ ಅಸಹಾಯಕರಿಂದ ದೂರು

ಮಡಿಕೇರಿ, ಸೆ.4: ಪ್ರಾಕೃತಿಕ ವಿಕೋಪದಿಂದ ಆಸ್ತಿಪಾಸ್ತಿ, ಮನೆ ಮಠಗಳನ್ನು ಕಳೆದುಕೊಂಡು ಸಂತ್ರಸ್ತರಾಗಿ ಪರಿಹಾರ ಕೇಂದ್ರದಲ್ಲಿರುವ ಬಡಮಂದಿಗೆ ಸಮರ್ಪಕ ರೀತಿಯಲ್ಲಿ ಅಗತ್ಯ ಸೌಲಭ್ಯಗಳು ದೊರಕುತ್ತಿಲ್ಲ ಎನ್ನುವ ದೂರುಗಳು ಮತ್ತೆ ಮತ್ತೆ ಕೇಳಿ ಬರುತ್ತಲೇ ಇದೆ. ಜಿಲ್ಲಾ ಪಂಚಾಯತ್ ಕಚೇರಿ ಸಂಕೀರ್ಣದ ನೂತನ ಕಟ್ಟದಲ್ಲಿರುವ ಪರಿಹಾರ ಕೇಂದ್ರದಲ್ಲಿ ನೆಲೆ ಕಂಡುಕೊಂಡಿರುವ 2ನೇ ಮೊಣ್ಣಂಗೇರಿ ನಿವಾಸಿ ಸಂತ್ರಸ್ತ ವಾಮನ ನಾಯ್ಕ ತಮ್ಮ ನೋವನ್ನು ಪತ್ರಕರ್ತರ ಮುಂದೆ ತೋಡಿಕೊಂಡಿದ್ದಾರೆ.

2ನೇ ಮೊಣ್ಣಂಗೇರಿಯಲ್ಲಿ ಸಂಭವಿಸಿದ ಭೂ ಕುಸಿತದಿಂದ ತಮ್ಮ ನೆಲೆಯನ್ನು ಕಳೆದುಕೊಂಡು ಪುನರ್ವಸತಿ ಕೇಂದ್ರಕ್ಕೆ ಬಂದಿರುವ ಅವರು, ಇಲ್ಲಿಯವರೆಗೆ ನನಗೆ ಮಲಗಲು ಒಂದು ಚಾಪೆಯೂ ದೊರಕಿಲ್ಲ. ನನ್ನೊಂದಿಗೆ ಇದ್ದ ಮತ್ತೋರ್ವ ನಿರಾಶ್ರಿತ ನೀಡಿದ ಚಾಪೆಯಲ್ಲಿ ನಾನಿಂದು ಮಲಗುತ್ತಿದ್ದೇನೆ. ತೊಡಲು ಒಂದಷ್ಟು ಬಟ್ಟೆ ನೀಡಲು ಕೇಳಿದರೂ, ಅದನ್ನು ತನಗೆ ಒದಗಿಸಿಲ್ಲ. ಹೊದೆಯುವ ಕಂಬಳಿಯೂ ತನಗೆ ದೊರಕಿಲ್ಲವೆಂದು ಅತೀವ ಬೇಸರ ವ್ಯಕ್ತಪಡಿಸಿದರು. ಅಧಿಕಾರಿಗಳ ಬಳಿ ಕೇಳಿದರೆ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ, ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲಾಧಿಕಾರಿಗಳು ಮಾಡಿದ ಆದೇಶಕ್ಕೇ ಬೆಲೆ ಇಲ್ಲವೆಂದು ವಾಮನ ನಾಯ್ಕ ಬೇಸರ ವ್ಯಕ್ತಪಡಿಸಿದರು. 

