Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನಾಲ್ಕೇ ತಿಂಗಳು ತರಬೇತಿ ಪಡೆದು ಏಶ್ಯನ್...

ನಾಲ್ಕೇ ತಿಂಗಳು ತರಬೇತಿ ಪಡೆದು ಏಶ್ಯನ್ ಗೇಮ್ಸ್ ನಲ್ಲಿ ಚಿನ್ನ ಗೆದ್ದ ವಿಸ್ಮಯ!

ವಾರ್ತಾಭಾರತಿವಾರ್ತಾಭಾರತಿ5 Sept 2018 11:59 PM IST
share
ನಾಲ್ಕೇ ತಿಂಗಳು ತರಬೇತಿ ಪಡೆದು ಏಶ್ಯನ್ ಗೇಮ್ಸ್ ನಲ್ಲಿ ಚಿನ್ನ ಗೆದ್ದ ವಿಸ್ಮಯ!

ಹೊಸದಿಲ್ಲಿ, ಸೆ.5: ಇಂಡೋನೇಶ್ಯಾದಲ್ಲಿ ರವಿವಾರ ಕೊನೆಗೊಂಡ ಏಶ್ಯನ್ ಗೇಮ್ಸ್‌ನಲ್ಲಿ ಭಾರತದ ಅಥ್ಲೀಟ್‌ಗಳು ಅಮೋಘ ಪ್ರದರ್ಶನ ನೀಡಿದ್ದಾರೆ. 22ರ ಹರೆಯದ ಕೇರಳದ ಅಥ್ಲೀಟ್ ವಿ.ಕೆ. ವಿಸ್ಮಯ ಸಾಧನೆ ನಿಜಕ್ಕೂ ವಿಸ್ಮಯವಾಗಿದೆ.

ಕೋಚ್ ಗಲಿನಾ ಬುಖಾರಿಯಾರೊಂದಿಗೆ ಕೇವಲ ನಾಲ್ಕು ತಿಂಗಳು ತರಬೇತಿ ಪಡೆದಿದ್ದ ವಿಸ್ಮಯ 4x 400 ಮೀ. ಮಹಿಳೆಯರ ರಿಲೇ ತಂಡದಲ್ಲಿ ಭಾಗವಹಿಸಿ ಭಾರತ ಏಶ್ಯನ್ ಗೇಮ್ಸ್ ನಲ್ಲಿ ಸತತ 5ನೇ ಬಾರಿ ಚಿನ್ನ ಜಯಿಸಿ ಅಜೇಯ ದಾಖಲೆ ಕಾಯ್ದುಕೊಳ್ಳಲು ನೆರವಾಗಿದ್ದಾರೆ.

ಭಾರತ ರಿಲೇ ತಂಡದಲ್ಲಿದ್ದ ಹಿಮಾ ದಾಸ್, ಎಂ.ಆರ್.ಪೂವಮ್ಮ ಹಾಗೂ ಸರಿತಾಬೆನ್ ಗಾಯಕ್ವಾಡ್ ತನ್ನ ಮೊದಲ ಅಂತರ್‌ರಾಷ್ಟ್ರೀಯ ಕೂಟದಲ್ಲಿ ವಿಸ್ಮಯ ನೀಡಿದ್ದ ಪ್ರದರ್ಶನ ನೋಡಿ ಬೆರಗಾಗಿದ್ದಾರೆ.

ಕಣ್ಣೂರಿನ ಓಟಗಾರ್ತಿ ವಿಸ್ಮಯ ಆ.24 ರಂದು ಜಕಾರ್ತದಲ್ಲಿ ನಡೆದ ಆಯ್ಕೆ ಟ್ರಯಲ್ಸ್‌ನಲ್ಲಿ ಜಿಸ್ನಾ ಮ್ಯಾಥ್ಯೂ ಹಾಗೂ ವಿಜಯಾ ಕುಮಾರಿ ಅವರನ್ನು ಹಿಂದಿಕ್ಕಿ ಭಾರತದ ಮಹಿಳೆಯರ ರಿಲೇ ತಂಡಕ್ಕೆ ನಾಲ್ಕನೇ ಸದಸ್ಯೆಯಾಗಿ ಆಯ್ಕೆಯಾಗಿದ್ದರು.

ವಿಸ್ಮಯ ಏಶ್ಯನ್ ಗೇಮ್ಸ್‌ಗಿಂತ ಮೊದಲು ಯಾವುದೇ ಸೀನಿಯರ್ ವಿಭಾಗದ ಸ್ಪರ್ಧೆಯಲ್ಲಿ ಭಾಗವಹಿಸಿರಲಿಲ್ಲ. ನೇಶನ್ಸ್, ಫೆಡರೇಶನ್ ಕಪ್ ಹಾಗೂ ಅಂತರ್‌ರಾಜ್ಯ ಕ್ರೀಡಾಕೂಟದಲ್ಲೂ ಭಾಗವಹಿಸಿರಲಿಲ್ಲ. ಈ ವರ್ಷದ ಎಪ್ರಿಲ್‌ನಲ್ಲಿ ಮೊದಲ ಬಾರಿ ರಾಷ್ಟ್ರೀಯ ಶಿಬಿರವನ್ನು ಸೇರಿದ್ದರು.

 ನವೆಂಬರ್‌ನಲ್ಲಿ ವಿಜಯವಾಡದಲ್ಲಿ ನಡೆದ ಅಂತರ್ ವಿವಿ ಚಾಂಪಿಯನ್‌ಶಿಪ್‌ನಲ್ಲಿ 400 ಮೀ.ಓಟದಲ್ಲಿ 53.63 ಸೆಕೆಂಡ್‌ನಲ್ಲಿ ಗುರಿ ತಲುಪಿ ಬೆಳ್ಳಿ ಜಯಿಸಿದ್ದರು. ಈ ಮೂಲಕ ಭಾರತದ ಅಥ್ಲೆಟಿಕ್ಸ್ ಫೆಡರೇಶನ್(ಎಎಫ್‌ಐ) ಗಮನ ಸೆಳೆದಿದ್ದರು. ವಿಜಯವಾಡದಲ್ಲಿ ನೀಡಿದ್ದ ಪ್ರದರ್ಶನವನ್ನು ಆಧರಿಸಿ ಎಎಫ್‌ಐ ವಿಸ್ಮಯಗೆ ರಾಷ್ಟ್ರೀಯ ಶಿಬಿರದಲ್ಲಿ ಭಾಗವಹಿಸಲು ನೇರ ಪ್ರವೇಶ ನೀಡಿತ್ತು. 72ರ ಹರೆಯದ ಕೋಚ್ ಗಲಿನಾ ಅವರು ವಿಸ್ಮಯರನ್ನು ಗೇಮ್ಸ್‌ಗೆ ಸಜ್ಜು ಗೊಳಿಸಿದರು.

​

share
ವಾರ್ತಾಭಾರತಿ
ವಾರ್ತಾಭಾರತಿ
Next Story
X