Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆತಂಕವಾದಿ ಸಂಘಟನೆಗಳಿಗೆ ಕೇಂದ್ರ ಸರಕಾರ...

ಆತಂಕವಾದಿ ಸಂಘಟನೆಗಳಿಗೆ ಕೇಂದ್ರ ಸರಕಾರ ಬೆಂಬಲ: ಉಮರ್ ಖಾಲಿದ್

ವಾರ್ತಾಭಾರತಿವಾರ್ತಾಭಾರತಿ6 Sept 2018 9:02 PM IST
share
ಆತಂಕವಾದಿ ಸಂಘಟನೆಗಳಿಗೆ ಕೇಂದ್ರ ಸರಕಾರ ಬೆಂಬಲ: ಉಮರ್ ಖಾಲಿದ್

ಬೆಂಗಳೂರು, ಸೆ.6: ದೇಶದಲ್ಲಿ ವಿವಿಧ ಹೆಸರುಗಳ ಮೂಲಕ ಆತಂಕವಾದಿ ಸಂಘಟನೆಗಳು ಕೆಲಸ ಮಾಡುತ್ತಿದ್ದು, ಅದಕ್ಕೆ ಕೇಂದ್ರ ಸರಕಾರ ನೇರವಾಗಿ ಬೆಂಬಲ ನೀಡುತ್ತಿದೆ ಎಂದು ಜೆಎನ್‌ಯು ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಹೇಳಿದ್ದಾರೆ.

ಶುಕ್ರವಾರ ನಗರದ ದಾರು ಸಲಾಮ್ ಬಿಲ್ಡಿಂಗ್‌ನಲ್ಲಿ ವೆಲ್‌ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಏರ್ಪಡಿಸಿದ್ದ ‘ಪ್ರಜಾಪ್ರಭುತ್ವ ಉಳಿವಿಗಾಗಿ’ ಎಂಬ ವಿಷಯ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದಲ್ಲಿಂದು ಸಂವಿಧಾನದ ಮೂಲ ಆಶಯಗಳನ್ನು ಧಿಕ್ಕರಿಸಿ, ಆರೆಸ್ಸೆಸ್‌ನ ರಾಷ್ಟ್ರೀಯವಾದವನ್ನು ಹೇರಲು ಮುಂದಾಗುತ್ತಿದ್ದಾರೆ. ಆದರೆ, ನಮಗೆ ಇಂದು ಬೇಕಿರುವುದು ನೈಜ ರಾಷ್ಟ್ರವಾದ ಎಂದು ತಿಳಿಸಿದರು.

ದೇಶದಲ್ಲಿ ಅಧಿಕಾರದಲ್ಲಿರುವ ಸರಕಾರ ಪ್ರಜಾಪ್ರಭುತ್ವವವನ್ನೇ ಬುಡಮೇಲು ಮಾಡುವ ಪ್ರಯತ್ನ ಮಾಡಲಾಗುತ್ತಿದೆ. ದೇಶದ ಯುವ ಜನತೆ ಉದ್ಯೋಗದ ಬಗ್ಗೆ ರೈತರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಪ್ರಶ್ನೆ ಮಾಡಿದರೆ, ವ್ಯವಸ್ಥಿತವಾಗಿ ಜನರನ್ನು ದಿಕ್ಕು ತಪ್ಪಿಸುವ ಉದ್ದೇಶದಿಂದ ಅನಗತ್ಯವಾಗಿ ಗೋ ರಕ್ಷಣೆಯನ್ನು ತರಲಾಗುತ್ತಿದೆ. ಈ ಮೂಲಕ ಇಡೀ ಚರ್ಚೆಯ ದಿಕ್ಕನ್ನು ತಪ್ಪಿಸಲಾಗುತ್ತಿದೆ ಎಂದು ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ರೈತರ, ಮಹಿಳೆಯರ, ಯುವಜನತೆಯ, ಕೂಲಿ ಕಾರ್ಮಿಕರ, ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಎಲ್ಲಿಯೂ ಚಕಾರ ಎತ್ತುತ್ತಿಲ್ಲ. ಅಲ್ಲದೆ, ಇಂದು ಅಮೆರಿಕದ ಕರೆನ್ಸಿ ಮುಂದೆ ಭಾರತದ ಕರೆನ್ಸಿ ಇಳಿಮುಖವಾಗುತ್ತಿದೆ. ಜಿಡಿಪಿ ಮೌಲ್ಯ ಇಳಿಕೆಯಾಗಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗುತ್ತಿದೆ. ಆದರೂ, ಅನಗತ್ಯ ವಿಷಯಗಳನ್ನು ಚರ್ಚೆಯ ಮುನ್ನೆಲೆಗೆ ತರುವ ಮೂಲಕ ಭಾರತ ಅಭಿವೃದ್ಧಿಯಾಗುತ್ತಿದೆ ಎಂದು ನಂಬಿಸಲಾಗುತ್ತಿದೆ ಎಂದು ಹೇಳಿದರು.