ಜಿಲ್ಲಾಧಿಕಾರಿಗಳು ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿ ಹಿಂತೆರಳುತ್ತಿರುವಂತೆಯೆ ಕೇಂದ್ರದಲ್ಲಿರುವ ಅಧಿಕಾರಿಗಳು, ಸಿಬ್ಬಂದಿಗಳು ಸಂತ್ರಸ್ತರ ಬಗ್ಗೆ ನಿರ್ಲಕ್ಷ್ಯ ಧೋರಣೆ ಪ್ರದರ್ಶಿಸುತ್ತಲೇ ಇದ್ದಾರೆ. ಊಟ, ಉಪಹಾರವೂ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಗ್ರಾಮಗಳ ಪರಿಶೀಲನೆ ಅಗತ್ಯ

ಪ್ರಾಕೃತಿಕ ವಿಕೋಪದಿಂದ 2ನೇ ಮೊಣ್ಣಂಗೇರಿಯಲ್ಲಿ ಬೆಟ್ಟಗಳು ಕುಸಿದು ಗ್ರಾಮಕ್ಕೆ ತೆರಳುವ ಹಾದಿ ಇಲ್ಲದಂತಾಗಿದೆ. ಗ್ರಾಮದ ಶಾಲೆಯ ಬಳಿಯ ರಸ್ತೆ  1 ಕಿ.ಮೀ. ನಷ್ಟು ಉದ್ದಕ್ಕೆ ನೂರೈವತ್ತು ಅಡಿಗಳಷ್ಟು ಆಳಕ್ಕೆ ಕುಸಿದು ಹೋಗಿದ್ದು, ಮತ್ತೆಂದಿಗೂ ರಸ್ತೆ ಮಾಡಲು ಸಾಧ್ಯವಾಗದ ಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಪ್ರತಿ ಗ್ರಾಮ ಗ್ರಾಮಗಳಿಗೆ ತೆರಳಿ ಪ್ರತಿ ಮನೆಯನ್ನು ಪರಿಶೀಲಿಸಿ ಅಗತ್ಯ ನೆರವನ್ನು ಒದಗಿಸುವ ಅಗತ್ಯವಿದೆ. ತಪ್ಪಿದಲ್ಲಿ ಕೆಳಹಂತದ ಅಧಿಕಾರಿಗಳು ಹಿರಿಯ ಆಧಿಕಾರಿಗಳ ಹಾದಿ ತಪ್ಪಿಸುವ ಸಾಧ್ಯತೆ ಇದೆ ಎಂದು ವಾಮನ ನಾಯ್ಕ ಅಭಿಪ್ರಾಯಪಟ್ಟರು.

ಅನಾಹುತಕ್ಕೆ ನಿರಂತರ ಮಳೆಯೇ ಕಾರಣ: ಗ್ರಾಮ, ಗ್ರಾಮಗಳಲ್ಲಿ ಗುಡ್ಡ ಕುಸಿದು ಇಷ್ಟೊಂದು ಅನಾಹುತಗಳು ಸಂಭವಿಸಲು ಬಿಡುವಿಲ್ಲದೆ ನಿರಂತರವಾಗಿ ಸುರಿದ ಧಾರಾಕಾರ ಮಳೆಯೇ ಕಾರಣ ಹೊರತು ಹೋಂ ಸ್ಟೇ, ರೆಸಾರ್ಟ್‍ಗಳ ನಿರ್ಮಾಣ ಅಲ್ಲವೆಂದು ಹೇಳಿದರು. 1963 ನೇ ಇಸವಿಯಿಂದ ನಾನು ಎರಡನೇ ಮೊಣ್ಣಂಗೇರಿ ಗ್ರಾಮದಲ್ಲಿ ವಾಸಿಸುತ್ತಿದ್ದು, ಇಷ್ಟೊಂದು ಪ್ರಮಾಣದ ಮಳೆ ಎಂದಿಗೂ ಸುರಿದಿರಲಿಲ್ಲ ಎಂದು ವಾಮನ ನಾಯ್ಕ ಅನುಭವ ಹಂಚಿಕೊಂಡರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X