Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಶ್ವ ಶೂಟಿಂಗ್ ಚಾಂಪಿಯನ್‌ಶಿಪ್: ಓಂ...

ವಿಶ್ವ ಶೂಟಿಂಗ್ ಚಾಂಪಿಯನ್‌ಶಿಪ್: ಓಂ ಪ್ರಕಾಶ್‌ಗೆ ಚಿನ್ನ

ವಾರ್ತಾಭಾರತಿವಾರ್ತಾಭಾರತಿ4 Sept 2018 11:49 PM IST
share
ವಿಶ್ವ ಶೂಟಿಂಗ್ ಚಾಂಪಿಯನ್‌ಶಿಪ್: ಓಂ ಪ್ರಕಾಶ್‌ಗೆ ಚಿನ್ನ

ಚಾಂಗ್ವಾನ್(ದಕ್ಷಿಣ ಕೊರಿಯಾ), ಸೆ.4: ಶೂಟರ್ ಓಂ ಪ್ರಕಾಶ್ ಮಿಥರ್ವಾಲ್ ವಿಶ್ವ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಗೆದ್ದುಕೊಟ್ಟಿದ್ದಾರೆ.

 ಇಲ್ಲಿ ಮಂಗಳವಾರ ನಡೆದ 50 ಮೀ. ಪಿಸ್ತೂಲ್ ಇವೆಂಟ್‌ನಲ್ಲಿ 23ರ ಹರೆಯದ ಓಂ ಪ್ರಕಾಶ್ ಒಟ್ಟು 564 ಅಂಕ ಗಳಿಸುವುದರೊಂದಿಗೆ ಚಿನ್ನದ ಪದಕ ತನ್ನದಾಗಿಸಿಕೊಂಡರು. ಓಂ ಪ್ರಕಾಶ್ ಈ ವರ್ಷಾರಂಭದಲ್ಲಿ ಗೋಲ್ಡ್‌ಕೋಸ್ಟ್‌ನಲ್ಲಿ ನಡೆದಿದ್ದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ 10 ಮೀ. ಏರ್ ಪಿಸ್ತೂಲ್ ಹಾಗೂ 50 ಮೀ. ಪಿಸ್ತೂಲ್ ಸ್ಪರ್ಧೆಗಳಲ್ಲಿ ಕಂಚಿನ ಪದಕ ಜಯಿಸಿದ್ದಾರೆ.

ಓಂ ಪ್ರಕಾಶ್ ಸರ್ಬಿಯದ ಡಮಿರ್ ಮಿಕೆಕ್(562) ಹಾಗೂ ದ.ಕೊರಿಯಾದ ಡೆಮಿಯುಂಗ್ ಲೀ(560)ರನ್ನು ಸೋಲಿಸಿ ಚಿನ್ನದ ಪದಕ ಜಯಿಸಿದ್ದಾರೆ. ಹಿರಿಯ ಶೂಟರ್ ಜಿತು ರಾಯ್ ಫೈನಲ್‌ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ್ದು 552 ಅಂಕ ಗಳಿಸಿ 17ನೇ ಸ್ಥಾನ ಪಡೆದಿದ್ದಾರೆ.

ಯುವ ಶೂಟರ್ ಓಂ ಪ್ರಕಾಶ್ ಸಾಧನೆಗೆ ಕೇಂದ್ರ ಕ್ರೀಡಾಸಚಿವ ರಾಜ್ಯವರ್ಧನ್ ರಾಥೋಡ್ ಅಭಿನಂದನೆ ಸಲ್ಲಿಸಿದ್ದಾರೆ.

‘‘ಕೊರಿಯಾದಲ್ಲಿ ವಿಶ್ವ ಶೂಟಿಂಗ್ ಚಾಂಪಿಯನ್‌ಶಿಪ್‌ನ ಪುರುಷರ 50 ಮೀ.ಪಿಸ್ತೂಲ್ ಇವೆಂಟ್‌ನಲ್ಲಿ ಚಿನ್ನ ಜಯಿಸಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ವರ್ಷ ಸ್ಥಿರ ಪ್ರದರ್ಶನ ನೀಡಿರುವ ಪ್ರಕಾಶ್‌ಗೆ ಅಭಿನಂದನೆ ಸಲ್ಲಿಸುವೆ’’ ಎಂದು ರಾಥೋಡ್ ಟ್ವೀಟ್ ಮಾಡಿದ್ದಾರೆ.