ಮತಹಾಕಿ ಗೆಲ್ಲಿಸಿದ ಜನರಿಗೆ ಸುಳ್ಳು ಆಶ್ವಾಸನೆಗಳನ್ನು ನೀಡುವ ಮೂಲಕ ಕಾರ್ಪೋರೇಟ್ ಕಂಪೆನಿಗಳು, ಅದಾನಿ, ಅಂಬಾನಿಯನ್ನು ಉದ್ಧಾರ ಮಾಡುತ್ತಿದ್ದಾರೆ. ಅಲ್ಲದೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಅವರ ಸಂಬಂಧಿಕರು ಅಭಿವೃದ್ಧಿಯಾಗುತ್ತಿದ್ದಾರೆ. ಆದರೂ, ರಾಷ್ಟ್ರೀಯತೆ ಬಗ್ಗೆ ಪಾಠ ಮಾಡುತ್ತಾರೆ. ಪ್ರಧಾನಿಗೆ ರಾಷ್ಟ್ರದ ಬಗ್ಗೆ, ಇಲ್ಲಿನ ಜನರ ಬಗ್ಗೆ ಗೌರವವಿದ್ದರೆ ಮೊದಲು ಜನರ ಸಮಸ್ಯೆಗಳಿಗೆ ಸ್ಪಂದಿಸಲಿ ಎಂದು ಸವಾಲು ಹಾಕಿದರು.

ಬಿಜೆಪಿ ಅಧಿಕಾರದಲ್ಲಿರುವ ಉತ್ತರ ಪ್ರದೇಶದಲ್ಲಿ 60 ಸಹಾಯಕರ ಹುದ್ದೆಗೆ ಸಾವಿರ ಸಾವಿರ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅದರಲ್ಲಿಯೂ ಪಿಎಚ್‌ಡಿ, ಉನ್ನತ ಶಿಕ್ಷಣ ಪಡೆದವರೇ ಅಧಿಕವಾಗಿದ್ದಾರೆ. ಇದು ಅಭಿವೃದ್ಧಿಯ ಉದಾಹರಣೆಯಾಗಿದೆ. ಮತ್ತೊಂದು ಕಡೆ ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ, ದಬ್ಬಾಳಿಕೆಯಲ್ಲಿ ಬಿಜೆಪಿ ಅಧಿಕಾರವಿರುವ ರಾಜ್ಯಗಳಲ್ಲಿಯೇ ಹೆಚ್ಚಿದೆ. ಇದು ಬಿಜೆಪಿ ಸರಕಾರದ ಅಧಿಕಾರದ ಅವಧಿಯ ನೈಜ ಮುಖವಾಡಗಳು ಎಂದು ಅವರು ತಿಳಿಸಿದರು.

ಮುಂದಿನ ಎಂಟು ತಿಂಗಳಲ್ಲಿ ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಈ ಚುನಾವಣೆಯು ಆರೆಸ್ಸೆಸ್-ಬಿಜೆಪಿ-ಮೋದಿ ಹಾಗೂ ರೈತರು-ಕೃಷಿ, ಕೂಲಿಕಾರ್ಮಿಕರು-ವಿದ್ಯಾರ್ಥಿ ಮತ್ತು ಯುವಜನರು-ಮಹಿಳೆಯರ ನಡುವಿನ ಸಂಘರ್ಷವಾಗಬೇಕಿದೆ. ಇಲ್ಲದಿದ್ದರೆ, ಮತ್ತೊಮ್ಮೆ ದೇಶದಲ್ಲಿ ಕೋಮುವಾದಿ ಶಕ್ತಿಗಳು ಅಧಿಕಾರ ಹಿಡಿಯಲಿದ್ದಾರೆ. ಅದಕ್ಕೆ ಅವಕಾಶ ನೀಡದಂತೆ ಪ್ರತಿಯೊಂದು ಸಮಸ್ಯೆ ಹಾಗೂ ಹಿಂದಿನ ಚುನಾವಣೆಯಲ್ಲಿ ಮೋದಿ ದೇಶದ ಜನರಿಗೆ ನೀಡಿದ ಆಶ್ವಾಸನೆಗಳನ್ನು ಮನದಟ್ಟು ಮಾಡಿಕೊಡಬೇಕಿದೆ ಎಂದು ಅವರು ಕರೆ ನೀಡಿದರು.

