Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾಮೀನಿನಲ್ಲಿ ಹೊರಬಂದ ಅಜ್ಮೀರ್ ದರ್ಗಾ...

ಜಾಮೀನಿನಲ್ಲಿ ಹೊರಬಂದ ಅಜ್ಮೀರ್ ದರ್ಗಾ ಸ್ಫೋಟ ಪ್ರಕರಣದ ದೋಷಿಗೆ ಹೂಹಾರದ ಸ್ವಾಗತ!

ಬಿಜೆಪಿ, ವಿಹಿಂಪ ಕಾರ್ಯಕರ್ತರಿಂದ ಸಂಭ್ರಮಾಚರಣೆ

ವಾರ್ತಾಭಾರತಿವಾರ್ತಾಭಾರತಿ5 Sept 2018 6:12 PM IST
share
ಜಾಮೀನಿನಲ್ಲಿ ಹೊರಬಂದ ಅಜ್ಮೀರ್ ದರ್ಗಾ ಸ್ಫೋಟ ಪ್ರಕರಣದ ದೋಷಿಗೆ ಹೂಹಾರದ ಸ್ವಾಗತ!

ಸೂರತ್, ಸೆ.5: ಹನ್ನೊಂದು ವರ್ಷಗಳ ಹಿಂದೆ, 2007ರಲ್ಲಿ ನಡೆದ ಅಜ್ಮೀರ್ ದರ್ಗಾ ಸ್ಫೋಟ ಪ್ರಕರಣದಲ್ಲಿನ ಶಾಮೀಲಾತಿಗಾಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಇಬ್ಬರಲ್ಲಿ ಒಬ್ಬನಾಗಿರುವ ಭವೇಶ್ ಪಟೇಲ್ ಎರಡು ದಿನಗಳ ಹಿಂದೆ ಜಾಮೀನಿನ ಮೇಲೆ ಹೊರ ಬಂದು  ಭರೂಚ್ ನಲ್ಲಿರುವ ತನ್ನ ಮನೆಗೆ ಬಂದಾಗ  ಆತನಿಗೆ ಭವ್ಯ ಸ್ವಾಗತ ದೊರಕಿದೆ. ಬಿಜೆಪಿ ಮತ್ತು ವಿಹಿಂಪ ಪದಾಧಿಕಾರಿಗಳು ಸೇರಿ ಹಲವಾರು ಮಂದಿ ಈ ಸಂದರ್ಭ ಹಾಜರಿದ್ದರು.

ಆಗಸ್ಟ್ 2017ರಲ್ಲಿ ಪಟೇಲ್ (40) ಹಾಗೂ ಅಜ್ಮೀರ್ ನ ದೇವೇಂದ್ರ ಗುಪ್ತಾ (42) ಎಂಬಿಬ್ಬರಿಗೆ ಜೈಪುರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇಬ್ಬರಿಗೂ ರಾಜಸ್ಥಾನ ಹೈಕೋರ್ಟ್ ಕಳೆದ ವಾರ ಜಾಮೀನು ನೀಡಿತ್ತು.  ಅವರನ್ನು ಸಾಂದರ್ಭಿಕ ಸಾಕ್ಷ್ಯ ಹಾಗೂ  ಇತರ ಸಾಧ್ಯತೆಗಳ ಆಧಾರದಲ್ಲಿ ದೋಷಿಗಳೆಂದು ಘೋಷಿಸಲಾಗಿತ್ತು ಎಂದು ಅವರ ವಕೀಲರು ವಾದಿಸಿದ್ದರು.

ರವಿವಾರ ಪಟೇಲ್  ಭರೂಚ್ ರೈಲು ನಿಲ್ದಾಣದಲ್ಲಿ ಬಂದಿಳಿದಾಗ  ದೊಡ್ಡ ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಕಾವಿಧಾರಿಯಾಗಿದ್ದ ಆತ ತನ್ನನ್ನು ಸ್ವಾಮಿ ಮುಕ್ತಾನಂದ ಎಂದು ಕರೆದುಕೊಂಡಿದ್ದಾನಲ್ಲದೆ ದಂಡಿಯಾಬಜಾರ್ ಪ್ರದೇಶದಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನದಿಂದ ಹಾಥಿಖಾನದಲ್ಲಿರುವ ತನ್ನ ನಿವಾಸದ ತನಕ ಮೆರವಣಿಗೆಯಲ್ಲಿ ಸಾಗಿದ್ದ.

ದಾರಿಯುದ್ದಕ್ಕೂ ಜನರು ಆತನನ್ನು ತಮ್ಮ ಹೆಗಲಲ್ಲಿ ಕೂರಿಸಿದ್ದರಲ್ಲದೆ ಆತನಿಗೆ ಹೂವಿನ ಮಳೆಗರೆದಿದ್ದರು ಕೆಲವು ಕಡೆ ಪಟಾಕಿಗಳನ್ನೂ ಸಿಡಿಸಲಾಯಿತಲ್ಲದೆ, ಡಿಜೆ ಸಂಗೀತವೂ ಇತ್ತು.

ಬಿಜೆಪಿ ನಾಯಕ ಹಾಗೂ ಭರೂಚ್ ಮುನಿಸಿಪಾಲಿಟಿ  ಅಧ್ಯಕ್ಷ ಸುರ್ಭಿಬೆನ್ ತಮಕುವಾಲ, ಕೌನ್ಸಿಲರ್ ಮಾರುತಿ ಸಿನ್ಹ ಹಾಗೂ ಕೆಲ ಆರೆಸ್ಸೆಸ್ ಸದಸ್ಯರೂ ಹಾಜರಿದ್ದರು. ಭವೇಶ್ ಪಟೇಲ್ ಹಾಗೂ ದೇವೇಂದ್ರ ಗುಪ್ತಾ ಇಬ್ಬರೂ ಮಾಜಿ ಆರೆಸ್ಸೆಸ್ ಕಾರ್ಯಕರ್ತರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X