50 ಮೀ. ಪಿಸ್ತೂಲ್ ಸ್ಪರ್ಧೆಯ ಟೀಮ್ ವಿಭಾಗದಲ್ಲಿ ಮಿಥರ್ವಾಲ್, ರಾಯ್ ಹಾಗೂ ಮನ್‌ಜಿತ್ ಒಟ್ಟು 1,658 ಅಂಕ ಗಳಿಸುವ ಮೂಲಕ 5ನೇ ಸ್ಥಾನ ಪಡೆದಿದ್ದಾರೆ. ವೈಯಕ್ತಿಕ ವಿಭಾಗದಲ್ಲಿ ಫೈನಲ್‌ಗೆ ತಲುಪಲು ವಿಫಲವಾಗಿರುವ ಮಂಜಿತ್ 56ನೇ ಸ್ಥಾನ ಪಡೆದಿದ್ದಾರೆ.

ಇಲ್ಲಿ ನಡೆಯುತ್ತಿರುವ ಶೂಟಿಂಗ್ ಚಾಂಪಿಯನ್‌ಶಿಪ್ 2020ರ ಒಲಿಂಪಿಕ್ಸ್‌ಗೆ ಮೊದಲ ಅರ್ಹತಾ ಸ್ಪರ್ಧೆಯಾಗಿದೆ. 50 ಮೀ.ಪಿಸ್ತೂಲ್ ಸ್ಪರ್ಧೆಯು ಗೇಮ್ಸ್ ರೋಸ್ಟರ್‌ನಲ್ಲಿ ಇಲ್ಲದ ಕಾರಣ ಕೋಟಾ ಸ್ಥಾನಗಳನ್ನು ನೀಡಲಾಗಿಲ್ಲ.

ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ಎದುರು ನೋಡುತ್ತಿದ್ದ ಮಹಿಳಾ ಶೂಟರ್‌ಗಳಾದ ಮನು ಭಾಕರ್ ಹಾಗೂ ಹೀನಾ ಸಿಧು 10 ಮೀ. ಏರ್ ಪಿಸ್ತೂಲ್ ಇವೆಂಟ್‌ನಲ್ಲಿ ವಿಫಲರಾಗಿದ್ದಾರೆ.

ಏಶ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲವಾಗಿದ್ದ 16ರ ಹರೆಯದ ಮನು ಭಾಕರ್ 574 ಅಂಕ ಗಳಿಸಿ 13ನೇ ಸ್ಥಾನ ಪಡೆದಿದ್ದಾರೆ. ಸಿಂಧು 571 ಅಂಕ ಗಳಿಸಿ 29ನೇ ಸ್ಥಾನ ಗಳಿಸಿದ್ದಾರೆ.

ಮನು, ಹೀನಾ ಹಾಗೂ ಶ್ವೇತಾ ಸಿಂಗ್ ಅವರನ್ನೊಳಗೊಂಡ ಮಹಿಳಾ ಶೂಟಿಂಗ್ ತಂಡ ಒಟ್ಟು 1,713 ಅಂಕ ಗಳಿಸಿ 4ನೇ ಸ್ಥಾನ ಗಳಿಸಿದೆ.

ಸೋಮವಾರ ಅಂಜುಮ್ ವೌದ್ಗಿಲ್ ಹಾಗೂ ಅಪೂರ್ವಿ ಚಾಂಡೇಲಾ ಮಹಿಳೆಯರ 10 ಮೀ. ಏರ್ ರೈಫಲ್ ಇವೆಂಟ್‌ನಲ್ಲಿ ಕ್ರಮವಾಗಿ ಬೆಳ್ಳಿ ಹಾಗೂ ನಾಲ್ಕನೇ ಸ್ಥಾನ ಪಡೆಯುವುದರೊಂದಿಗೆ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X