ಶಾಸಕ ಹಾಗೂ ದಲಿತ ನಾಯಕ ಜಿಗ್ನೇಶ್ ಮೇವಾನಿ ಮಾತನಾಡಿ, ದೇಶದಲ್ಲಿಂದು ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರಕಾರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಇಲ್ಲವಾಗಿಸುವ ಹುನ್ನಾರ ಮಾಡುತ್ತಿದ್ದು, ಮನುಸ್ಮೃತಿಯನ್ನು ರಾಷ್ಟ್ರಗ್ರಂಥ ಎಂದು ಬಿಂಬಿಸಲು ಮುಂದಾಗಿದೆ. ಅಂಬೇಡ್ಕರ್ ಬರೆದಿರುವ ಸಂವಿಧಾನವನ್ನು ನಾಶ ಮಾಡಲು ಮುಂದಾಗಿದ್ದಾರೆ ಎಂದು ಹೇಳಿದರು.

ಲೋಕಸಭಾ ಚುನಾವಣೆಗಳು ಹತ್ತಿರವಾಗುತ್ತಿವೆ. ಇಂತಹ ಸಂದರ್ಭದಲ್ಲಿ ಬಿಜೆಪಿ ಹಾಗೂ ಆರೆಸ್ಸೆಸ್ ರಾಮಮಂದಿರ ನಿರ್ಮಾಣ, ಕಾಶ್ಮೀರ ವಿವಾದ ಹಾಗೂ ಪಾಕಿಸ್ತಾನವನ್ನು ಬೈಯುವುದು ಸೇರಿದಂತೆ ಹಲವು ಕೋಮುವಾದಿ ವಿಧಾನಗಳನ್ನು ಅನುಸರಿಸಲು ಅಗತ್ಯ ತಯಾರಿ ಮಾಡಿಕೊಂಡಿದೆ. ಅಲ್ಲದೆ, ದೇಶದ ಬಹುಸಂಖ್ಯಾತರನ್ನು ಮರುಳು ಮಾಡುವ ನಿಟ್ಟಿನಲ್ಲಿ ದೌರ್ಜನ್ಯ ತಡೆ ಕಾಯ್ದೆಯನ್ನು ನಿರ್ನಾಮ ಮಾಡುವ ನಾಟಕವಾಡುತ್ತಿದೆ ಎಂದರು.

ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಸಿಗದ ರೀತಿಯಲ್ಲಿ ದಲಿತರು, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಒಟ್ಟಾಗಿ ಕೆಲಸ ಮಾಡಬೇಕು. ಮತಗಳು ವಿಭಜನೆಯಾಗದಂತೆ ಹಾಗೂ ಕೋಮುವಾದಿ ಶಕ್ತಿಗಳಿಗೆ ಸಿಗದಂತೆ ಮಾಡಲು ತಂತ್ರಗಳನ್ನು ಅನುಸರಿಸಬೇಕು. ಆ ಮೂಲಕ ಬಿಜೆಪಿಯನ್ನು ಅಧಿಕಾರದಿಂದ ದೂರವಿಟ್ಟರೆ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಯುತ್ತದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ನೂರ್ ಶ್ರೀಧರ್, ಲೋಕೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ದೇಶದಲ್ಲಿ ನಮಗೆ ನ್ಯಾಯ ಬೇಕಾದರೆ ನ್ಯಾಯಾಂಗದ ಎದುರು ನಿಲ್ಲುತ್ತೇವೆ. ಆದರೆ, ಇಂದು ನ್ಯಾಯಾಧೀಶರೇ ಜನರ ಎದುರು ನಿಲ್ಲುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಪ್ರಜಾತಂತ್ರ ವ್ಯವಸ್ಥೆಯನ್ನು ಉಳಿಯುವುದಾದರೂ ಹೇಗೆ ಎಂಬ ಅನುಮಾನ ಕಾಡುತ್ತಿದೆ. ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಇಂತಹ ಘಟನೆ ಭಾರತದಲ್ಲಿ ನಡೆದಿರುವುದು.

-ಜಿಗ್ನೇಶ್ ಮೇವಾನಿ, ಶಾಸಕ ಹಾಗೂ ದಲಿತ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X